ಟಿಪ್ಪು ಜಯಂತಿ ಆಚರಣೆಗೆ ವಿರೋಧ;ಪ್ರಮೋದ್ ಮುತಾಲಿಕ್ ಸೇರಿ ಹಲವು ಕಾರ್ಯಕರ್ತರು ಪೊಲೀಸ್ ವಶಕ್ಕೆ
Team Udayavani, Nov 10, 2022, 11:31 AM IST
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮುತ್ತಿಗೆ ಹಾಕಲು ಆಗಮಿಸಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಮುತ್ತಿಗೆ ಹಾಕಲು ಮೈದಾನದ ಬಳಿಯಿರುವ ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಸಂದರ್ಭ ಪೊಲೀಸರು ತಡೆದರು. ಅವರದೇ ಕಾರಿನಲ್ಲಿ ವಶಕ್ಕೆ ಪಡೆದು ಸಿಎಆರ್ ಮೈದಾನಕ್ಕೆ ಕರೆದುಕೊಂಡು ಹೋಗಲಾಯಿತು. ಇದೇ ಸಂದರ್ಭದಲ್ಲಿ ಅವರೊಂದಿಗೆ ಆಗಮಿಸಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಕರೆದೊಯ್ಯಲಾಯಿತು.
ಪ್ರಮೋದ್ ಮುತಾಲಿಕ್ ಮೈದಾನಕ್ಕೆ ಬರುವ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮೈದಾನ ಸುತ್ತಲೂ ಪೊಲೀಸ್ ಬಂದೋಬಸ್ತ್ ಆಯೋಜಿಸಿ ಸಂಚರಿಸುವ ಎಲ್ಲಾ ಕಾರುಗಳನ್ನು ಪೊಲೀಸರು ತಪಾಸಣೆ ಮಾಡುತ್ತಿರುವುದು ಕಂಡು ಬಂದಿತು.
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಹೀಗಾಗಿ ನಮಗೆ ಪ್ರತಿಭಟನೆ ಮಾಡಲು ಬಿಡುತ್ತಿಲ್ಲ. ಆತ ಹಿಂದೂ ಮತ್ತು ಕನ್ನಡ ವಿರೋಧಿ ಹಾಗಾಗಿ ಎಲ್ಲಿಯೂ ಆಚರಣೆ ಮಾಡಲು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿ ಆಚರಣೆ ತಡೆಯುತ್ತೇವೆ. ಎಲ್ಲ ಮಹಾಪುರುಷರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಮಾಡಬಾರದು. ಮಹಾನಗರ ಪಾಲಿಕೆ ತೆಗೆದುಕೊಂಡ ನಿಲುವನ್ನು ಖಂಡಿಸುತ್ತೇವೆ. ಎಐಎಂಐಎಂ ದೇಶ ದ್ರೋಹಿ ಪಕ್ಷವಾಗಿದೆ. ದೇಶ ದ್ರೋಹಿಗಳನ್ನು ಬಿಜೆಪಿ ಬೆಳೆಸುತ್ತಿದೆ. ಇದಕ್ಕೆ ನಮ್ಮ ವಿರೋಧವಿದೆ. ಮತಾಂತರ ಮಾಡಿದವರ ಜಯಂತಿ ಆಚರಣೆ ಸರಿಯಲ್ಲ. ಟಿಪ್ಪು ಜಯಂತಿ ಆಚರಣೆ ಬೇಡವೆಂದು ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?