ಅಖೀಲ ಭಾರತ ಜಾನಪದ ಸಮ್ಮೇಳನಕ್ಕೆ ತೆರೆ


Team Udayavani, Mar 19, 2017, 1:00 PM IST

hub1.jpg

ಧಾರವಾಡ: ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಜಾನಪದ ವಿಷಯ ಅಧ್ಯಯನಕ್ಕೆ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಅಖೀಲ ಭಾರತ ಜಾನಪದ ಸಮ್ಮೇಳನದಲ್ಲಿ ಈ ವರ್ಷ ಏಕೈಕ ನಿರ್ಣಯ ಕೈಗೊಳ್ಳಲಾಯಿತು. 

ಕೆ.ಇ.ಬೋರ್ಡ್‌ ಕಾಲೇಜಿನಲ್ಲಿ ಶನಿವಾರ ಸಂಜೆ ನಡೆದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಈ ನಿರ್ಣಯ ಘೋಷಿಸಿದ ಹಿರಿಯ ಜಾನಪದ ವಿದ್ವಾಂಸ ಡಾ|ವಿ.ಎಲ್‌.ಪಾಟೀಲ, ಈ ವರ್ಷಅಖೀಲ ಭಾರತ ಮಟ್ಟದಲ್ಲಿ ಜಾನಪದ ಸಮ್ಮೇಳನ ಮಾಡುತ್ತಿದ್ದು, ಜಾನಪದ ಉಳಿಯಬೇಕಾದರೆ ಅದು ಈ ನಾಡಿನ ಶಿಕ್ಷಣದ ಭಾಗವಾಗಬೇಕು ಎನ್ನುವ ಅಭಿಪ್ರಾಯ ಎರಡು ದಿನದ ಸಮ್ಮೇಳನದ ಎಲ್ಲಾ ಗೋಷ್ಠಿಗಳಲ್ಲಿ ಮತ್ತು ಎಲ್ಲ ವಿದ್ವಾಂಸರಿಂದ ಕೇಳಿ ಬಂತು.  

ಸರ್ಕಾರ ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಜಾನಪದ ವಿಷಯವನ್ನು ಕಡ್ಡಾಯವಾಗಿ ಬೋಧಿಸುವುದಕ್ಕೆ ಅವಕಾಶ ಮಾಡಿಕೊಡಬೇಕು ಎನ್ನುವ ನಿರ್ಣಯವನ್ನು ಸಮ್ಮೇಳನದಲ್ಲಿ ಮಂಡಿಸಿದರು. ಈ ನಿರ್ಣಯಕ್ಕೆ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಎಲ್ಲವಿದ್ವಾಂಸರು, ವಿದ್ಯಾರ್ಥಿಗಳು ಕೈ ಎತ್ತುವ ಮೂಲಕ ಬೆಂಬಲ ಸೂಚಿಸಿದರು. 

ಸಮಾರೋಪ ಭಾಷಣ ಮಾಡಿದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ|ಡಿ.ಬಿ.ನಾಯಕ, ದೇಶಜ್ಞಾನ ಪರಂಪರೆಯಾಧಾರಿತ ಜಾನಪದ ಇಂದು ಜಾಗತೀಕರಣದಲ್ಲಿ ಕೊಚ್ಚಿಕೊಂಡು ಹೋಗುತ್ತಿದೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಜಾನಪದ ಜ್ಞಾನ ಉಳಿಯಬೇಕಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ಜಾನಪದ ವಿಷಯವನ್ನು ಕಾಲೇಜುಗಳಲ್ಲಿ ಒಂದು ವಿಷಯವನ್ನಾಗಿ ಬೋಧಿಸುವುದಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ಸಿಂಡಿಕೇಟ್‌ ಸಭೆಯಲ್ಲಿ ನಿರ್ಣಯಿಸಿ ಹೇಳಿದೆ ಎಂದರು. ಜಾನಪದ ಮೌಲ್ಯಗಳು ಬದಲಾಗುತ್ತಿದ್ದು, ಆಧುನೀಕರಣದ ಪ್ರಭಾವಕ್ಕೆ ಈ ಕಲೆ ಸೊರಗುತ್ತಿದೆ. 

ಕಲೆ ಉಳಿಯಬೇಕಾದರೆಆಯಾ ಕಸಬುಗಳು ಉಳಿಯಬೇಕು. ಜಾನಪದ ಕಲೆಗೆ ಅಗತ್ಯ ಪ್ರೋತ್ಸಾಹ ಸಿಕ್ಕಾಗ ಮಾತ್ರ ಅದು ಉಳಿಯಲು ಸಾಧ್ಯ. ಕಲಾವಿದರು ಉಳಿದಾಗ ಮಾತ್ರ ಕಲೆ ಉಳಿಯಲು ಸಾಧ್ಯ. ಜಾನಪದ ಕಲೆ ಅನಕ್ಷರಸ್ಥರ ಕಲೆ ಎನ್ನುವ ಕೀಳರಿಮೆ ಹೋಗಬೇಕು ಎಂದರು. 

ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಮಾತನಾಡಿ, ಜಾಗತೀಕರಣದ ಪ್ರಭಾವ ಮತ್ತು ಪಾಶ್ಚಿಮಾತ್ಯ ದೇಶಗಳ ಕಲೆಗಳ ಪ್ರಭಾವ ಇಂದು ನಮ್ಮ ದೇಶದ ಯುವಕರನ್ನು ದಾರಿ ತಪ್ಪಿಸುತ್ತಿದೆ. ರಾಜ್ಯದ ಎಲ್ಲಾ ಕಲೆಗಳು ಬೆಳೆಯಬೇಕು. ಅದಕ್ಕಾಗಿ ಕೇವಲ ಸರ್ಕಾರ ಶ್ರಮಿಸಿದರೆ ಸಾಲದು, ಪ್ರತಿಯೊಬ್ಬರು ತಮ್ಮದೇ ರೀತಿಯಲ್ಲಿ ಕಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. 

ಕವಿವಿ ಕುಲಸಚಿವ ಡಾ|ಎಂ.ಎನ್‌. ಜೋಷಿ, ಕೆ.ಇ.ಬೋರ್ಡ್‌ ಕಾಲೇಜಿನ ಪ್ರಾಚಾರ್ಯ ಪ್ರೊ|ಮೋಹನ ಸಿದ್ದಾಂತಿ, ಜಾನಪದ ವಿದ್ವಾಂಸರಾದ ಡಾ|ಶಾಂತಾ ಇಮ್ರಾಪೂರ, ಡಾ| ವಿ.ಎಲ್‌.ಪಾಟೀಲ, ನಾಗೇಶ ಶಾನಭಾಗ್‌ ಸೇರಿದಂತೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  ಈಶ್ವರ ಕರಾಟ , ಸುನಿತಾ ಸತ್ಯಣ್ಣವರ, ಡಾ|ನಾಗರಾಜ್‌ ಎಸ್‌. ಕಾರ್ಯಕ್ರಮ ನಡೆಸಿಕೊಟ್ಟರು. ಡಾ|ಜ್ಯೋತಿ ದೇಶಪಾಂಡೆ, ಜಾನಪದ ಸಂಶೋಧನಾ ವಿದ್ಯಾರ್ಥಿ ರಜೀಯಾ ನದಾಫ್‌ ಜಾನಪದ ಗೀತೆಗಳನ್ನು ಹಾಡಿ ಗಮನ ಸೆಳೆದರು. 

ಟಾಪ್ ನ್ಯೂಸ್

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

pಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

dcನಾಳೆ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮನ: ಮುಲ್ಲೈ ಮುಗಿಲನ್‌

ನಾಳೆ ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ಆಗಮನ: ಮುಲ್ಲೈ ಮುಗಿಲನ್‌

Heavy Rain ಹೊಳೆ ಮಧ್ಯೆ ಸಿಲುಕಿಕೊಂಡ ಪಿಕಪ್‌; ಕಾರ್ಯಾಚರಣೆ

Heavy Rain ಹೊಳೆ ಮಧ್ಯೆ ಸಿಲುಕಿಕೊಂಡ ಪಿಕಪ್‌; ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾಗಿ ಪಾಠ ಮಾಡಿದ ಜಿಲ್ಲಾಧಿಕಾರಿ

Dharwad; 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾಗಿ ಪಾಠ ಮಾಡಿದ ಜಿಲ್ಲಾಧಿಕಾರಿ

ba-bommai

Prajwal Case;ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಿ,ಸಂತ್ರಸ್ಥರಿಗೆ ನ್ಯಾಯ ದೊರೆಯಬೇಕು: ಬೊಮ್ಮಾಯಿ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

Dharwad: ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳ ಮನೆಗೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಖಾಕಿ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

Hubballi: ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ

Hubballi: ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ

MUST WATCH

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ಪ್ರಜ್ವಲ್ ರೇವಣ್ಣ ಅರೆಸ್ಟ್​..!

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

ಹೊಸ ಸೇರ್ಪಡೆ

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

pಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.