ನಿರ್ಭಯ ವಾಹನಗಳಿಗೆ ಎಸ್‌ಪಿ ಕೃಷ್ಣ ಕಾಂತ ಚಾಲನೆ

112 ಸಂಖ್ಯೆಗೆ ಕರೆ ಮಾಡಿದರೆ ಆಗಮಿಸಿ ನೆರವು ನೀಡಲಿದ್ದಾರೆ ಪೊಲೀಸ್‌ ಸಿಬ್ಬಂದಿ

Team Udayavani, Dec 3, 2020, 1:38 PM IST

ನಿರ್ಭಯ ವಾಹನಗಳಿಗೆ ಎಸ್‌ಪಿ ಕೃಷ್ಣ ಕಾಂತ ಚಾಲನೆ

ಧಾರವಾಡ: ಒಂದೇ ಭಾರತ, ಒಂದೇ ತುರ್ತು ಕರೆ ಅಡಿಯಲ್ಲಿ ಉಚಿತ ದೂರವಾಣಿ ಸಂಖ್ಯೆ112 ಸಹಾಯವಾಣಿಗೆ ಹಾಗೂ ನಿರ್ಭಯವಾಹನಗಳಿಗೆ ನಗರದ ಎಸ್‌ಪಿ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಯಿತು.

ಚಾಲನೆ ನೀಡಿದ ಎಸ್‌ಪಿ ಪಿ.ಕೃಷ್ಣಕಾಂತ ಮಾತನಾಡಿ, ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ನಿರ್ಭಯ ಯೋಜನೆಯಡಿ ಜಿಲ್ಲೆಯ ಪ್ರತಿ ಪೊಲೀಸ್‌ ಠಾಣೆಗೆ ಒಂದರಂತೆ ಒಂಬತ್ತು ನಿರ್ಭಯ ದ್ವಿ-ಚಕ್ರ ವಾಹನಗಳನ್ನು ಸರಕಾರದಿಂದ ನೀಡಲಾಗಿದೆ. ತುರ್ತು ಸಹಾಯವಾಣಿ 112 ಸಂಖ್ಯೆಗೆ ಕರೆ ಮಾಡಿದರೆ ಸಮೀಪದಲ್ಲಿರುವ ತುರ್ತು ಸ್ಪಂದನವಾಹನದಲ್ಲಿ ಪೊಲೀಸ್‌ ಸಿಬ್ಬಂದಿ ಆಗಮಿಸಿ ಅಗತ್ಯ ನೆರವು ನೀಡಲಿದ್ದಾರೆ ಎಂದರು.

ಜಿಲ್ಲೆಯ ಎಲ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ತುರ್ತು ಸಂದರ್ಭಗಳಲ್ಲಿ ಹಾಗೂ ವಿಶೇಷವಾಗಿ ಮಹಿಳೆಯರ ರಕ್ಷಣೆ ಮತ್ತು ಅವರ ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ ನೀಡಲು ಜಿಲ್ಲಾ ಪೊಲೀಸ್‌ಘಟಕದಿಂದ ಪೊಲೀಸ್‌ ಠಾಣೆಗಳಿಗೆ ನಿರ್ಭಯ ವಾಹನಗಳನ್ನು ಪೂರೈಸಲಾಗಿದೆ. ಅಪಘಾತ,ಗಲಭೆ ಸೇರಿದಂತೆ ಯಾವುದೇ ದುರ್ಘ‌ಟನೆ ಜರುಗಿದಾಗ 112 ಸಹಾಯವಾಣಿಗೆ ಕರೆ ಮಾಡಿದರೆ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಅಗತ್ಯ ನೆರವು, ಪ್ರಾಥಮಿಕ ಚಿಕಿತ್ಸೆ, ರಕ್ಷಣೆ ನೀಡಲುಅನುಕೂಲವಾಗುವ ಆಧುನಿಕ ಸೌಲಭ್ಯ ಹೊಂದಿರುವ ನಾಲ್ಕು ಚಕ್ರದ (ಇನ್ನೋವಾ ಕ್ರಿಸ್ಟಾ) ತುರ್ತು ಸ್ಪಂದನ ವಾಹನಗಳನ್ನು ಸಾರ್ವಜನಿಕ ಸೇವೆಗೆ ಸಿದ್ಧಗೊಳಿಸಲಾಗಿದೆ. ಸಹಾಯವಾಣಿಮೂಲಕ ಇದರಲ್ಲಿ ದಾಖಲಾಗುವ ಕರೆಗಳಿಗ ಅನುಗುಣವಾಗಿ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಒಂದೇ ಭಾರತ ಒಂದೇ ತುರ್ತು ಕರೆ ಅಡಿಯಲ್ಲಿ 112 ಸಹಾಯವಾಣಿ ರೂಪಿಸಿದ್ದು,ಇದಕ್ಕೆ ಜಿಲ್ಲೆಯಲ್ಲೂ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರು ಪೊಲೀಸ್‌, ಅಗ್ನಿ, ವಿಪತ್ತು, ಮಹಿಳಾ ಸಹಾಯ ಇನ್ನಿತರೆ ಯಾವುದೇ ತುರ್ತು ಪರಿಸ್ಥಿತಿಯಲ್ಲಿ 24*7 ತುರ್ತು ಸಹಾಯವಾಣಿ 100 ಸಂಖ್ಯೆಯ ಬದಲಾಗಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತ್ವರಿತಪರಿಹಾರ ಪಡೆಯಬೇಕು. ಸಮಸ್ಯೆಗಳನ್ನಾಧರಿಸಿಅದನ್ನು ಸಂಬಂಧಿ ಸಿದ ಇಲಾಖೆಗೆ ವರ್ಗಾಯಿಸಿ ಅಲ್ಲಿಂದ ಅಗತ್ಯವಿರುವ ಸಹಾಯ, ಸಮಸ್ಯೆಗೆ ಪರಿಹಾರ ನೀಡಲಾಗುತ್ತದೆ ಎಂದರು.

ಧಾರವಾಡ ಗ್ರಾಮೀಣ ಡಿವೈಎಸ್‌ಪಿ ಎಂ.ಬಿ. ಸಂಕದ, ಡಿಸಿಆರ್‌ಬಿಯ ಡಿವೈಎಸ್‌ಪಿ ರಾಮನಗೌಡ ಹಟ್ಟಿ, ಶಿವಾನಂದ ಸೇರಿದಂತೆ ವಿವಿಧ ಪೊಲೀಸ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.