ಮತಗಟ್ಟೆಗಳತ್ತ ಅಧಿಕಾರಿಗಳ ಪಯಣ


Team Udayavani, May 19, 2019, 9:17 AM IST

hubali-tdy-2..

ಧಾರವಾಡ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು (ಮೇ 19) ನಡೆಯಲಿರುವ ಮತದಾನಕ್ಕೆ ಸಕಲ ಸಿದ್ಧ್ದತೆಗಳು ಪೂರ್ಣಗೊಂಡಿದ್ದು, ಎಲ್ಲ ಮತಗಟ್ಟೆಗಳಿಗೂ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ 214 ಮತಗಟ್ಟೆಗಳಿಗೂ ಶನಿವಾರ ಮಧ್ಯಾಹ್ನವೇ ಚುನಾವಣಾಧಿಕಾರಿಗಳನ್ನು ಕಳುಹಿಸಲಾಗಿದೆ. ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದು, 379 ವಿದ್ಯುನ್ಮಾನ ಮತಯಂತ್ರಗಳನ್ನು ರವಾನಿಸಲಾಗಿದೆ ಎಂದರು.

ಕ್ಷೇತ್ರದಲ್ಲಿ ಒಟ್ಟು 189437 ಮತದಾರರಿದ್ದು, 97 ಸಾವಿರ ಪುರುಷ 91 ಸಾವಿರ ಮಹಿಳಾ ಮತದಾರರು ಸೇರಿದಂತೆ 04 ಜನ ತೃತೀಯ ಲಿಂಗಿಗಳು ಇದ್ದಾರೆ. ಕ್ಷೇತ್ರದಲ್ಲಿ 2487 ವಿಕಲಚೇತನರಿದ್ದು ಅವರ ಮತದಾನಕ್ಕೆ 134 ವಾಹನಗಳ ವ್ಯವಸ್ಥೆ ಮಾಡಲಾಗಿದೆ.ಇಲ್ಲಿ 16 ಸಖೀ ಮತಗಟ್ಟೆಗಳಿದ್ದು, ಒಂದು ವಿಕಲಚೇತನರ ಮತಗಟ್ಟೆಗೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿದ್ದು, ಯಾವುದೇ ಮೆರವಣಿಗೆ, ಬಹಿರಂಗವಾಗಿ ಗುಂಪುಗಳಲ್ಲಿ ಸುತ್ತಾಡುವುದು, ಪ್ರಚೋದನಕಾರಿ ಹೇಳಿಕೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ತಿಳಿಸಿದರು.

ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಈವರೆಗೂ ಒಟ್ಟು 72,19,591 ರೂ.ಗಳ ಮೌಲ್ಯದ ಹಣ ಮತ್ತು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ 35 ಲೀಟರ್‌ ಮದ್ಯ, 30 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಸೇರಿವೆ. ಒಟ್ಟಾರೆ ಕುಂದಗೋಳ ಉಪ ಚುನಾವಣೆಗೆ ಸಕಲ ಸಿದ್ಧ್ದತೆ ಮಾಡಿಕೊಳ್ಳಲಾಗಿದೆ ಎಂದು ದೀಪಾ ಚೋಳನ್‌ ಹೇಳಿದರು.

ಕುಂದಗೋಳ: ಸ್ಥಳೀಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇ 19ರಂದು ನಡೆಯಲಿದ್ದು, ಪಟ್ಟಣದ ಹರಭಟ್ಟ ಕಾಲೇಜಿನ ಆವರಣದಿಂದ ಒಟ್ಟು 214 ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಮತಯಂತ್ರ ಹಾಗೂ ಸಲಕರಣೆಗಳೊಂದಿಗೆ ತೆರಳಿದರು.

ಬೆಳಗ್ಗೆ ಜಿಲ್ಲಾಧಿಕಾರಿ ದೀಪಾ ಚೋಳನ್‌ ಅವರು ಮಸ್ಟರಿಂಗ್‌ನ ಸಮಗ್ರ ವಿವರಗಳನ್ನು ಪಡೆದುಕೊಂಡರು. ಅಣಕು ಮತದಾನ ನಡೆಸಿ ಎಲ್ಲ ಸಿದ್ಧತೆಗಳನ್ನು ಪರಿಶೀಲಿಸಿ ಯಾವ ಲೋಪ ದೋಷವಾಗಂತೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಸಿಬ್ಬಂದಿ ಕರ್ತವ್ಯಕ್ಕೆ ಶುಭ ಹಾರೈಸಿದರು.

214 ಮತಗಟ್ಟೆಗಳಿಗೆ 968 ಅಧಿಕಾರಿಗಳು, 242 ಸಿಬ್ಬಂದಿ ನಿಯೋಜಿಸಲಾಗಿದೆ. ಒಟ್ಟು 42 ಮಾರ್ಗಗಳನ್ನು ಗುರುತಿಸಿದ್ದು, 30 ಬಸ್ಸುಗಳು, 8 ಮ್ಯಾಕ್ಸಿಕ್ಯಾಬ್‌ಗಳು, 3 ಜೀಪುಗಳು ಸೇರಿ 41 ವಾಹನಗಳಿಗೆ ಜಿಪಿಎಸ್‌ ಅಳವಡಿಸಲಾಗಿದೆ ಎಂದು ಚುನಾವಣಾಧಿಕಾರಿ ವಿ. ಪ್ರಸನ್ನ ಹೇಳಿದರು.

ಚುನಾವಣೆ ಬಂದೋಬಸ್ತ್ಗೆ 4 ಡಿವೈಎಸ್‌ಪಿ, 7 ಇನ್ಸ್‌ಪೆಕ್ಟರ್‌, 2 ಪಿಎಸ್‌ಐ, 42 ಎಎಸ್‌ಐ, 165 ಪೊಲೀಸ್‌ ಸಿಬ್ಬಂದಿ, 263 ಹೋಂಗಾರ್ಡ್ಸ್‌, 12 ಡಿಆರ್‌, 2 ಕೆಎಸ್‌ಪಿ, 68 ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಲಾಗಿದೆ ಎಂದು ಸಿಪಿಐ ವೆಂಕಟಸ್ವಾಮಿ ಹೇಳಿದರು

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.