Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Team Udayavani, Mar 27, 2024, 6:51 PM IST
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ. ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಅವರೊಂದಿಗೆ ಮಾತನಾಡುವೆ. ಎಲ್ಲ ಸಮಾಜದ ಸ್ವಾಮೀಜಿಗಳು ನಮ್ಮೊಂದಿಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲ ಸ್ವಾಮೀಜಿಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದೇವೆ. ರಾಜ್ಯದ ಮಠಗಳು ಹಾಗೂ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಯಾವ ಕಾರಣಕ್ಕೆ ದಿಂಗಾಲೇಶ್ವರ ಶ್ರೀಗಳು ಮಾತನಾಡಿದ್ದಾರೆ ಎಂಬುವುದು ಗೊತ್ತಿಲ್ಲ. ಅವರ ಮತದೊಂದಿಗೆ 35 ವರ್ಷಗಳ ಸಂಬಂಧವಿದೆ. ಅವರಾಡಿದ ಮಾತುಗಳು ನಮಗೆ ಆಶೀರ್ವಾದ ಇದ್ದಂತೆ. ಈ ಕುರಿತು ಶ್ರೀಗಳೊಂದಿಗೆ ಮಾತನಾಡುವೆ ಎಂದರು.
ದೇವೇಗೌಡರಿಗೆ ರಾಜ್ಯದಲ್ಲಿ ಪ್ರಭಾವ ಇದೆ. 28 ಸ್ಥಾನ ಗೆಲ್ಲಲು ಸಹಕಾರ ಸಿಗಲಿದೆ. ತೇಜಸ್ವಿನಿಗೌಡ ಅವರಿಗೆ ಪಕ್ಷ ಸ್ಥಾನ ಮಾನ ನೀಡಿತ್ತು. ಈಗ ಅದರ ಋಣ ಈ ರೀತಿ ತೀರಿಸುತ್ತಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಇಡೀ ಜಗತ್ತು ಮೆಚ್ಚುತ್ತಿದೆ. ದೇಶದ ಜನರಿಗೆ ನೀಡಿರುವ ಯೋಜನೆಗಳು ಹಾಗೂ ರಾಜ್ಯದಲ್ಲಿ ನಮ್ಮ ಸರಕಾರದ ಸಾಧನೆಗಳು ನಮ್ಮ ಗೆಲುವಿಗೆ ಶ್ರೀರಕ್ಷೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ