ಆಸ್ತಿ ಕರ ಹೆಚ್ಚಳಕ್ಕೆ ವಿರೋಧ
Team Udayavani, Jun 13, 2020, 9:35 AM IST
ಹುಬ್ಬಳ್ಳಿ: ಮಹಾನಗರ ಪಾಲಿಕೆ ಆಸ್ತಿಕರ ಹೆಚ್ಚಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಮುಖಂಡರು ಶುಕ್ರವಾರ ಪಾಲಿಕೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಕೋವಿಡ್-19 ಸಂಕಷ್ಟದ ಪರಿಸ್ಥಿತಿಯಲ್ಲಿ ಸರಕಾರ ಕರ ಹೆಚ್ಚಿಸಿರುವುದು ಸರಿಯಾದ ಕ್ರಮವಲ್ಲ. ಈ ನಿರ್ಧಾರ ಹಿಂಪಡೆಯುವಂತೆ ಸರಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮೂಲಕ ಒತ್ತಾಯಿಸಲಾಗಿತ್ತು. ಆದರೆ ಜನರ ಸಂಕಷ್ಟ ಅರಿಯುವಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಸರಕಾರದ ಖಜಾನೆ ತುಂಬಿಸಿಕೊಳ್ಳಲು ಜನರ ಮೇಲೆ ಹೆಚ್ಚುವರಿ ತೆರಿಗೆ ಹೆಚ್ಚಿಸಿದ್ದು, ಇದೊಂದು ಜನ ವಿರೋಧಿ ಕ್ರಮ. ಬಿಜೆಪಿ ಸರಕಾರ ಘೋಷಿಸಿರುವ 20 ಸಾವಿರ ಕೋಟಿ ರೂ. ಪ್ಯಾಕೇಜ್ ಇಲ್ಲಿನ ಜನರಿಗೆ ತಲುಪಿಲ್ಲ. ಕೇವಲ ಆಶ್ವಾಸನೆಗಳ ಮೂಲಕ ಜನರನ್ನು ವಂಚಿಸುವ ಕೆಲಸವನ್ನು ಬಿಜೆಪಿ ಸರಕಾರದಿಂದ ನಡೆಯುತ್ತಿದೆ. ಕೂಡಲೇ ತೆರಿಗೆ ಹೆಚ್ಚಳ ವಾಪಸ್ ಪಡೆಯಬೇಕು, ವಿಶೇಷ ಪ್ಯಾಕೇಜ್ ಜನರಿಗೆ ತಲುಪಬೇಕೆಂದು ಒತ್ತಾಯಿಸಿ ಸರಕಾರಗಳ ವಿರುದ್ಧ ಘೋಷಣೆ ಕೂಗಿದರು.
ಆಪ್ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಮಾತನಾಡಿ, ತೆರಿಗೆ ಹೆಚ್ಚಳದಿಂದ ಪಾಲಿಕೆಗೆ ಸುಮಾರು 12 ಕೋಟಿ ರೂ. ಹೆಚ್ಚಳವಾಗಲಿದೆ. ಆದರೆ ಇದು ಜನಸಾಮಾನ್ಯರಿಗೆ ಹೊರೆಯಾಗಲಿದೆ ಎನ್ನುವ ಕಾಳಜಿ ಸರಕಾರಕ್ಕಿಲ್ಲ. ಸರಕಾರ ಕೂಡಲೇ ಎಚ್ಚೆತ್ತುಕೊಂಡು ತೆರಿಗೆ ಕಡಿಮೆ ಮಾಡದಿದ್ದರೆ ಜನಾಂದೋಲನ ರೂಪಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದರು.
ಮುಖಂಡ ವಿಕಾಸ ಸೊಪ್ಪಿನ ಮಾತನಾಡಿ, ಲಾಕ್ ಡೌನ್ ಸಂದರ್ಭದಲ್ಲಿ ಜನರು ಹೋರಾಟಕ್ಕೆ ಬರಲ್ಲ ಎನ್ನುವ ಕಾರಣಕ್ಕೆ ಹಲವು ಜನ ವಿರೋಧಿ ಕ್ರಮ ಹೇರುವ ಕೆಲಸ ಸರಕಾರಗಳಿಂದ ನಡೆಯುತ್ತಿವೆ. ಕೂಡಲೇ ತೆರಿಗೆ ಹೆಚ್ಚಳ ಕ್ರಮವನ್ನು ಸರಕಾರ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು. ಮುಖಂಡರಾದ ಶಶಿಕುಮಾರ ಸುಳ್ಳದ, ವಿವೇಕಾನಂದ ಸಾಲಿನ್ಸ್, ಶಿವಲಿಂಗಪ್ಪ ಜಡೆಣ್ಣವರ, ವಿಜಯ ಸಾಯಿ, ತ್ಯಾಗರಾಜ ಅಲ್ಲಂಪಟ್ಟಿ, ಅನಂತಕುಮಾರ ಭಾರತೀಯ, ಲಕ್ಷ್ಮಣ ರಾಠೊಡ, ಪ್ರತಿಭಾ ದಿವಾಕರ, ಹರಿಕೃಷ್ಣ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ