ಸರ್ವೀಸ್ ರಸ್ತೆ ದುರಸ್ತಿಗೆ ಸೂಚನೆ
Team Udayavani, Oct 23, 2019, 8:25 AM IST
ಹುಬ್ಬಳ್ಳಿ: ಗಬ್ಬೂರ ಟೋಲ್ನಾಕಾ ಸಮೀಪದ ಸೇವಾ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಕೂಡಲೇ ಅವುಗಳ ದುರಸ್ತಿ ಕಾರ್ಯ ಮಾಡಬೇಕೆಂದು ಶಾಸಕ ಪ್ರಸಾದ ಅಬ್ಬಯ್ಯ ಸೂಚಿಸಿದರು.
ಗಬ್ಬೂರು ಟೋಲ್ನಾಕಾದ ಅವ್ಯವಸ್ಥೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲ ಹಾಗೂ ಇನ್ನಿತರ ಕಾರಣ ನೀಡಿ ಕಾಮಗಾರಿ ವಿಳಂಬ ಮಾಡದೆ 20 ದಿನಗಳಲ್ಲಿ ಸೇವಾ ರಸ್ತೆಗಳ ದುರಸ್ತಿ ಕಾರ್ಯ ಮಾಡಬೇಕು. ದಿನನಿತ್ಯ ಸಂಚರಿಸುವ ಸ್ಥಳೀಯರಿಗೆ ಸೇವಾ ರಸ್ತೆ ಹಾಳಾಗಿರುವುದರಿಂದ ತುಂಬಾ ತೊಂದರೆಯಾಗಿದೆ. ಗಬ್ಬೂರು ಟೋಲ್ ನಾಕಾದ ಅವ್ಯವಸ್ಥೆಗೆ ಸಂಬಂಧಿಸಿದಂತೆ ಈಗಾಗಲೇ ಸಂಬಂಧಿ ಸಿದವರಿಗೆ ನೋಟಿಸ್ ಕಳುಹಿಸಲಾಗಿದೆ. ಸವಾರರಿಂದ ಟೋಲ್ ಸಂಗ್ರಹಿಸಿ ಅಗತ್ಯ ಮೂಲ ಸೌಕರ್ಯ ನೀಡದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೂಡಲೇ ಅವ್ಯವಸ್ಥೆ ಸರಿಪಡಿಸಿ ಎಂದು ಎಚ್ಚರಿಸಿದರು.
ಮುಖಂಡ ಮೋಹನ ಅಸುಂಡಿ ಮಾತನಾಡಿ, ಟೋಲ್ನಾಕಾ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಜಾಗ ನೀಡಿದ ರೈತರ ಕುಟುಂಬ ಸದಸ್ಯರಿಗೆ ಟೋಲ್ನಾಕಾದಲ್ಲಿ ಉದ್ಯೋಗ ನೀಡುವ ಭರವಸೆ ಇದುವರೆಗೂ ಈಡೇರಿಲ್ಲ. ಟ್ರಾಕ್ಟರ್ ಮೂಲಕ ಕೃಷಿ ಉತ್ಪನ್ನಗಳನ್ನು ಸಾಗಿಸುವ ಸ್ಥಳೀಯ ರೈತರಿಂದಲೂ ಟೋಲ್ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಮೂಲ ಸೌಕರ್ಯ ಒದಗಿಸುವವರೆಗೂ ಯಾರಿಂದಲೂ ಟೋಲ್ ವಸೂಲಿ ಮಾಡದಂತೆ ಒತ್ತಾಯಿಸಿದರು.
ಜಿಲ್ಲಾಧಿಕಾರಿ ದೀಪಾ ಚೋಳನ್, ಮುಖಂಡರಾದ ಕುಮಾರ ಕುಂದನಹಳ್ಳಿ, ನಜೀರ್ ಹೊನ್ಯಾಳ, ರಾಷ್ಟ್ರೀಯ ಹೆದ್ದಾರಿ ಅಧಿ ಕಾರಿಗಳಾದ ಆರ್.ಕೆ. ಮಠದ, ಮುಖಂಡರಾದ ವಿಜನಗೌಡ ಪಾಟೀಲ, ಪ್ರಸನ್ನ ಮಿರಜಕರ, ಗಣೇಶ ದೊಡ್ಡಮನಿ, ನಂದಿ ಹೈವೇ ಅಧಿಕಾರಿಗಳು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ