ಸಮರ್ಪಕ ನೀರು ಪೂರೈಕೆಗೆ ಸೂಚನೆ
•ನೀರಸಾಗರ ಜಲಾಶಯ ಭರ್ತಿ ಹಿನ್ನೆಲೆ•ಜಲಮಂಡಳಿ ಅಧಿಕಾರಿಗಳಿಗೆ ತಾಕೀತು
Team Udayavani, Sep 1, 2019, 9:44 AM IST
ಹುಬ್ಬಳ್ಳಿ: ಜಲಮಂಡಳಿ ಅಧಿಕಾರಿಗಳೊಂದಿಗೆ ಶಾಸಕ ಪ್ರಸಾದ ಅಬ್ಬಯ್ಯ ಸಭೆ ನಡೆಸಿದರು.
ಹುಬ್ಬಳ್ಳಿ: ಮಳೆಯಿಂದಾಗಿ ಹಳೇ ಹುಬ್ಬಳ್ಳಿ ಭಾಗಕ್ಕೆ ನೀರು ಪೂರೈಸುವ ನೀರಸಾಗರ ಜಲಾಶಯ ಭರ್ತಿಯಾಗಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ಜಲಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬೇಸಿಗೆಯಲ್ಲಿ ಹಳೇ ಹುಬ್ಬಳ್ಳಿ ಭಾಗದಲ್ಲಿ 10-12 ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿತ್ತು. ಇದೀಗ ಜಲಾಶಯಗಳಲ್ಲಿ ನೀರು ಭರ್ತಿಯಾಗಿದ್ದು, ಇನ್ನಾದರೂ ಜನತೆಗೆ ಸಮರ್ಪಕ ನೀರು ಪೂರೈಸುವಂತೆ ಸೂಚಿಸಿದರು.
ಕ್ಷೇತ್ರ ವ್ಯಾಪ್ತಿಯ ಹಳೇ ಹುಬ್ಬಳ್ಳಿ ಭಾಗದ ಕೆಲವೆಡೆ ಕುಡಿಯುವ ನೀರಿನೊಂದಿಗೆ ಕಲುಷಿತ ನೀರು ಮಿಶ್ರಣವಾಗುತ್ತಿರುವ ಬಗ್ಗೆ ದೂರುಗಳಿವೆ. ಕೂಡಲೇ ಪೈಪ್ಲೈನ್ಗಳನ್ನು ಪರಿಶೀಲಿಸಿ, ಸಮಸ್ಯೆಗಳನ್ನು ಸರಿಪಡಿಸುವಂತೆ ಶಾಸಕರು ತಾಕೀತು ಮಾಡಿದರು.
ಸೋನಿಯಾ ಗಾಂಧಿ ನಗರದಲ್ಲಿ ನಿರ್ಮಿಸಿರುವ ಬೃಹತ್ ಓವರ್ಹೆಡ್ ಟ್ಯಾಂಕ್ ಈವರೆಗೂ ಸಾರ್ವಜನಿಕ ಬಳಕೆಗೆ ಮುಕ್ತವಾಗಿಲ್ಲ. ಅನೇಕ ಬಾರಿ ಅಧಿಕಾರಿಗಳಿಗೆ ಸೂಚಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅಲ್ಲಿ ನೀರು ಸಂಗ್ರಹ ಮಾಡಿ ಸುತ್ತಲಿನ ಜನರಿಗೆ ನೀರು ಪೂರೈಸಲು ಕ್ರಮ ಜರುಗಿಸಬೇಕು. ಇದರಲ್ಲಿ ಮತ್ತೆ ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಎಚ್ಚರಿಸಿದರು.
ಜಲಮಂಡಳಿ ಇಇ ರಾಜಗೋಪಾಲ ಮಾತನಾಡಿ, ಇದೀಗ ಎಲ್ಲೆಡೆ 8 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಕುಡಿಯುವ ನೀರು ಪೂರೈಕೆಗೆ ಯಾವುದೇ ಸಮಸ್ಯೆಯಿಲ್ಲ ಎಂದರು. ಜಲಮಂಡಳಿಯ ಶಿಂಗೋಟಿ, ರಿಯಾಜ್, ವಿನಾಯಕ, ದೇವೂರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ