ಬೇಂದ್ರೆ ಪರವಾನಗಿ ನವೀಕರಣಕ್ಕೆ ವಿರೋಧ
Team Udayavani, Jul 24, 2019, 10:11 AM IST
ಹುಬ್ಬಳ್ಳಿ: ಬೇಂದ್ರೆ ಸಾರಿಗೆ ರಹದಾರಿ ಪರವಾನಗಿ ನವೀಕರಿಸದಂತೆ ಒತ್ತಾಯಿಸಿ ವಾಯವ್ಯ ಸಾರಿಗೆ ಸಂಸ್ಥೆ ಸಿಬ್ಬಂದಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಬೇಂದ್ರೆ ಸಾರಿಗೆಯ ರಹದಾರಿ ಪರವಾನಗಿ ನವೀಕರಿಸದಂತೆ ಒತ್ತಾಯಿಸಿ ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ನೇತೃತ್ವದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮಂಗಳವಾರ ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನಸೌಧಕ್ಕೆ ಮೆರವಣಿಗೆ ಮೂಲಕ ಆಗಮಿಸಿ ಪ್ರತಿಭಟನೆ ನಡೆಸಿದರು. ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಯಾವುದೇ ಆಮಿಷ ಹಾಗೂ ಒತ್ತಡಗಳಿಗೆ ಮಣಿದು ಬೇಂದ್ರೆ ಸಾರಿಗೆಗೆ ರಹದಾರಿ ಪರವಾನಗಿ ನವೀಕರಣ ಅಥವಾ ತಾತ್ಕಾಲಿಕ ರಹದಾರಿ ಪರವಾನಗಿ ನೀಡಬಾರದು. ಅವಳಿ ನಗರದ ನಡುವೆ ಬಿಆರ್ಟಿಎಸ್ ಯೋಜನೆ ಅನುಷ್ಠಾನಗೊಂಡ ನಂತರ ಬೇಂದ್ರೆ ಸಾರಿಗೆ ರಹದಾರಿ ಪರವಾನಗಿ ನವೀಕರಣ ಮಾಡದಂತೆ ಸರಕಾರ ಸ್ಪಷ್ಟವಾದ ಆದೇಶ ಹೊರಡಿಸಿದೆ. ಬೇಂದ್ರೆ ಸಾರಿಗೆ ಮಾಲೀಕರು ಇತರೆ ಮಾರ್ಗದಿಂದ ನವೀಕರಣ ಪಡೆಯುವ ಕೆಲಸಕ್ಕೆ ಕೈ ಹಾಕಿದ್ದು, ಸರಕಾರ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಹಿಂದಿನ ಆದೇಶ ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕ ಮುಖಂಡ ಆರ್.ಎಫ್. ಕವಳಿಕಾಯಿ ಮಾತನಾಡಿ, ಬೇಂದ್ರೆ ಸಾರಿಗೆ ಬಸ್ಗಳು ಸಂಚಾರ ಮಾಡುತ್ತಿರುವುದರಿಂದ ಸಾರಿಗೆ ಸಂಸ್ಥೆಗೆ ನಿತ್ಯ ಸುಮಾರು ಐದು ಲಕ್ಷ ರೂ. ನಷ್ಟವಾಗುತ್ತಿದೆ. ಇತ್ತೀಚೆಗೆ ಬಿಆರ್ಟಿಎಸ್ ಸಂಸ್ತೆ 100 ಬಸ್ಗಳು ನಿತ್ಯ ಸುಮಾರು 800 ಟ್ರಿಪ್ಗ್ಳಲ್ಲಿ ಸಂಚಾರ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದರು.
ಕಾರ್ಮಿಕ ಮುಖಂಡ ಬಿ.ವಿ. ಕುಲಕರ್ಣಿ ಮಾತನಾಡಿ, ಸಾವಿರಾರು ಕೋಟಿ ರೂ. ಖರ್ಚು ಮಾಡಿ ಬಿಆರ್ಟಿಎಸ್ ಸಾರಿಗೆ ಅನುಷ್ಠಾನಗೊಳಿಸಲಾಗಿದೆ. ಇದೀಗ ಖಾಸಗಿಯವರಿಗೆ ಅನುಮತಿ ಕೊಡುವುದರಿಂದ ಸಾವಿರಾರು ಕೋಟಿ ರೂ. ಯೋಜನೆ ಸಾಕಷ್ಟು ನಷ್ಟವಾಗಲಿದೆ. ಬೇಂದ್ರೆ ಸಾರಿಗೆ ರಹದಾರಿ ನವೀಕರಣ ಮಾಡುವುದರಿಂದ ಖಾಸಗಿ ಮಾಲೀಕರಿಗೆ ಲಾಭ ಮಾಡಿಕೊಟ್ಟಂತಾಗುತ್ತದೆ. ಈಗಾಗಲೇ ನೂರಾರು ಕೋಟಿ ರೂ. ನಷ್ಟದಲ್ಲಿರುವ ಸಂಸ್ಥೆ ಮತ್ತಷ್ಟು ಆರ್ಥಿಕ ಸಮಸ್ಯೆ ಅನುಭವಿಸಲಿದ್ದು, ಸರಕಾರ, ಸಾರಿಗೆ ಪ್ರಾಧಿಕಾರ, ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣಗಳು ಯಾವುದೇ ಕಾರಣಕ್ಕೂ ಬೇಂದ್ರೆ ಸಾರಿಗೆ ರಹದಾರಿ ಪರವಾನಗಿ ವಿಚಾರದಲ್ಲಿ ಖಾಸಗಿ ಮಾಲೀಕರನ್ನು ಬೆಂಬಲಿಸಬಾರದು ಎಂದು ಒತ್ತಾಯಿಸಿದರು. ಕಾರ್ಮಿಕ ಮುಖಂಡರಾದ ರಮೇಶ ಪಡತರೆ, ಎನ್.ಎ. ಖಾಜಿ, ಎಂ.ವಿ. ಭಗವತಿ, ವೈ.ಎಸ್. ಹುಳ್ಳಿ, ಎಸ್.ಬಿ. ಹಿರೇಮಠ, ಎ.ಎಲ್. ಕುಲಕರ್ಣಿ, ಬಿ.ಡಿ. ತಿಮ್ಮನಗೌಡರ, ಪ್ರತಿಭಾ ಚರಂತಿಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ