ಅಣ್ಣಿಗೇರಿ ಪುರಸಭೆಗಿಲ್ಲ ಚುನಾವಣೆ
ಮೀಸಲಾತಿ ಕುರಿತು ಹೈಕೋರ್ಟ್ನಲ್ಲಿ ವಿಚಾರಣೆ
Team Udayavani, May 3, 2019, 9:55 AM IST
ಅಣ್ಣಿಗೇರಿ: ಇಲ್ಲಿನ ಪುರಸಭೆಯ 23 ವಾರ್ಡ್ಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯು ವಿಚಾರಣೆ ಹಂತದಲ್ಲಿ ಇರುವುದರಿಂದ ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿದ ಸ್ಥಳೀಯ ಸಂಸ್ಥೆಗಳಿಗೆ ಮೇ 29ರಂದು ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯಲ್ಲಿ ಅಣ್ಣಿಗೇರಿಯನ್ನು ಕೈ ಬಿಡಲಾಗಿದೆ.
ಅಣ್ಣಿಗೇರಿ ಪುರಸಭೆಯ 23 ವಾರ್ಡ್ಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶದನ್ವಯ ನಿಗದಿಪಡಿಸಿದ ಮೀಸಲಾತಿಗೆ ಏನಾದರೂ ಆಕ್ಷೇಪಣೆಗಳಿದ್ದರೆ ತಕರಾರು ಸಲ್ಲಿಸಲು ಜಿಲ್ಲಾಧಿಕಾರಿ ಸೂಚಿಸಿದ್ದರು. ನಂತರ ಮೀಸಲಾತಿಯನ್ನು ಮಾರ್ಪಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು.
ಆದರೆ ಈ ಕುರಿತು ಅಣ್ಣಿಗೇರಿ ಪುರಸಭೆ ಮಾಜಿ ಅಧ್ಯಕ್ಷೆ ರೂಪಾ ಶಿವಶಂಕರ ಕಲ್ಲೂರ, ಸದಸ್ಯ ಜಟ್ಟೆಪ್ಪ ಕಲ್ಲೊಡ್ಡರ, ನಾಗರಿಕರಾದ ರಾಜು ಹಳ್ಳಿಕೇರಿ ಹಾಗೂ ಮುತ್ತು ಸೂಡಿ ಅವರು ಆಕ್ಷೇಪ ವ್ಯಕ್ತಪಡಿಸಿ ಮೊದಲು ನಿಗದಿಪಡಿಸಿದ ಮೀಸಲಾತಿಗೆ ಯಾರೂ ಆಕ್ಷೇಪಣೆ ಸಲ್ಲಿಸದೇ ಇರುವಾಗ ಜಿಲ್ಲಾಡಳಿತ ಮೀಸಲಾತಿಯನ್ನು ಬದಲಾಯಿಸಿ ಆದೇಶ ಹೊರಡಿಸಿದ್ದು ಏಕೆ ಎಂದು ಪ್ರಶ್ನಿಸಿದರು. ರಾಜಕೀಯ ಒತ್ತಡಕ್ಕೆ ಮಣಿದು ಈ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ಆರೋಪಿಸಿದರು.
ಈ ಕುರಿತು ಜಿಲ್ಲಾಡಳಿತ ಸಮರ್ಪಕ ಮಾಹಿತಿ ನೀಡದೇ ಇರುವುದರಿಂದ ಅನಿವಾರ್ಯವಾಗಿ ತಾವು ಹೈಕೋರ್ಟ್ ಮೊರೆ ಹೋಗಬೇಕಾಯಿತು ಎಂದು ದೂರುದಾರರು ಹೇಳಿದ್ದಾರೆ. ಸದ್ಯ ಹೈಕೋರ್ಟ್ಗೆ ರಜಾ ಕಾಲ ಇರುವುದರಿಂದ ರಜೆ ಮುಗಿದ ನಂತರ ವಿಚಾರಣೆ ನಡೆದು ತೀರ್ಪು ಹೊರಬಂದ ನಂತರ ಅಣ್ಣಿಗೇರಿ ಪುರಸಭೆಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು