ಇತಿಹಾಸದ ವಿಚಾರಗಳ ಬಗ್ಗೆ ವಿರೋಧ ಸಹಜ, ಆದರೆ ರಾಜಕೀಕರಣ ಸಲ್ಲದು: ಸಿಎಂ ಬೊಮ್ಮಾಯಿ
Team Udayavani, Aug 21, 2022, 11:23 AM IST
ಹುಬ್ಬಳ್ಳಿ: ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಎಲ್ಲ ರಾಜಕೀಯ ಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸ ವಿಚಾರಗಳ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಇರುವುದು ಸಹಜ. ಅದನ್ನು ರಾಜಕೀಕರಣ ಮಾಡಬಾರದು. ಪ್ರಜಾಪ್ರಭುತ್ವ ಜವಾಬ್ದಾರಿ ಅರಿತು ಯಾವ ವಿಷಯ ಎಷ್ಟರ ಮಟ್ಟಿಗೆ ಚರ್ಚಿಸಬೇಕು ಎಂಬುದನ್ನು ಅರಿತು ನಡೆಯಬೇಕು. ಕಾನೂನು-ಸುವ್ಯವಸ್ಥೆ ಹಾಳುಮಾಡುವ ಕೆಲಸ ಯಾರು ಕೂಡ ಮಾಡಬಾರದು ಎಂದರು.
ಇಂದಿರಾ ಗಾಂಧಿ ಅವರು ವೀರ ಸಾವರ್ಕರ್ ಅವರನ್ನು ದೇಶದ ಶ್ರೇಷ್ಠ ಪುತ್ರ ಎಂದು ಬಣ್ಣಿಸಿದ್ದರು. ಆದರೆ, ಅದೇ ಕಾಂಗ್ರೆಸ್ ನ ಮಣಿಶಂಕರ ಅಯ್ಯರ್ ಅವರು ಸಾವರ್ಕರ್ ಅವರನ್ನು ಅವಮಾನಿಸಿದ್ದರು. ಇತಿಹಾಸದ ವಿಚಾರಗಳ ಬಗ್ಗೆ ಕೆಲವರು ನಂಬಿಕೆ ಇಡುತ್ತಾರೆ. ಕೆಲವರು ವಿರೋಧ ವ್ಯಕ್ತ ಪಡಿಸುತ್ತಾರೆ. ಹಾಗಂತ ಬೀದಿಗೆ ಎಳೆದು ತರಬಾರದು ಎಂದರು.
ಇದನ್ನೂ ಓದಿ:ರಾಹುಲ್- ಸೋನಿಯಾ ಒಪ್ಪುತ್ತಿಲ್ಲ, ಪ್ರಿಯಾಂಕಾ ಕಡೆ ಒಲವಿಲ್ಲ: ಯಾರಿಗೆ ಸಿಗಲಿದೆ ಕೈ ಗದ್ದುಗೆ?
ಕಳಸಾ ಬಂಡೂರಿ, ಮಹದಾಯಿ ಯೋಜನೆ ನೆನಗುದಿಗೆ ಬಿದ್ದಿಲ್ಲ. ಈಗಾಗಲೇ ಸಾಕಷ್ಟು ಪ್ರಗತಿಯಾಗಿದೆ. ಅರಣ್ಯ ಮತ್ತು ಪರಿಸರ ಸಂಬಂಧಿ ವಿಷಯ ಹಾಗೂ ಸಿಡಬ್ಲ್ಯುಸಿ ಅನುಮೋದನೆ ಅಂತಿಮ ಹಂತದಲ್ಲಿದೆ. ಅನುಮೋದನೆ ದೊರೆತ ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್