ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ
•ಗಬ್ಬೂರು ಬೈಪಾಸ್ ಬಳಿ ಹೆದ್ದಾರಿ ತಡೆ•ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ-ಬಿಡುಗಡೆ
Team Udayavani, Jun 11, 2019, 7:12 AM IST
ಹುಬ್ಬಳ್ಳಿ: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತಪರ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
ರಾಜ್ಯ ರೈತ ಸಂಘ-ಹಸಿರು ಸೇನೆ ಮತ್ತು ವಿವಿಧ ರೈತ ಪರ ಸಂಘಟನೆಗಳಿಂದ ರಾಜ್ಯವ್ಯಾಪಿ ರಾಷ್ಟ್ರೀಯ ಹೆದ್ದಾರಿ ಬಂದ್ ಕರೆ ಮೇರೆಗೆ ಇಲ್ಲಿನ ಗಬ್ಬೂರು ಬೈಪಾಸ್ ಬಳಿ ಸುಮಾರು ಅರ್ಧ ಗಂಟೆ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು.
ಈ ಹಿಂದೆ ಇದ್ದ ಭೂಸ್ವಾಧೀನ ಕಾಯ್ದೆಗೆ ರಾಜ್ಯ ಸಮ್ಮಿಶ್ರ ಸರಕಾರ ತಿದ್ದುಪಡಿ ತರುವ ಮೂಲಕ ರೈತರಿಗೆ ಮರಣ ಶಾಸನ ನಿರ್ಮಿಸುತ್ತಿದೆ. ಈ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು. ರಾಜ್ಯದಲ್ಲಿ ಮಳೆ ಇಲ್ಲದೇ ಭೀಕರ ಬರಗಾಲ ಆವರಿಸಿದೆ. ಜನ, ಜಾನುವಾರುಗಳು ಕುಡಿಯಲು ನೀರಿಲ್ಲದೇ ಪರಿತಪಿಸುವಂತಾಗಿದೆ. ಬರಗಾಲ ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಹೋರಾಟ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು ಸಿಎಆರ್ ಮೈದಾನಕ್ಕೆ ಕರೆದ್ಯೊಯ್ದು ನಂತರ ಬಿಡುಗಡೆಗೊಳಿಸಿದರು. ಚಂದ್ರಶೇಖರ ಕಬ್ಬೂರ, ರವಿ ತಿರ್ಲಾಪುರ, ಮಂಜುನಾಥ ಕಾಲವಾಡ, ಕಲ್ಮೇಶ ಲಿಗಾಡೆ, ಮಲ್ಲಪ್ಪ ನೇಸರಗಿ, ಮಂಜು ಕೊಪ್ಪದ, ಶಾರದಾ ಹಿರೇಮಠ, ನೀಲವ್ವ ಹೂಲಿ ಇನ್ನಿತರರು ಪಾಲ್ಗೊಂಡಿದ್ದರು. ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ, ಡಿಸಿಪಿಗಳಾದ ಶಿವಕುಮಾರ ಗುಣಾರೆ, ನಾಗೇಶ ಡಿ.ಎಲ್. ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…