ಪಿಂಚಣಿ ದಾಖಲೆ ಸರಿಪಡಿಸಿಲು 10 ಸಾವಿರ ರೂ ಲಂಚ ಕೇಳಿದ್ದ ಪ್ರಥಮ ದರ್ಜೆ ಸಹಾಯಕ ಎಸಿಬಿ ಬಲೆಗೆ
Team Udayavani, Aug 10, 2021, 3:59 PM IST
ಹುಬ್ಬಳ್ಳಿ: ಇಲ್ಲಿನ ಮಿನಿ ವಿಧಾನ ಸೌಧದಲ್ಲಿರುವ ಖಜಾನೆ ಇಲಾಖೆಯ ನಿವೃತ್ತಿ ವೇತನ ವಿಭಾಗದ ಪ್ರಥಮ ದರ್ಜೆ ಸಹಾಯಕ ಮಂಗಳವಾರ ಎಸಿಬಿ ಬಲೆಗೆ ಬಿದ್ದಿದ್ದಾನೆ.
ನಿವೃತ್ತ ಎಎಸ್ಐರೊಬ್ಬರ ಪಿಂಚಣಿ ದಾಖಲೆ ಸರಿಪಡಿಸಿ ನೀಡಲು, ಪಿಂಚಣಿ ವಿಭಾಗದ ಅಭಿಲಾಷ ಆಲೂರ 10 ಸಾವಿರ ರೂ. ಬೇಡಿಕೆ ಇಟ್ಟು 3 ಸಾವಿರ ರೂ.ಗೆ ವ್ಯವಹಾರ ಕುದರಿಸಿಕೊಂಡು, ಕಚೇರಿಯಲ್ಲಿಯೇ ಹಣ ಪಡೆಯುತ್ತಿದ್ದಾಗ ಎಸಿಬಿ ಡಿಎಸ್ಪಿ ವೇಣುಗೋಪಾಲ ನೇತೃತ್ವದ ತಂಡ ದಾಳಿ ಮಾಡಿ ಹಣ ಸಮೇತ ವಶಕ್ಕೆ ಪಡೆದಿದೆ.
ಖಜಾನೆ ಅಧಿಕಾರಿಗೆ ಹಣ ನೀಡಬೇಕೆಂದು ಹೇಳಿ, ಎಫ್ ಡಿಸಿ ಹಣ ಪಡೆಯುತ್ತಿದ್ದರಿಂದ ಅಧಿಕಾರಿ ಪ್ರಕಾಶ ಎಸ್. ಹಳಪೇಟೆ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ.
ಇದನ್ನೂ ಓದಿ:ವಿಶೇಷ ಚೇತನ ವಿದ್ಯಾರ್ಥಿನಿ ಮನೆಗೆ ತೆರಳಿ ಅಭಿನಂದಿಸಿದ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್
ಹಾವೇರಿಯಲ್ಲಿ ಎಎಸ್ಐ ಆಗಿ ನಿವೃತ್ತರಾದ ಮಲ್ಲಣ್ಣ ಬಿರಾದಾರ ದೇಸಾಯಿ, ದಾಖಲೆ ಸರಿ ಪಡಿಸಲು ಲಂಚ ಕೇಳುತ್ತಿರುವ ಬಗ್ಗೆ, ಎಸಿಬಿಗೆ ದೂರು ನೀಡಿದ್ದರು.
ನಿವೃತ್ತರಾದ ನಂತರ ತಮ್ಮ ನಿವೃತ್ತಿ ವೇತನ ಹುಬ್ಬಳ್ಳಿಯಲ್ಲಿ ದೊರಕುವಂತೆ ಮಾಡಿಕೊಳ್ಳಲು ಮನವಿ ಸಲ್ಲಿಸಿದ್ದರು. ಎಫ್ಡಿಎ ಅಭಿಷೇಕ ದಾಖಲೆ ಸರಿಪಡಿಸಿ ಪಿಂಚಣಿ ದೊರಕುವಂತೆ ಮಾಡಲು 10 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ