ಉದ್ಯಾನವನದತ್ತ ಆಳುವವರಿಗಿಲ್ಲ ಧ್ಯಾನ!

•ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ•ನವಲಗುಂದದಲ್ಲಿಲ್ಲ ಒಂದೇ ಒಂದು ಗಾರ್ಡನ್‌

Team Udayavani, Jun 14, 2019, 2:02 PM IST

Udayavani Kannada Newspaper

ನವಲಗುಂದ: ಪಟ್ಟಣದ ನೀಲಮ್ಮನ ಕೆರೆಯ ತಡೆಗೋಡೆ ಒಡೆದಿರುವುದು.

ನವಲಗುಂದ: ಹೋರಾಟಗಳ ಮೂಲಕವೇ ರಾಜ್ಯದಲ್ಲಿ ಚಿರಪರಿಚಿತವಾದ ನವಲಗುಂದ ಪಟ್ಟಣದಲ್ಲಿ ಹೆಸರಿಗೂ ಒಂದು ಉದ್ಯಾನವನವಿಲ್ಲ. ಸಾರ್ವಜನಿಕರ ವಾಯುವಿಹಾರಕ್ಕೆ ಅನುಕೂಲ ಮಾಡಬೇಕೆಂಬ ಚಿಂತನೆ ಯಾವ ಜನಪ್ರತಿನಿಧಿಗಳಿಗಾಗಲಿ, ಅಧಿಕಾರಿಗಳಿಗಾಗಲಿ ಇಲ್ಲದಿರುವುದು ವಿಷಾದಕರ ಸಂಗತಿಯಾಗಿದೆ.

ಇಂದು ವಾತಾವರಣ ಕಲುಷಿತಗೊಳ್ಳುತ್ತಿರುವುದರಿಂದ ಹಲವಾರು ರೋಗಗಳು ಮನುಷ್ಯನಿಗೆ ಅಂಟಿಕೊಳ್ಳುತ್ತಿವೆ. ಇದರಿಂದ ಹೊರಬರಲು, ಚಟುವಟಿಕೆಯಿಂದ ಇರಲು ಮಹಿಳೆಯರು, ವೃದ್ಧರು, ಮಕ್ಕಳು, ಸಾರ್ವಜನಿಕರಿಗೆ ವ್ಯಾಯಾಮ, ಯೋಗ, ವಾಯುವಿಹಾರದಂತಹ ದಿನನಿತ್ಯದ ಕಾಯಕ ಅವಶ್ಯ. ಆದರೆ ಪಟ್ಟಣದಲ್ಲಿ ಬೆಳಗ್ಗೆ, ಸಂಜೆ ವಾಯುವಿಹಾರಕ್ಕೆ ಒಂದು ಸುಸಜ್ಜಿತ ಉದ್ಯಾನವನ ಇಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆಳುವವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಪಟ್ಟಣದಲ್ಲಿ ಸುಮಾರು 30 ಸಾವಿರ ಜನಸಂಖ್ಯೆಯಿದೆ. ಇಷ್ಟಿದ್ದರೂ ಒಂದು ಉದ್ಯಾನವಿಲ್ಲ. ಹೀಗಾಗಿ ವಾಯುವಿಹಾರಕ್ಕಾಗಿ ಗ್ರಾಮೀಣ ಭಾಗದ ರಸ್ತೆಗಳನ್ನು ಹಿಡಿದು ಹೋಗುವ ಪರಿಸ್ಥಿತಿಯಿದೆ. ಅಲ್ಲಿ ಮುಂಜಾನೆ ಮತ್ತು ಸಂಜೆ ವ್ಯಾಯಾಮ ಮಾಡುತ್ತಿರುವ ದೃಶ್ಯ ಸರ್ವೇಸಾಮಾನ್ಯವಾಗಿದೆ.

ಇನ್ನು ಮಕ್ಕಳು ಮನೋರಂಜನೆ ಹಾಗೂ ಆಟೋಟದಿಂದ ವಂಚಿತರಾಗಿ ಮನೆ ಹಾಗೂ ಶಾಲೆ ಪ್ರಾಂಗಣದಲ್ಲಿಯೇ ತಮ್ಮ ಸಮಯ ಕಳೆಯುವಂತಾಗಿದೆ. ಉದ್ಯಾನ ಮಾಡಿ, ಮಕ್ಕಳ ಆಟೋಟ ಸಲಕರಣೆಗಳನ್ನು ಅಳವಡಿಸಿದ್ದರೆ ಬಿಡುವಿನ ಸಮಯದಲ್ಲಿ ಮಕ್ಕಳಿಗೆ ಅನುಕೂಲವಾಗುತ್ತಿತ್ತು.

ಇಚ್ಛಾಶಕ್ತಿ ಕೊರತೆಗೆ ಸಾಕ್ಷಿ: ನೀಲಮ್ಮನ ಕೆರೆ ದಂಡೆ ಗಾರ್ಡನ್‌ ಮಾಡಲು ಯೋಗ್ಯ ಸ್ಥಳವಾಗಿದೆ. ಆದರೆ ಪ್ರಸ್ತುತ ಕುಡುಕರ ಹಾವಳಿ ಎಲ್ಲೆ ಮೀರಿದೆ. ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳು ಬಿದ್ದಿವೆ. ಸಿಗರೇಟ್, ಗಾಂಜಾ ಸೇದುವವರ ಸಂಖ್ಯೆಯೂ ಇಲ್ಲಿ ಹೆಚ್ಚಾಗುತ್ತೇವೆ. ತಿಂದು ಬಿಸಾಕಿದ ಮೂಳೆಗಳು ಅಲ್ಲಲ್ಲಿ ಬಿದ್ದು ದುರ್ವಾಸನೆ ಬರುತ್ತಿರುವುದರಿಂದ ಮೂಗು ಮುಚ್ಚಿಕೊಂಡು ವಾಯುವಿಹಾರ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಈ ಹಿಂದೆ ಡಿಸಿ ಆಗಿದ್ದ ದರ್ಪಣ ಜೈನ ಅವರು ನೀಲಮ್ಮನ ಕೆರೆ ಅಭಿವೃದ್ಧಿಪಡಿಸಿ ಪಕ್ಕದ ಖುಲ್ಲಾ ಜಾಗೆಯನ್ನು ಉದ್ಯಾನವನ ಮಾಡಬೇಕೆಂಬ ಯೋಜನೆ ರೂಪಿಸಿದ್ದರು. ಆದರೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಪಟ್ಟಣವು ಉದ್ಯಾನವನದಿಂದ ವಂಚಿತವಾಗಿದೆ. ಈಗ ಪುರಸಭೆಯ ಹೊಸ ಆಡಳಿತ ಬರುತ್ತಿರುವುದರಿಂದ ಅವರ ಮುಂದೆ ಪಟ್ಟಣದ ಉದ್ಯಾನವನ, ಒಳಚರಂಡಿ ಯೋಜನೆ, ಕ್ರೀಡಾಂಗಣದಂತಹ ಅನೇಕ ಅಭಿವೃದ್ಧಿ ಕೆಲಸಗಳು ಇವೆ. ಅವುಗಳಿಗೆ ಹೆಚ್ಚಿನ ಒತ್ತು ನೀಡಿ ಕಾರ್ಯನಿರ್ವಹಿಸಬೇಕಾಗಿದೆ.

•ಪುಂಡಲೀಕ ಮುಧೋಳೆ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.