ಬೀದಿದೀಪ ನಿರ್ವಹಣೆಗೆ ಬರೋರಿಲ್ಲ!

| ಪಾಲಿಕೆ ಕಸರತ್ತಿಗೆ ದೊರೆಯದ ಫಲ | 5 ಬಾರಿ ಟೆಂಡರ್‌ ಕರೆದರೂ ಪ್ರಯೋಜನ ಶೂನ್ಯ

Team Udayavani, Aug 17, 2019, 9:17 AM IST

huballi-tdy-1

ಹುಬ್ಬಳ್ಳಿ: ಸ್ಮಾರ್ಟ್‌ಸಿಟಿ ಯೋಜನೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವಳಿ ನಗರದ ಬೀದಿದೀಪ ನಿರ್ವಹಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎನ್ನುವ ಪಾಲಿಕೆ ಕಸರತ್ತು ಫಲಿಸದಂತಾಗಿದೆ. ಕಳೆದ ಎಂಟು ತಿಂಗಳಲ್ಲಿ ಐದು ಬಾರಿ ಟೆಂಡರ್‌ ಕರೆದರು ಒಬ್ಬ ಗುತ್ತಿಗೆದಾರನೂ ಪಾಲ್ಗೊಳ್ಳುತ್ತಿಲ್ಲ.

ಪಾಲಿಕೆಗೆ ಬೀದಿದೀಪ ನಿರ್ವಹಣೆ ಸವಾಲಿನ ಕೆಲಸವಾಗಿದೆ. ಜನರ ದೂರುಗಳಿಗೆ ಸಕಾಲದಲ್ಲಿ ಪರಿಹಾರ ಕಲ್ಪಿಸುವ ಮೂಲಕ ಪರಿಣಾಮಕಾರಿ ಸೇವೆ ನೀಡಬೇಕು ಎನ್ನುವ ಕಾರಣಕ್ಕೆ ಪಾಲಿಕೆ ಅಧಿಕಾರಿಗಳು ಮೂರು ಪ್ಯಾಕೇಜ್‌ಗಳಿಗೆ ಇ-ಟೆಂಡರ್‌ ಕರೆದರೂ ಅರ್ಹ ಗುತ್ತಿಗೆದಾರರು ಪಾಲ್ಗೊಳ್ಳದಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಮೂರು ಪ್ಯಾಕೇಜ್‌ಗಳಲ್ಲಿ ಗುತ್ತಿಗೆ: ಬೀದಿ ದೀಪ ನಿರ್ವಹಣೆ ಕುರಿತು ದೂರುಗಳು, ಸಕಾಲಕ್ಕೆ ದುರಸ್ತಿಯಾಗದಿರುವ ಬಗ್ಗೆ ಜನರಲ್ಲಿ ಸಾಕಷ್ಟು ಅಸಮಾಧಾನಗಳಿವೆ. ಈ ಹಿನ್ನೆಲೆಯಲ್ಲಿ ಹಿಂದೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೂರು ಪ್ಯಾಕೇಜ್‌ಗಳಲ್ಲಿ ಗುತ್ತಿಗೆ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಮೂರು ಪ್ಯಾಕೇಜ್‌ಗಳಲ್ಲಿ ಟೆಂಡರ್‌ ಕರೆಯುವುದರಿಂದ ಸಮರ್ಪಕ ಮಾನವ ಸಂಪನ್ಮೂಲ, ಯಂತ್ರ, ವೃತ್ತಿಪರತೆ ಹೊಂದಿರುವ ಗುತ್ತಿಗೆದಾರರು ಪಾಲ್ಗೊಳ್ಳುತ್ತಾರೆ. ಇದರಿಂದ ಮಹಾನಗರ ಜನತೆಗೆ ಉತ್ತಮ ಸೇವೆ ಕೊಡಬಹುದು ಎಂಬುವುದು ಪಾಲಿಕೆ ಸದಸ್ಯರ ಹಾಗೂ ಅಧಿಕಾರಿಗಳ ಅಭಿಪ್ರಾಯವಾಗಿತ್ತು.

5 ಬಾರಿ ಟೆಂಡರ್‌: ಧಾರವಾಡ, ಹುಬ್ಬಳ್ಳಿ (ಉತ್ತರ) ಹಾಗೂ ಹುಬ್ಬಳ್ಳಿ (ದಕ್ಷಿಣ) ಮೂರು ಪ್ಯಾಕೇಜ್‌ಗಳಲ್ಲಿ ಒಟ್ಟು 3.91 ಕೋಟಿ ರೂ. ಮೊತ್ತದ ಟೆಂಡರ್‌ನ್ನು ಕಳೆದು ಎಂಟು ತಿಂಗಳಲ್ಲಿ 5 ಬಾರಿ ಕರೆಯಲಾಗಿದೆ. ಮೊದಲ ಬಾರಿ ಕರೆದ ಟೆಂಡರ್‌ನಲ್ಲಿ ಒಬ್ಬ ಗುತ್ತಿಗೆದಾರನೂ ಪಾಲ್ಗೊಂಡಿಲ್ಲ. ನಂತರದ 4 ಮರು ಅಲ್ಪಾವಧಿ ಟೆಂಡರ್‌ಗಳಲ್ಲಿ ಪಾಲ್ಗೊಂಡಿದ್ದ ಇಬ್ಬರು ಗುತ್ತಿಗೆದಾರರು ತಾಂತ್ರಿಕ ಬಿಡ್‌ ಹಂತದಲ್ಲಿ ಅನರ್ಹರಾಗಿದ್ದು, ಹಣಕಾಸು ಬಿಡ್‌ಗೆ ಯಾರೂ ಅರ್ಹತೆ ಪಡೆಯಲಿಲ್ಲ. ಹೀಗಾಗಿ ವಿವಿಧ ಮಹಾನಗರಗಳಲ್ಲಿ ಬೀದಿ ದೀಪ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರನ್ನು ಮನವೊಲಿಸುವ ಅನಿವಾರ್ಯತೆ ಪಾಲಿಕೆ ಅಧಿಕಾರಿಗಳಿಗೆ ಬಂದಿದೆ.

ಸ್ಥಳೀಯ ಗುತ್ತಿಗೆದಾರರ ವಿರೋಧ?: ಪ್ರಸ್ತುತ ಮಹಾನಗರ ಪಾಲಿಕೆಯ 12 ವಲಯಗಳಲ್ಲಿ ಪ್ರತ್ಯೇಕವಾಗಿ ಬೀದಿದೀಪ ನಿರ್ವಹಣೆಗೆ ಟೆಂಡರ್‌ ನೀಡಲಾಗಿದ್ದು, ಪ್ರತಿವರ್ಷ ಮಹಾನಗರ ಪಾಲಿಕೆ ಸುಮಾರು 3.20 ಕೋಟಿ ರೂ. ವ್ಯಯಿಸುತ್ತದೆ. ಕೆಲ ಗುತ್ತಿಗೆದಾರರು ಸಮರ್ಪಕವಾಗಿ ಕೆಲಸ ನಿರ್ವಹಿಸದ ಪರಿಣಾಮ ಮೂರು ಪ್ಯಾಕೇಜ್‌ಗಳಲ್ಲಿ ಗುತ್ತಿಗೆ ನೀಡುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ದೊಡ್ಡ ಮೊತ್ತದ ಟೆಂಡರ್‌ ಕರೆದರೆ ಸಣ್ಣಪುಟ್ಟ ಗುತ್ತಿಗೆದಾರರು ಭಾಗವಹಿಸುವುದಿಲ್ಲ. ಅವರ ಲಾಭಿಯೂ ನಡೆಯುವುದಿಲ್ಲ ಎನ್ನುವ ಪಾಲಿಕೆ ಅಧಿಕಾರಿಗಳ ಹಾಗೂ ಸದಸ್ಯರ ಚಿಂತನೆಗೆ ಕೆಲ ಗುತ್ತಿಗೆದಾರರು ಸಡ್ಡು ಹೊಡೆದಿದ್ದು, ಹೊರಗಿನವರು ಇಲ್ಲಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದಾರೆ ಎನ್ನುವ ಅನುಮಾನ ಪಾಲಿಕೆ ಅಧಿಕಾರಿಗಳದ್ದಾಗಿದೆ.

ಗುತ್ತಿಗೆದಾರರಲ್ಲಿ ಅತಂತ್ರ ಭೀತಿ: ಈಗಾಗಲೇ ಅವಳಿ ನಗರ ಸ್ಮಾರ್ಟ್‌ ಸಿಟಿ ಯೋಜನೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಎಲ್ಇಡಿ ದೀಪಗಳನ್ನು ಅಳವಡಿಸುವ ಕಂಪನಿಗಳೇ ಮುಂದಿನ 11 ವರ್ಷಗಳ ನಿರ್ವಹಣೆ ಕಾರ್ಯ ಮಾಡಬೇಕು ಎಂಬುವುದು ಯೋಜನೆಯಲ್ಲಿದೆ. ಒಂದು ವೇಳೆ ಹು-ಧಾ ಬೀದಿದೀಪ ನಿರ್ವಹಣೆ ಸ್ಮಾರ್ಟ್‌ಸಿಟಿ ಗುತ್ತಿಗೆ ಪಡೆಯುವ ಎಲ್ಇಡಿ ಕಂಪನಿಗೆ ವಹಿಸಿದರೆ ಮುಂದೇನು ಎನ್ನುವ ಆತಂಕ ಗುತ್ತಿಗೆದಾರರಲ್ಲಿದೆ. ಹೀಗಾಗಿ ಹು-ಧಾ ಮಹಾನಗರ ಪಾಲಿಕೆ ಬೀದಿದೀಪ ನಿರ್ವಹಣೆ ಟೆಂಡರ್‌ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎನ್ನುವ ಅಭಿಪ್ರಾಯಗಳಿವೆ.

ಸ್ಮಾರ್ಟ್‌ಸಿಟಿಗೆ ಆಯ್ಕೆಯಾಗಿರುವ ರಾಜ್ಯದ ಎಲ್ಲ ನಗರಗಳ ಬೀದಿದೀಪಗಳನ್ನು ಎಲ್ಇಡಿ ದೀಪಗಳಿಗೆ ಪರಿವರ್ತಿಸುವ ಯೋಜನೆಗೆ ಈಗಾಗಲೇ ರಾಜ್ಯಮಟ್ಟದಲ್ಲಿ ಮೂರು ಬಾರಿ ಟೆಂಡರ್‌ ಕರೆದರೂ ಪ್ರತಿಷ್ಠಿತ ಕಂಪನಿಗಳು ಆಸಕ್ತಿ ತೋರಿಲ್ಲ. ಹೀಗಾಗಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಸಮರ್ಪಕ ಬೀದಿ ದೀಪ ನಿರ್ವಹಣೆ ದೊರೆಯುತ್ತಿಲ್ಲ. ಇತ್ತ ಪಾಲಿಕೆಯಿಂದ ಕರೆದ ಟೆಂಡರ್‌ ಕೂಡ ಯಶಸ್ವಿಯಾಗದಿರುವುದು ತಲೆನೋವಾಗಿ ಪರಿಣಮಿಸಿದೆ.

 

•ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.