ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ತಡೆ; ಸವಾಲಾಗಿ ಸ್ವೀಕರಿಸಿ
Team Udayavani, Jun 3, 2020, 7:32 AM IST
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಪದಗ್ರಹಣದ ಕಾರ್ಯಕ್ರಮವನ್ನು ಬಿಜೆಪಿ ಸರಕಾರ ಉದ್ದೇಶಪೂರ್ವಕವಾಗಿ ಎರಡು ಬಾರಿ ರದ್ದುಪಡಿಸಿದ್ದು, ಈ ನಿರ್ಧಾರವನ್ನು ಸವಾಲಾಗಿ ಸ್ವೀಕರಿಸಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಬೇಕು ಎಂದು ಕೆಪಿಸಿಸಿ ಧಾರವಾಡ ಜಿಲ್ಲಾ ವೀಕ್ಷಕ ಎಸ್.ಎ. ಹುಸೇನ್ ಹೇಳಿದರು.
ಕಾರವಾರ ರಸ್ತೆಯ ಪಕ್ಷದ ಕಚೇರಿಯಲ್ಲಿ ನಡೆದ ವಿವಿಧ ಘಟಕಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹೊಸ ಶಕ್ತಿಯೊಂದಿಗೆ ಮೇಲೇಳುತ್ತಿದೆ ಎನ್ನುವ ಸಂದೇಶ ಬಿಜೆಪಿಗೆ ತಲುಪಿದೆ. ಹೀಗಾಗಿ ಕೋವಿಡ್-19 ಮಾರ್ಗಸೂಚಿಗಳ ನೆಪದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನೀಡುತ್ತಿಲ್ಲ. ಇದೊಂದು ಸಂಪೂರ್ಣ ಆನ್ ಲೈನ್ ಕಾರ್ಯಕ್ರಮವಾಗಿದ್ದರೂ ದುರುದ್ದೇಶದಿಂದ ತಡೆಹಿಡಿಯುವ ಕೆಲಸ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರು ಕುಗ್ಗದೆ ಮತ್ತಷ್ಟು ಅದ್ಧೂರಿಯಾಗಿ ನಡೆಯುವಂತೆ ಕಾರ್ಯಯೋಜನೆ ರೂಪಿಸಬೇಕು ಎಂದರು.
ಕಾಂಗ್ರೆಸ್ ಪಕ್ಷ ಪರಿಚಯಿಸಿದ ಕೇಡರ್ ಬೇಸ್ ಮಾದರಿಯನ್ನು ಬಿಜೆಪಿ ಅನುಸರಿಸಿಕೊಂಡು ಇಂದು ಅಧಿಕಾರಕ್ಕೆ ಬಂದಿದೆ. ಕೇಡರ್ ವ್ಯವಸ್ಥೆಯನ್ನು ನಿರ್ಲಕ್ಷಿಸಿದ ಪರಿಣಾಮ ಕಾಂಗ್ರೆಸ್ ಹಿನ್ನಡೆ ಅನುಭವಿಸುವಂತಾಗಿದೆ. ಗ್ರಾಪಂ, ಬೂತ್ ಮಟ್ಟದಿಂದ ಪಕ್ಷದ ಸಂಘಟನೆ ರೂಪುರೇಷೆಗಳು ಸಿದ್ಧವಾಗಿವೆ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆ ನಡೆಯುತ್ತಿದೆ ಎನ್ನುವ ಕಾರಣದಿಂದ ರಾಜ್ಯ ಸರಕಾರ ಪದಗ್ರಹಣ ಕಾರ್ಯಕ್ರಮಕ್ಕೆ ಕಾನೂನಿನ ಹೆಸರಲ್ಲಿ ಅಡ್ಡಿಪಡಿಸಲಾಗುತ್ತಿದೆ. ಪದಗ್ರಹಣ ಕಾರ್ಯಕ್ರಮ ಯಾವಾಗ ನಡೆದರೂ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ ಕಾಂಗ್ರೆಸ್ ಸಮಿತಿ ಅನುಮತಿ ಮೇರೆಗೆ ಪ್ರತಿಯೊಬ್ಬರು ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು.
ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರು ಶ್ರಮ ವಹಿಸಬೇಕು. ಒಗ್ಗಟ್ಟಾಗಿ ಕಾರ್ಯ ಮಾಡಿದರೆ ಕಾರ್ಯಕ್ರಮ ಯಶಸ್ವಿಯಾಗುವುದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದರು.
ಮುಖಂಡರಾದ ಅನಿಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರು, ಪ್ರೊ| ಐ.ಜಿ. ಸನದಿ, ಇಸ್ಮಾಯಿಲ್ ತಮಟಗಾರ, ದೀಪಾ ಗೌರಿ, ದಶರಥ ವಾಲಿ, ಬಷೀರ್ಅಹ್ಮದ್ ಗುಡಮಾಲ್ ಇನ್ನಿತರರಿದ್ದರು.
ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದರೆ ಪ್ರತಿಫಲ ದೊರೆಯುವುದರಲ್ಲಿ ಎರಡು ಮಾತಿಲ್ಲ. ಪಕ್ಷದ ಸಂಘಟನೆ, ಜವಾಬ್ದಾರಿ ಸೇರಿದಂತೆ ಪ್ರತಿಯೊಂದು ವಿಕೇಂದ್ರೀಕರಣಗೊಳ್ಳುತ್ತಿದ್ದು, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶ ದೊರೆಯಲಿದೆ. ವೀರಕುಮಾರ ಪಾಟೀಲ, ಮಾಜಿ ಸಚಿವ ಹಾಗೂ ಕೆಪಿಸಿಸಿ ಜಿಲ್ಲಾ ವೀಕ್ಷಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ