ನೀರಸಾಗರ ಹೂಳೆತ್ತಿದ್ದು ಒಂದೇ ದಿನ!

|ಮಳೆಗಾಲದ ಹೊಸ್ತಿಲಲ್ಲಿ ಕಾಮಗಾರಿ ಆರಂಭ |ಚಾಲನೆ ಕೊಟ್ಟ ದಿನಕ್ಕೇ ಸೀಮಿತವಾಗೋಯ್ತು ಕೆಲಸ

Team Udayavani, Jul 3, 2019, 9:23 AM IST

hubali-tdy-1..

ಹುಬ್ಬಳ್ಳಿ: ಉದ್ಘಾಟನಾ ದಿನ ಹೂಳೆತ್ತಿರುವುದು ಇಷ್ಟು. (ಚಿತ್ರ: ಯಶವಂತ ಮಾನೆ)

ಹುಬ್ಬಳ್ಳಿ: ಒಂದೂವರೆ ದಶಕದ ನಂತರ ನೀರಸಾಗರ ಕೆರೆ ಹೂಳೆತ್ತುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗಿತ್ತಾದರೂ, ಮಳೆ ಪರಿಣಾಮ ಅನಿವಾರ್ಯವಾಗಿ ಹೂಳೆತ್ತುವ ಕಾರ್ಯ ನಿಲ್ಲಿಸಬೇಕಾಗಿದೆ.

ಕಳೆದ ಮೂರ್‍ನಾಲ್ಕು ವರ್ಷಗಳಿಂದ ಬರದ ಸ್ಥಿತಿ ಇದೆ. ನೀರಸಾಗರ ಸಂಪೂರ್ಣವಾಗಿ ಬತ್ತಿ ಹೋಗಿ ಮೂರು ವರ್ಷವಾಗಿದೆ. ಬೇಸಿಗೆ ವೇಳೆಗೆ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದರೆ ನಿರೀಕ್ಷಿತ ಗುರಿ ತಲುಪಿ, ಹೆಚ್ಚು ನೀರು ಸಂಗ್ರಹಕ್ಕೆ ಅನುವು ಮಾಡಿಕೊಡಬಹುದಾಗಿತ್ತು. ಆದರೆ, ಮಳೆಗಾಲ ಆರಂಭವಾಗುತ್ತಿದೆ ಎಂದು ತಿಳಿದ ನಂತರ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದು, ಚಾಲನೆ ನೀಡಿದ್ದಷ್ಟೇ ಸಂತಸ ಎಂಬಂತಾಗಿದೆ.

ಟಾಟಾ ಹಿಟಾಚಿ ಕಂಪನಿ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆ(ಸಿಎಸ್‌ಆರ್‌)ಯಡಿ 8 ಕೋಟಿ ವೆಚ್ಚದಲ್ಲಿ ನೀರಸಾಗರ ಕೆರೆ ಹೂಳೆತ್ತಲು ಮುಂದಾಗಿದೆ. ಮೂರು ತಿಂಗಳಲ್ಲಿ 12 ಲಕ್ಷ ಕ್ಯೂಬಿಕ್‌ ಮೀಟರ್‌ ಹೂಳೆತ್ತುವ ಗುರಿ ಹೊಂದಲಾಗಿತ್ತು. ಇದೀಗ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ನೀರಸಾಗರಕ್ಕೆ ನೀರು ಹರಿದು ಬರುತ್ತಿರುವುದರಿಂದ ಹೂಳೆತ್ತುವ ಕಾರ್ಯ ಸ್ಥಗಿತಗೊಳಿಸಬೇಕಾಗಿದೆ.

ಕಂಪನಿ ಕಾರ್ಯಕ್ಕೆ ಶ್ಲಾಘನೆ: 2003ರಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಸುಮಾರು 7.72 ಲಕ್ಷ ಕ್ಯೂಬಿಕ್‌ ಮೀಟರ್‌ ಹೂಳೆತ್ತುವ ಕೆಲಸ ಅಂದಿನ ಸರಕಾರದಿಂದ ಆಗಿತ್ತು. 2009ರಲ್ಲಿ ಕೆರೆ ಭರ್ತಿಯಾಗಿತ್ತು. ನಂತರ ಮಳೆ ಕೊರತೆಯಿಂದ ನೀರಸಾಗರದಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗಿರಲಿಲ್ಲ. ಕಳೆದ ಐದಾರು ವರ್ಷಗಳ ಹಿಂದೆ ಹೂಳೆತ್ತುವ ಕುರಿತು ಚರ್ಚೆಗಳು ಶುರುವಾಗಿದ್ದವು. ಆದರೆ ಈ ಬಗ್ಗೆ ಯಾವ ಸರಕಾರಗಳು ತಲೆಕೆಡಿಸಿಕೊಂಡಿರಲಿಲ್ಲ. ಸರಕಾರ ಮಾಡಬೇಕಾದ ಕಾರ್ಯವನ್ನು ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದ ಸಾರ್ವಜನಿಕರು, 15 ವರ್ಷಗಳ ನಂತರ ಕೆರೆ ಹೂಳೆತ್ತುವ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಆದರೆ ಯೋಜನೆಗೆ ಆಯ್ದುಕೊಂಡ ಸಮಯ ಸೂಕ್ತವಲ್ಲದ ಹಿನ್ನೆಲೆಯಲ್ಲಿ ಹೂಳೆತ್ತುವ ಕೆಲಸ ಸ್ಥಗಿತಗೊಂಡಿದ್ದು, ಕಾಮಗಾರಿ ಮುಂದುವರಿಯುತ್ತಾ ಎನ್ನುವ ಪ್ರಶ್ನೆ ಸ್ಥಳೀಯರಲ್ಲಿ ಮೂಡಿದೆ.

ಮಣ್ಣು ಪಡೆಯಲು ಮನಸ್ಸು ಮಾಡದ ರೈತರು!:

ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿದ ದಿನ ಸುಮಾರು ಆರು ಟ್ರಿಪ್‌ ಮಣ್ಣನ್ನು ತೆಗೆಯಲಾಗಿದೆ. ಅಷ್ಟಕ್ಕೇ ಕಾಮಗಾರಿ ಸೀಮಿತವಾಗಿದೆ. ಕಲ್ಲು ಮಿಶ್ರಿತ ಮಣ್ಣು ಬಂದಿದ್ದರಿಂದ ಯಾವ ರೈತರೂ ಇದನ್ನು ತೆಗೆದುಕೊಂಡು ಹೋಗಲು ಮನಸ್ಸು ಮಾಡಲಿಲ್ಲ. ಹೀಗಾಗಿ ಈ ಮಣ್ಣನ್ನು ಕೆರೆ ಮುಂಭಾಗದಲ್ಲಿರುವ ಜಲ ಮಂಡಳಿ ಜಾಗದಲ್ಲಿ ಸುರಿಯಲಾಗಿದೆ. ಸ್ಥಳೀಯ ಶಾಸಕ ಸಿ.ಎಂ. ನಿಂಬಣ್ಣವರ ಆವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಮೂಲಕ ಕಂಪನಿಯ ಅಧಿಕಾರಿಗಳ ಮೇಲೆ ಪ್ರಭಾವ ಬಳಸಿ ಕೆರೆ ಹಿಂಭಾಗದಲ್ಲಿನ ಮಣ್ಣನ್ನು ತೆಗೆದು ಅದನ್ನು ರಸ್ತೆ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ.

ನೀರಸಾಗರ ಕೆರೆಯ ಹೂಳು ತುಂಬಾ ಫಲವತ್ತತೆಯಿಂದ ಕೂಡಿದೆ. ಬೇಸಿಗೆಯಲ್ಲಿ ಹೂಳೆತ್ತುವ ಕೆಲಸ ಆರಂಭಿಸಿದ್ದರೆ ರೈತರು ಹೂಳಿನ ಮಣ್ಣನ್ನು ನಮ್ಮ ಸ್ವಂತ ಖರ್ಚಿನಲ್ಲಿ ಹೊಲಗಳಿಗೆ ಸಾಗಿಸುತ್ತಿದ್ದರು. ಹೂಳೆತ್ತುವ ಕಾರ್ಯ ಸದ್ಯಕ್ಕೆ ಕೈಗೂಡುವ ಸಾಧ್ಯತೆ ಇಲ್ಲ ಎಂದೆನಿಸುತ್ತಿದೆ.• ಫಕೀರಪ್ಪ ರೊಟ್ಟಿ,ರೈತ

• ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.