ನೀರಸಾಗರ ಹೂಳೆತ್ತಿದ್ದು ಒಂದೇ ದಿನ!
|ಮಳೆಗಾಲದ ಹೊಸ್ತಿಲಲ್ಲಿ ಕಾಮಗಾರಿ ಆರಂಭ |ಚಾಲನೆ ಕೊಟ್ಟ ದಿನಕ್ಕೇ ಸೀಮಿತವಾಗೋಯ್ತು ಕೆಲಸ
Team Udayavani, Jul 3, 2019, 9:23 AM IST
ಹುಬ್ಬಳ್ಳಿ: ಉದ್ಘಾಟನಾ ದಿನ ಹೂಳೆತ್ತಿರುವುದು ಇಷ್ಟು. (ಚಿತ್ರ: ಯಶವಂತ ಮಾನೆ)
ಹುಬ್ಬಳ್ಳಿ: ಒಂದೂವರೆ ದಶಕದ ನಂತರ ನೀರಸಾಗರ ಕೆರೆ ಹೂಳೆತ್ತುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗಿತ್ತಾದರೂ, ಮಳೆ ಪರಿಣಾಮ ಅನಿವಾರ್ಯವಾಗಿ ಹೂಳೆತ್ತುವ ಕಾರ್ಯ ನಿಲ್ಲಿಸಬೇಕಾಗಿದೆ.
ಕಳೆದ ಮೂರ್ನಾಲ್ಕು ವರ್ಷಗಳಿಂದ ಬರದ ಸ್ಥಿತಿ ಇದೆ. ನೀರಸಾಗರ ಸಂಪೂರ್ಣವಾಗಿ ಬತ್ತಿ ಹೋಗಿ ಮೂರು ವರ್ಷವಾಗಿದೆ. ಬೇಸಿಗೆ ವೇಳೆಗೆ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದರೆ ನಿರೀಕ್ಷಿತ ಗುರಿ ತಲುಪಿ, ಹೆಚ್ಚು ನೀರು ಸಂಗ್ರಹಕ್ಕೆ ಅನುವು ಮಾಡಿಕೊಡಬಹುದಾಗಿತ್ತು. ಆದರೆ, ಮಳೆಗಾಲ ಆರಂಭವಾಗುತ್ತಿದೆ ಎಂದು ತಿಳಿದ ನಂತರ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದು, ಚಾಲನೆ ನೀಡಿದ್ದಷ್ಟೇ ಸಂತಸ ಎಂಬಂತಾಗಿದೆ.
ಟಾಟಾ ಹಿಟಾಚಿ ಕಂಪನಿ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆ(ಸಿಎಸ್ಆರ್)ಯಡಿ 8 ಕೋಟಿ ವೆಚ್ಚದಲ್ಲಿ ನೀರಸಾಗರ ಕೆರೆ ಹೂಳೆತ್ತಲು ಮುಂದಾಗಿದೆ. ಮೂರು ತಿಂಗಳಲ್ಲಿ 12 ಲಕ್ಷ ಕ್ಯೂಬಿಕ್ ಮೀಟರ್ ಹೂಳೆತ್ತುವ ಗುರಿ ಹೊಂದಲಾಗಿತ್ತು. ಇದೀಗ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ನೀರಸಾಗರಕ್ಕೆ ನೀರು ಹರಿದು ಬರುತ್ತಿರುವುದರಿಂದ ಹೂಳೆತ್ತುವ ಕಾರ್ಯ ಸ್ಥಗಿತಗೊಳಿಸಬೇಕಾಗಿದೆ.
ಕಂಪನಿ ಕಾರ್ಯಕ್ಕೆ ಶ್ಲಾಘನೆ: 2003ರಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಸುಮಾರು 7.72 ಲಕ್ಷ ಕ್ಯೂಬಿಕ್ ಮೀಟರ್ ಹೂಳೆತ್ತುವ ಕೆಲಸ ಅಂದಿನ ಸರಕಾರದಿಂದ ಆಗಿತ್ತು. 2009ರಲ್ಲಿ ಕೆರೆ ಭರ್ತಿಯಾಗಿತ್ತು. ನಂತರ ಮಳೆ ಕೊರತೆಯಿಂದ ನೀರಸಾಗರದಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗಿರಲಿಲ್ಲ. ಕಳೆದ ಐದಾರು ವರ್ಷಗಳ ಹಿಂದೆ ಹೂಳೆತ್ತುವ ಕುರಿತು ಚರ್ಚೆಗಳು ಶುರುವಾಗಿದ್ದವು. ಆದರೆ ಈ ಬಗ್ಗೆ ಯಾವ ಸರಕಾರಗಳು ತಲೆಕೆಡಿಸಿಕೊಂಡಿರಲಿಲ್ಲ. ಸರಕಾರ ಮಾಡಬೇಕಾದ ಕಾರ್ಯವನ್ನು ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದ ಸಾರ್ವಜನಿಕರು, 15 ವರ್ಷಗಳ ನಂತರ ಕೆರೆ ಹೂಳೆತ್ತುವ ಕೆಲಸಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಆದರೆ ಯೋಜನೆಗೆ ಆಯ್ದುಕೊಂಡ ಸಮಯ ಸೂಕ್ತವಲ್ಲದ ಹಿನ್ನೆಲೆಯಲ್ಲಿ ಹೂಳೆತ್ತುವ ಕೆಲಸ ಸ್ಥಗಿತಗೊಂಡಿದ್ದು, ಕಾಮಗಾರಿ ಮುಂದುವರಿಯುತ್ತಾ ಎನ್ನುವ ಪ್ರಶ್ನೆ ಸ್ಥಳೀಯರಲ್ಲಿ ಮೂಡಿದೆ.
ನೀರಸಾಗರ ಕೆರೆಯ ಹೂಳು ತುಂಬಾ ಫಲವತ್ತತೆಯಿಂದ ಕೂಡಿದೆ. ಬೇಸಿಗೆಯಲ್ಲಿ ಹೂಳೆತ್ತುವ ಕೆಲಸ ಆರಂಭಿಸಿದ್ದರೆ ರೈತರು ಹೂಳಿನ ಮಣ್ಣನ್ನು ನಮ್ಮ ಸ್ವಂತ ಖರ್ಚಿನಲ್ಲಿ ಹೊಲಗಳಿಗೆ ಸಾಗಿಸುತ್ತಿದ್ದರು. ಹೂಳೆತ್ತುವ ಕಾರ್ಯ ಸದ್ಯಕ್ಕೆ ಕೈಗೂಡುವ ಸಾಧ್ಯತೆ ಇಲ್ಲ ಎಂದೆನಿಸುತ್ತಿದೆ.• ಫಕೀರಪ್ಪ ರೊಟ್ಟಿ,ರೈತ
• ಹೇಮರಡ್ಡಿ ಸೈದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ