ಉಪ ಚುನಾವಣೆ ಬಳಿಕ ತೈಲ ಬೆಲೆ ಇಳಿಕೆ: ಬಸವರಾಜ ಬೊಮ್ಮಾಯಿ
Team Udayavani, Oct 18, 2021, 6:30 AM IST
ಹುಬ್ಬಳ್ಳಿ: ಇಂಧನ ತೈಲ ಬೆಲೆ ಗಗನಮುಖಿಯಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಂಚ ಸಮಾಧಾನ ಒದಗಿಸುವ ಸುಳಿವು ನೀಡಿದ್ದಾರೆ.
ಉಪ ಚುನಾವಣೆಯ ಬಳಿಕ ತೈಲದ ಮೇಲಿನ ಕರ ಇಳಿಸುವ ಕುರಿತು ನಿರ್ಧರಿಸುವುದಾಗಿ ತಿಳಿಸಿದ್ದಾರೆ.
ರಾಜ್ಯದ ಆರ್ಥಿಕತೆಯ ಮೇಲೆ ತೈಲ ಬೆಲೆ ಅವಲಂಬಿತ ವಾಗಿದೆ. ಕರ ಇಳಿಸುವ ಬಗ್ಗೆ ಉಪ ಚುನಾವಣೆಯ ಬಳಿಕ ಪುನರವಲೋಕನ ಮಾಡುತ್ತೇನೆ. ಆರ್ಥಿಕತೆ ಸುಧಾರಣೆ ಯಾದರೆ ತೈಲದ ಮೇಲಿನ ಕರ ಇಳಿಸುವುದು ಸಾಧ್ಯ. ಜನರ ಸಂಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಆರ್ಎಸ್ಎಸ್ ಹೊಗಳಿಕೆ ವಿಚಾರದ ಬಗ್ಗೆ ಈಗಾಗಲೇ ಉತ್ತರಿಸಿದ್ದೇನೆ. ಇನ್ನು ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಹಾನಗಲ್-ಸಿಂದಗಿ ಕ್ಷೇತ್ರಗಳಲ್ಲಿ ಹೆಚ್ಚಿನ ಸಮಯ ಮೀಸಲಿರಿಸಿ ಪ್ರಚಾರ ಮಾಡುತ್ತಿದ್ದೇನೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅತೀ ಹೆಚ್ಚು ಮತಗಳಿಂದ ಆಯ್ಕೆ ಆಗುತ್ತಾರೆ. ಹಾನಗಲ್ ಅಳಿಯ ಬೊಮ್ಮಾಯಿ ಇಲ್ಲಿಗೆ ಏನು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಅಲ್ಲಿಗೆ ಹೋಗಿಯೇ ಅವರಿಗೆ ವಿವರಣೆ ನೀಡುತ್ತೇನೆ ಎಂದರು.
ಇದನ್ನೂ ಓದಿ:ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ