ಜೀವಜಲ ಸಂವರ್ಧನೆಗೆ ಜಲಾಮೃತ


Team Udayavani, May 28, 2019, 2:07 PM IST

Udayavani Kannada Newspaper
ಹುಬ್ಬಳ್ಳಿ: ಜಲ ಸಾಕ್ಷರತೆ, ಜೀವಜಲ ಸಂರಕ್ಷಣೆ, ಹಸಿರೀಕರಣ ಅಭಿಯಾನಕ್ಕೆ ರಾಜ್ಯ ಸರ್ಕಾರ ‘ಜಲಾಮೃತ’ ಯೋಜನೆಯೊಂದಿಗೆ ರಾಜ್ಯಾದ್ಯಂತ ಗ್ರಾಮೀಣ ಭಾಗದಲ್ಲಿ ಜಲಮೂಲ ಸಂರಕ್ಷಣೆ-ಸಂವರ್ಧನೆಗೆ ಕ್ರಾಂತಿಕಾರ ಹೆಜ್ಜೆ ಇರಿಸಿದೆ. ಜಲಾಮೃತ ಯೋಜನೆ ಅಡಿಯಲ್ಲಿಯೇ 2019ನ್ನು ಜಲ ವರ್ಷವಾಗಿ ಆಚರಿಸಲು ಅದರ ಮೂಲಕ ವಿವಿಧ ಚಟುವಟಿಕೆಗಳಿಗೆ ಸರ್ಕಾರ ಮುಂದಾಗಿದೆ.

ಕರ್ನಾಟಕ ದೇಶದಲ್ಲೇ ಎರಡನೇ ಅತಿ ಹೆಚ್ಚಿನ ಬರಪೀಡಿತ ರಾಜ್ಯವಾಗಿದೆ. 2011ರಲ್ಲಿ ಸುಮಾರು 157 ತಾಲೂಕುಗಳ ಬರ ಪೀಡಿತವಾಗಿದ್ದರೆ, 2018-19ರಲ್ಲಿ ಸುಮಾರು 160ಕ್ಕೂ ಹೆಚ್ಚು ತಾಲೂಕುಗಳು ಬರದ ಛಾಯೆಗೆ ಸಿಲುಕಿವೆ. ಜನ-ಜಾನುವಾರು ನೀರು, ಮೇವಿಲ್ಲದೆ ಪರದಾಡುವಂತಾಗಿದೆ. ರಾಜ್ಯದಲ್ಲಿ ಇಂದಿಗೂ ಶೇ.30ರಷ್ಟು ಭೂಮಿ ಮಾತ್ರ ನೀರಾವರಿಗೆ ಒಳಪಟ್ಟಿದ್ದರೆ, ಶೇ.70ರಷ್ಟು ಭೂಮಿ ಮಳೆಯಾಶ್ರಿತ ಕೃಷಿ ಅವಲಂಬಿಸಿದೆ. 2011ರಿಂದ 2018ರವರೆಗೆ ರಾಜ್ಯದ ಅನೇಕ ಕಡೆಗಳಲ್ಲಿ ಬರದ ಛಾಯೆ ಮುಂದುವರಿದಿದೆ. ಬರಕ್ಕೆ ಪರಿಹಾರ ರೂಪವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ‘ಜಲಾಮೃತ’ ಯೋಜನೆ ರೂಪಿಸಿದೆ. ಇದರಡಿಯಲ್ಲಿಯೇ 2019ನೇ ವರ್ಷವನ್ನು ಜಲ ವರ್ಷವಾಗಿ ಆಚರಿಸಲಾಗುತ್ತಿದೆ. ಜಲಾಮೃತ ಯೋಜನೆಯಡಿ ಜಲ ಆಯವ್ಯಯ, ಮಳೆ ನೀರು ಕೊಯ್ಲು, ಜಲ ಸಂರಕ್ಷಣೆ ಕುರಿತಾಗಿ ಸೆಟ್ಲೈಟ್ ಇಮೇಜ್‌, ಸ್ಥಳಾಕೃತಿ, ಭೂ ವೈಜ್ಞಾನಿಕ ದತ್ತಾಂಶಗಳ ಸಂಗ್ರಹಣೆ, ಪ್ರತಿ ಗ್ರಾಪಂನಲ್ಲಿ ಜಲ ಆಯವ್ಯಯ ತಯಾರು, ಅನುಷ್ಠಾನದ ಮಹದಾಸೆಯನ್ನು ಇದು ಹೊಂದಿದೆ.

12 ಸಾವಿರ ಚೆಕ್‌ ಡ್ಯಾಂ: ಜಲ ಸಾಕ್ಷರತೆ, ಜಲಮೂಲಗಳ ನವೀಕರಣ, ಹೊಸ ಜಲಮೂಲಗಳ ಸೃಷ್ಟಿ ಹಾಗೂ ಜಲಾನಯನ ಪ್ರದೇಶ ಅಭಿವೃದ್ಧಿ ಹಾಗೂ ಹಸಿರೀಕರಣ ಪ್ರಮುಖ ನಾಲ್ಕು ಅಂಶಗಳನ್ನು ಯೋಜನೆ ಹೊಂದಿದೆ. ವಿಶ್ವವಿದ್ಯಾಲಯ, ಶಿಕ್ಷಣ ಇಲಾಖೆ, ನೀರು ಮತ್ತು ಮಣ್ಣು ನಿರ್ವಹಣೆ ಸಂಸ್ಥೆ (ವಾಲ್ಮಿ), ಸರ್ಕಾರೇತರ ಸಂಸ್ಥೆಗಳ, ಸರ್ಕಾರಿ ಇಲಾಖೆಗಳ ಮೂಲಕ ಗ್ರಾಮ, ತಾಲೂಕು ಹಾಗೂ ಜಿಪಂ ಸದಸ್ಯರಿಗೆ, ವಿದ್ಯಾರ್ಥಿಗಳಿಗೆ ಜಲ ಸಾಕ್ಷರತೆ ಜಾಗೃತಿ ಕಾರ್ಯಕ್ರಮ ಕೈಗೊಳ್ಳುವುದಾಗಿದೆ. ನರೇಗಾ, ಕಾರ್ಪೊರೇಟ್ ವಲಯದ ದೇಣಿಗೆ, ಸಮುದಾಯ ದೇಣಿಗೆ, ಸರ್ಕಾರದ ವಂತಿಗೆ ಇನ್ನಿತರ ಮೂಲಗಳ ಮೂಲಕ ಜಲಮೂಲಗಳ ನವೀಕರಣ ಕಾರ್ಯ ಕೈಗೊಳ್ಳಲಾಗುತ್ತದೆ.

ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್‌ ಅಪ್ಲಿಕೇಶನ್ಸ್‌ ಸೆಂಟರ್‌(ಕೆಎಸ್‌ಆರ್‌ಎಸಿ) ಮತ್ತು ಇತರೆ ವೈಜ್ಞಾನಿಕ ರೀತಿಯಲ್ಲಿ ಹೊಸ ಜಲಮೂಲಗಳ ನಿರ್ಮಾಣ ಹಾಗೂ ಜಲಾನಯನ ಪ್ರದೇಶ ಅಭಿವೃದ್ಧಿ ಕುರಿತು ಪರಿಶೀಲಿಸಿ ಎಲ್ಲಿ ಸಾಧ್ಯವೋ ಅಲ್ಲಿ ಚೆಕ್‌ಡ್ಯಾಂಗಳು, ವೆಂಟೆಂಡ್‌ ಡ್ಯಾಂಗಳು, ಸಣ್ಣ ಜಲಾಶಯಗಳು ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. ನರೇಗಾ ಅಡಿಯಲ್ಲಿ ಜಲ ಮೂಲಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. 2019-20 ಮತ್ತು 2020-21ರ ವೇಳೆಗೆ ರಾಜ್ಯದಲ್ಲಿ ಒಟ್ಟು 12,000 ಚೆಕ್‌ಡ್ಯಾಂಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ.

ಜಲ ಮೂಲಗಳ ಸಂರಕ್ಷಣೆ ಹಾಗೂ ಸಂವರ್ಧನೆಗೆ ಹಸಿರೀಕರಣ ಅವಶ್ಯವಾಗಿದೆ. ಅರಣ್ಯ, ವನ್ಯಜೀವಿ ಮತ್ತು ಪರಿಸರ ಇಲಾಖೆ ಈಗಾಗಲೇ ಅರಣ್ಯೀಕರಣ ಚಟುವಟಿಕೆ ಕೈಗೊಳ್ಳುತ್ತಿದ್ದು, ನರೇಗಾ ಅಡಿಯಲ್ಲಿಯೂ ಅರಣ್ಯೀಕರಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ವಿವಿಧ ಇಲಾಖೆ, ಎನ್‌ಜಿಒ, ಕಾರ್ಪೊರೇಟ್ ಸಹಕಾರದೊಂದಿಗೆ ಒಂದು ಜಿಲ್ಲೆಯಲ್ಲಿ ಕನಿಷ್ಟ 1 ಕೋಟಿ ಸಸಿ ನೆಡುವ ಅಭಿಯಾನ ಕೈಗೊಳ್ಳಲು ಯೋಜಿಸಲಾಗಿದೆ.

ಜಲ ವರ್ಷ: 2019ನ್ನು ಜಲ ವರ್ಷವಾಗಿ ಆಚರಿಸಲಾಗುತ್ತಿದ್ದು, ಇದರ ಅಡಿಯಲ್ಲಿ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಎಲ್ಲ ವಿಶ್ವವಿದ್ಯಾಲಯಗಳು, ಶಾಲಾ-ಕಾಲೇಜುಗಳು, ಎನ್‌ಜಿಒ, ಸ್ವಯಂ ಸೇವಾ ಸಂಘಟನೆಗಳು, ಸ್ವಾಯತ್ತ ಸಂಸ್ಥೆಗಳು, ಖಾಸಗಿ ವಲಯದಿಂದ ವಿವಿಧ ಚಟುವಟಿಕೆ ಆಯೋಜಿಸಲಾಗುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳು ಜಲವರ್ಷ ಆಚರಣೆ ಹಾಗೂ ಚಟುವಟಿಕೆಗೆ ತಮ್ಮ ಇಲಾಖೆಯಡಿ ಅಗತ್ಯ ಬಜೆಟ್ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

•ಅಮರೇಗೌಡ ಗೋನವಾರ

 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.