ಕವಿ ಕಣವಿಗೆ ನೃಪತುಂಗ ಪ್ರಶಸ್ತಿ ಪ್ರದಾನ


Team Udayavani, Sep 17, 2019, 10:11 AM IST

huballi-tdy-4

ಧಾರವಾಡ: ನಗರದಲ್ಲಿ ಸೋಮವಾರ ಜರುಗಿದ ಕಾರ್ಯಕ್ರಮದಲ್ಲಿ ಕೆ.ಆರ್‌. ಸೌಮ್ಯ ಹಾಗೂ ಶರಣು ಹುಲ್ಲೂರು ಅವರಿಗೆ ಮಯೂರವರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ನೀಡುವ ಪ್ರಸಕ್ತ ಸಾಲಿನ ನೃಪತುಂಗ ಸಾಹಿತ್ಯ ಪ್ರಶಸ್ತಿಯನ್ನು ಚೆಂಬೆಳಕಿನ ಕವಿ ನಾಡೋಜ ಡಾ| ಚೆನ್ನವೀರ ಕಣವಿ ಅವರಿಗೆ ಪ್ರದಾನ ಮಾಡಲಾಯಿತು.

ನಗರದ ಆಲೂರು ಭವನದಲ್ಲಿ ಸೋಮವಾರ ಜರುಗಿದ ಕಾರ್ಯಕ್ರಮದಲ್ಲಿ 7 ಲಕ್ಷ 1 ರೂ. ನಗದು ಒಳಗೊಂಡ ಪ್ರಶಸ್ತಿಯನ್ನು ಡಿಸಿಎಂ ಲಕ್ಷಣ ಸವದಿ ಅವರು ಡಾ| ಕಣವಿ ಅವರಿಗೆ ಪ್ರದಾನ ಮಾಡಿದರು. ತಲಾ 25 ಸಾವಿರ ನಗದು ಒಳಗೊಂಡ ಮಯೂರವರ್ಮ ಸಾಹಿತ್ಯ ಪ್ರಶಸ್ತಿಯನ್ನು ಕೆ.ಆರ್‌. ಸೌಮ್ಯ ಹಾಗೂ ಶರಣು ಹುಲ್ಲೂರು ಅವರಿಗೆ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಗುರುವಿನ ಸಮಾನ ಸ್ಥಾನದಲ್ಲಿರುವ ಕವಿ ಕಣವಿ ಅವರಿಗೆ ಪ್ರಶಸ್ತಿ ನೀಡುವ ಭಾಗ್ಯ ಲಭಿಸಿರುವುದು ನನ್ನ ಸುದೈವ. ಇದು ನನ್ನ ಜೀವಮಾನದ ಮಧುರ ಕ್ಷಣ. ತುಂಬಿದ ಕೊಡ ಎಂದಿಗೂ ತುಳುಕದು ಎಂಬಂತೆ ಕಣವಿ ಅವರ ವ್ಯಕ್ತಿತ್ವ ಅವರನ್ನು ತುಂಬಿದ ಕೊಡವನ್ನಾಗಿಸಿದೆ. ನೆರೆ ಸಂತ್ರಸ್ತರಿಗೆ ಒಂದು ಲಕ್ಷ ರೂ.ವನ್ನು ಸಿಎಂ ಪರಿಹಾರ ನಿಧಿಗೆ ನೀಡಿರುವ ಕಣವಿ ಅವರ ಸರಳ ಸಜ್ಜನಿಕೆ ಯುವ ಪೀಳಿಗೆಗೆ ಮಾದರಿ ಎಂದರು.

ಅಧಿಕಾರ, ಅಂತಸ್ತು-ಐಶ್ವರ್ಯ, ಆಯಸ್ಸು ಶಾಶ್ವತವಲ್ಲ. ಜೀವನದಲ್ಲಿ ಸಾಧನೆಗಳ ಮೂಲಕವೇ ನಮ್ಮ ಹೆಜ್ಜೆ ಗುರುತು ದಾಖಲಿಸಬೇಕು. ಇಂತಹವರ ಸಾಲಿನಲ್ಲಿ ಕಣವಿ ಸಲ್ಲುತ್ತಾರೆ. ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿಗಳೂ ದೊರೆಯುವಂತೆ ಮಾಡುವ ಧ್ವನಿಗೆ ನಮ್ಮ ಸಹಕಾರ ಇರಲಿದೆ. ಸಾರಿಗೆ ಸಾಹಿತ್ಯ ಭವನದಂತಹ ಕಸಾಪ ಬೇಡಿಕೆ ಈಡೇರಿಸುವತ್ತಲೂ ಧ್ವನಿ ಇರಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾತನಾಡಿ, ಸರಳ ಸಜ್ಜನಿಕೆಯ ಹಿರಿಯ ಕವಿಗೆ ಪ್ರಶಸ್ತಿ ನೀಡಿದ್ದರಿಂದ ಪ್ರಶಸ್ತಿ ಮೌಲ್ಯವೂ ಹೆಚ್ಚಿದೆ. ಅವರ ಸಾಹಿತ್ಯಿಕ ಸೇವೆಗೆ ರಾಷ್ಟ್ರಮಟ್ಟದ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಲಭಿಸಿದರೆ ಆ ಪ್ರಶಸ್ತಿಯ ಮೌಲ್ಯವೂ ಹೆಚ್ಚಳ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗುವುದು ಎಂದರು.

ಕಸಾಪ ಅಧ್ಯಕ್ಷ ಡಾ| ಮನು ಬಳಿಗಾರ ಮಾತನಾಡಿ, ಕಣವಿ ಅವರ ತವರೂರಿನಲ್ಲಿಯೇ ಪ್ರಶಸ್ತಿ ನೀಡಿರುವ ಸವಿ ನೆನಪಿಗಾಗಿ ಸಾರಿಗೆ ಸಾಹಿತ್ಯ ಭವನ ಧಾರವಾಡದಲ್ಲಿ ನಿರ್ಮಾಣ ಮಾಡಬೇಕು. ಇದರೊಂದಿಗೆ ಬೆಂಗಳೂರಿನಲ್ಲಿ ಸಾರಿಗೆ ಸಾಂಸ್ಕೃತಿಕ ಭವನ ನಿರ್ಮಾಣ ಆಗಬೇಕಿದ್ದು, ಸಾರಿಗೆ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಸಾರಿಗೆ ಸಚಿವರು ಸಹಕಾರ ನೀಡುವಂತೆ ಮನವಿ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ| ಕಣವಿ, ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕನ್ನಡರಿಗೆ ಅವಕಾಶ ನೀಡುವುದಾಗಿ ಹೇಳಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭರವಸೆ ಹುಸಿ ಆಗಿದೆ. ಹೀಗಾಗಿ ಇಲ್ಲಿಯ ಸಂಸದರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕನ್ನಡಿಗರಿಗೆ ಅವಕಾಶ ಸಿಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಅವಳಿನಗರದಲ್ಲಿರುವ ಕನ್ನಡ ಪರ ಟ್ರಸ್ಟ್‌ಗಳ ಅಧ್ಯಕ್ಷರ ಸಭೆ ಕೈಗೊಂಡು ಚರ್ಚೆ ನಡೆಸಿ, ಸಾಹಿತ್ಯ ಚಟುವಟಿಕೆಗಳಿಗೆ ಧನಸಹಾಯ ಮಾಡಬೇಕು. ಧಾರವಾಡದ ಸಾಹಿತ್ಯ ಸಂಭ್ರಮಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಮಲ್ಲಿಕಾರ್ಜುನ ಮನಸೂರ ಕಲಾಭವನದ ಬಾಡಿಗೆ ಕಡಿಮೆ ಮಾಡಿ ಕನ್ನಡ ಕಾರ್ಯಕ್ರಮಗಳಿಗೆ ಸಹಕಾರ ನೀಡಬೇಕು ಎಂದರು.

ವಿಮರ್ಶಕ ಡಾ| ಜಿ.ಎಂ. ಹೆಗಡೆ ಅಭಿನಂದನಾ ನುಡಿಗಳನ್ನಾಡಿದರು. ವ.ಚ. ಚನ್ನೇಗೌಡ, ಡಾ| ಲಿಂಗರಾಜ ಅಂಗಡಿ ಇನ್ನಿತರರಿದ್ದರು.

ಪರಿಹಾರ ನಿಧಿಗೆ 1 ಲಕ್ಷ ನೀಡಿದ ಕಣವಿ:

7 ಲಕ್ಷ 1 ರೂ. ನಗದು ಒಳಗೊಂಡ ಪ್ರಶಸ್ತಿ ಸ್ವೀಕರಿಸಿದ ಬಳಿಕ ಡಾ| ಕಣವಿ ಅವರು, ನೆರೆ ಸಂತ್ರಸ್ತರಿಗಾಗಿ 1 ಲಕ್ಷ ರೂ. ಚೆಕ್‌ನ್ನು ಸಚಿವ ಜಗದೀಶ ಶೆಟ್ಟರ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.