ಬೆಳಗಾವಿ ವಿಭಾಗದ 74 ಸಾವಿರ ಶಿಕ್ಷಕರಿಗೆ ಆನ್‌ಲೈನ್‌ ತರಬೇತಿ


Team Udayavani, Jul 11, 2020, 1:58 PM IST

ಬೆಳಗಾವಿ ವಿಭಾಗದ 74 ಸಾವಿರ ಶಿಕ್ಷಕರಿಗೆ ಆನ್‌ಲೈನ್‌ ತರಬೇತಿ

ಧಾರವಾಡ: ಕೋವಿಡ್ ದಿಂದ ಕುಸಿದಿರುವ ಶೈಕ್ಷಣಿಕ ಚಟುವಟಿಕೆಗಳನ್ನು ಮತ್ತೆ ಚುರುಕುಗೊಳಿಸಲು ಜೂ.1 ರಿಂದ ಜೂ.30ರವರೆಗೆ ವಾಯುವ್ಯ ಕರ್ನಾಟಕ ಭಾಗದ ತಮ್ಮ ಕಚೇರಿ ವ್ಯಾಪ್ತಿಯ 9 ಜಿಲ್ಲೆಗಳಲ್ಲಿ ಆನ್‌ಲೈನ್‌ ಮೂಲಕ ಒಟ್ಟು ಸುಮಾರು 74 ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ಬೋಧನಾ ಪುನಶ್ಚೇತನ ತರಬೇತಿ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಗಾವಿ ವಿಭಾಗದ 9 ಜಿಲ್ಲೆಗಳಲ್ಲಿರುವ ಒಟ್ಟು ಸುಮಾರು 56 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ಹಾಗೂ ವಿಭಾಗದ ಸುಮಾರು 18 ಸಾವಿರ ಪ್ರೌಢ ಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ಈ ಆನ್‌ಲೈನ್‌ ತರಬೇತಿ ನೀಡಲಾಗಿದೆ. ಸರಕಾರಕ್ಕೆ ಯಾವುದೇ ವೆಚ್ಚ ಬಾರದಂತೆ ಶೂನ್ಯ ಬಜೆಟ್‌ ಯೋಜನೆ ಮೂಲಕ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳನ್ನು ವಿಷಯವಾರು ಬಳಸಿಕೊಂಡು ಈ ಆನ್‌ ಲೈನ್‌ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಇದು ರಾಜ್ಯದಲ್ಲೇ ಶೂನ್ಯ ಬಜೆಟ್‌ ತರಬೇತಿ ಯೋಜನೆಯ ಮೊದಲ ಪ್ರಯೋಗವಾಗಿದ್ದು, ಸಂಪೂರ್ಣ ಯಶಸ್ಸು ಕಂಡಿದೆ ಎಂದು ಅವರು ತಿಳಿಸಿದ್ದಾರೆ.

ಗೂಗಲ್‌ ಮೀಟ್‌ ಆ್ಯಪ್‌ ಲಿಂಕ್‌: ವಾಯವ್ಯ ಕರ್ನಾಟಕ ಭಾಗದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಉತ್ತರಕನ್ನಡ, ಧಾರವಾಡ, ಹಾವೇರಿ, ಗದಗ, ಶಿರಸಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಡಯಟ್‌ಗಳು ಗೂಗಲ್‌ ಮೀಟ್‌ ಆ್ಯಪ್‌ ಲಿಂಕ್‌ ಬಳಸಿಕೊಂಡು ಈ ತರಬೇತಿಗಳನ್ನು ಅಚ್ಚುಕಟ್ಟಾಗಿ ನಡೆಸಲು ಸೂಚಿಸಲಾಗಿತ್ತು. ಎಲ್ಲ 9 ಜಿಲ್ಲೆಗಳಲ್ಲಿ 3 ವಿಧದ ತರಬೇತಿಯನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ನೀಡಲಾಗಿದೆ. ಪ್ರಾಥಮಿಕ ಹಂತದಲ್ಲಿ 1ರಿಂದ 3ನೇ ನಲಿ-ಕಲಿ ತರಗತಿಗಳ ಪರಿಸರ ವಿಷಯಗಳ ಕುರಿತು ಹಾಗೂ 4 ರಿಂದ 7ನೇ ತರಗತಿಗಳ ವಿಷಯವಾರು ಕಠಿಣ ಸಂಗತಿಗಳಿಗೆ ಬೋಧನಾ ಮಾರ್ಗದರ್ಶನ ತರಬೇತಿ ನೀಡಲಾಗಿದೆ. ಪ್ರೌಢ ಶಾಲಾ ಹಂತದಲ್ಲಿ 8 ರಿಂದ 10ನೇ ತರಗತಿಗಳ ವಿಷಯವಾರು ತರಬೇತಿ ಆಯೋಜಿಸಲಾಗಿದೆ. ವಿಶೇಷವಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 8ನೇ ತರಗತಿಯ ಪರಿಷ್ಕೃತಗೊಂಡ ಗಣಿತ-ವಿಜ್ಞಾನ ಪಠ್ಯಕ್ರಮ ಕುರಿತು ಸುಲಭ ಬೋಧನಾ ಮಾರ್ಗದರ್ಶಿ ತರಬೇತಿ ನೀಡಲಾಗಿದೆ. ಶಾಲಾ ಪರಿಸರ ಶುಚಿತ್ವ, ಶಾಲಾ ಕೊಠಡಿಗಳ ಸ್ಯಾನಿಟೈಜರ್‌ ಮಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಮಾಹಿತಿ ಒದಗಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದ್ದಾರೆ.

9 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಜರುಗುತ್ತಿರುವ ಈ ಆನ್‌ಲೈನ್‌ ತರಬೇತಿಯ ಪ್ರಯೋಜನ ಅಧಿಕವಾಗಿದೆ. ಸರಕಾರದ ಬೊಕ್ಕಸಕ್ಕೆ ಯಾವುದೇ ವೆಚ್ಚ ಬರದಂತೆ ಶಿಕ್ಷಕರಿಗೆ ನೀಡಲಾಗುವ ತರಬೇತಿ ಮೊಬೈಲ್‌ ಸಂಪರ್ಕ ಜಾಲ ಬಂಧದಲ್ಲಿ ನಡೆಯುವುದರಿಂದ ವೇಳೆಯ  ಉಳಿತಾಯವಾಗಿದೆ. ಶಿಕ್ಷಕ-ಶಿಕ್ಷಕಿಯರು ಶಾಲೆಯಿಂದ ಹೊರಬರದೇ ಅವರು ಇದ್ದ ಸ್ಥಳದಲ್ಲೇ ಅವರಿಗೆ ಬೋಧನಾ ಮಾರ್ಗದರ್ಶನ ಪ್ರಾಪ್ತವಾಗಿದೆ. ಜತೆಗೆ ತರಬೇತಿ ನಡೆಯುವ ಸ್ಥಳಕ್ಕೆಪ್ರಯಾಣಿಸುವ ಶ್ರಮ-ಪ್ರಯಾಣದ ವೆಚ್ಚದ ಉಳಿತಾಯವಾಗಿದೆ. -ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.