ವಿದ್ಯುತ್-ತೈಲ ಬೆಲೆ ಏರಿಕೆಗೆ ವಿರೋಧ
Team Udayavani, Jun 24, 2021, 4:18 PM IST
ಕಲಘಟಗಿ: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರಕಾರಗಳು ತೈಲ ಬೆಲೆ ಹಾಗೂ ವಿದ್ಯುತ್ ದರ ಏರಿಸುವ ಮೂಲಕ ಜನಸಾಮಾನ್ಯರ ಹಾಗೂ ಮಧ್ಯಮ ವರ್ಗದವರ ಬದುಕನ್ನು ಸಂಕಷ್ಟಕ್ಕೆ ತಳ್ಳಿವೆ ಎಂದು ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಆರೋಪಿಸಿದರು.
ಜೆಡಿಎಸ್ ತಾಲೂಕು ಘಟಕದ ನೇತೃತ್ವದಲ್ಲಿ ತೈಲ ಬೆಲೆ ಹಾಗೂ ವಿದ್ಯುತ್ ದರ ಏರಿಸಿರುವುದನ್ನು ಕಡಿತಗೊಳಿಸುವಂತೆ ಆಗ್ರಹಿಸಿ ಸಿಎಂಗೆ ಬರೆದ ಮನವಿಯನ್ನು ಬುಧವಾರ ಉಪತಹಶೀಲ್ದಾರ್ ಬಸವರಾಜ ಅಂಗಡಿ ಅವರಿಗೆ ಸಲ್ಲಿಸಿ ಮಾತನಾಡಿದರು.
ತೈಲ ಬೆಲೆ ಹೆಚ್ಚಳದಿಂದ ಸರಕು ಸಾಗಾಣಿಕೆ ದರ ಏರಿದ್ದು, ಶ್ರೀಸಾಮಾನ್ಯರು ಬಳಸುವ ಆಹಾರ ಸಾಮಗ್ರಿ, ಅಡುಗೆ ಎಣ್ಣೆ, ಬೇಳೆಕಾಳು, ತರಕಾರಿ ಮುಂತಾದ ಪದಾರ್ಥಗಳ ಬೆಲೆ ಗಗನ ಮುಟ್ಟಿದೆ. ವಿದ್ಯುತ್ ದರ ಏರಿಕೆಯ ಮೂಲಕ ಮಧ್ಯಮ ವರ್ಗದವರಿಗೆ ಶಾಕ್ ನೀಡಿದೆ. ರೈತರು ಬೆಳೆದ ಫಸಲು ಮಾರಾಟವಾಗದೇ ಹೊಲದಲ್ಲಿಯೇ ಹಾಳಾಗಿದೆ ಎಂದು ಆರೋಪಿಸಿದರು. ಸರಕಾರ ಮನವಿಗೆ ಸ್ಪಂದಿಸದಿದ್ದಲ್ಲಿ ಪಕ್ಷದ ಕಾರ್ಯಕರ್ತರು ಹೋಬಳಿ ಮಟ್ಟದಿಂದ ಹಿಡಿದು ರಾಜ್ಯಮಟ್ಟದವರೆಗೆ ಸರಕಾರಿ ಕಚೇರಿಗಳ ಎದುರು ಧರಣಿ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದರು.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ವೀರಣ್ಣ ಶೀಗಿಗಟ್ಟಿ, ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಹನಮಂತಪ್ಪ ಕಲ್ಲವಡ್ಡರ, ಶೇಕಣ್ಣ ಅಂಗಡಿ, ಸಹದೇವ ಹುರಕಡ್ಲಿ, ಬಸವರಾಜ ಅಲ್ಲಾಪೂರ, ಅಲ್ಲಿಸಾಬ ವಾಲಿಕಾರ, ಬಸವರಾಜ ಮುದಿಗೌಡ್ರ, ಚನ್ನಪ್ಪ ಗಾಣಿಗೇರ, ಶಿವಾನಂದ ಅತ್ತಿಮರದ, ಬಸಪ್ಪ ಗಾಣಿಗೇರ, ನಿಂಗಪ್ಪ ತಳವಾರ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ