ಚುನಾವಣೆಗೆ ಸಂಘಟನಾತ್ಮಕವಾಗಿ ಸಜ್ಜಾಗಿ
Team Udayavani, Apr 9, 2021, 7:57 PM IST
ಹುಬ್ಬಳ್ಳಿ: ಹು-ಧಾ ಮಹಾನಗರ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ವಾರ್ಡ್ನಲ್ಲೂ ಪಕ್ಷ ಸಂಘಟನಾತ್ಮಕವಾಗಿ ಸಜ್ಜಾಗಬೇಕಾಗಿದೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಅರವಿಂದ ಬೆಲ್ಲದ ಹೇಳಿದರು.
ದೇಶಪಾಂಡೆನಗರದ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಮಹಾನಗರ ಜಿಲ್ಲಾ ಪದಾಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಕ್ಷದ ಬಲವರ್ಧನೆಗೆ ವಿವಿಧ ಪ್ರಕೋಷ್ಠ ಹಾಗೂ ಮೋರ್ಚಾಗಳ ಕಾರ್ಯ ಮುಖ್ಯವಾಗಿದೆ. ಪ್ರತಿಯೊಂದು ವಿಭಾಗಕ್ಕೂ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಹೆಚ್ಚು ಹೆಚ್ಚು ಸಂಘಟನಾತ್ಮಕ ಸಭೆಗಳು ನಡೆಯಬೇಕು. ಉಸ್ತುವಾರಿಗಳು ಸಭೆಗಳನ್ನು ಆಯೋಜಿಸುವ ಜವಾಬ್ದಾರಿ ತೋರಬೇಕು ಎಂದರು.
ಪ್ರತಿಯೊಂದು ಮಂಡಲದಲ್ಲಿ ಇಂತಹ ಸಭೆಗಳು ನಡೆಯುತ್ತಿರುವುದರಿಂದ ಪಕ್ಷದ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸಬಹುದಾಗಿದೆ. ಜತೆಗೆ ಪದಾ ಧಿಕಾರಿಗಳು ನಾಯಕತ್ವ ಬೆಳೆಸಿಕೊಂಡಂತಾಗಲಿದೆ ಎಂದರು. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಹಾಗೂ ಧಾರವಾಡ ವಿಭಾಗ ಪ್ರಭಾರಿ ಲಿಂಗರಾಜ ಪಾಟೀಲ ಮಾತನಾಡಿ, ಪಕ್ಷದ ಚಟುವಟಿಕೆಗಳು ನಿರಂತರವಾಗಿರಬೇಕು. ಎಷ್ಟೋ ಜನರು ಪಕ್ಷದ ಪದಾಧಿ ಕಾರಿಗಳಾಗಲು ಸರದಿಯಲ್ಲಿ ನಿಂತಿದ್ದಾರೆ. ನಿಮ್ಮೆಲ್ಲರಿಗೆ ಪಕ್ಷ ನೀಡಿದ ಅವಕಾಶವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಪಾಲಿಕೆ ಚುನಾವಣೆಯಲ್ಲಿ 82 ವಾರ್ಡ್ಗಳಲ್ಲಿ ಕನಿಷ್ಠ 72 ಸ್ಥಾನಗಳನ್ನು ಪಡೆಯಲು ಶ್ರಮಿಸಬೇಕೆಂದರು.
ಪಕ್ಷದ ಮುಖಂಡರಾದ ರಾಜಕುಮಾರ ಬಸವಾ, ವಿಜಯಾನಂದ ಶೆಟ್ಟಿ, ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ರವಿ ನಾಯ್ಕ, ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಬಸವರಾಜ ಗರಗ, ಈರಣ್ಣ ಹಪ್ಪಳಿ, ಕೃಷ್ಣ ಗಂಡಗಾಳೇಕರ, ವಸಂತ ನಾಡಜೋಶಿ, ಸಿದ್ದು ಕಲ್ಯಾಣಶೆಟ್ಟಿ, ವಿಶ್ವನಾಥ ಪಾಟೀಲ, ಮುರುಗೇಶ ಹೊರಡಿ, ಅನಸೂಯಾ ಹಿರೇಮಠ, ಸುಜಾತಾ ಕಳ್ಳಿಮನಿ, ಪೂರ್ಣಿಮಾ ಶಿಂಧೆ, ಪ್ರಮಿಳಮ್ಮ ಕೊಠಾರಿ ಇನ್ನಿತರರಿದ್ದರು. ಸಭೆ ಆರಂಭದಲ್ಲಿ ಮಾಜಿ ಮಹಾಪೌರ ಸುಧಿಧೀರ ಸರಾಫ್ ಹಾಗೂ ಬಿಜೆಪಿ ಮಹಾನಗರ ಜಿಲ್ಲಾ ಉಪಾಧ್ಯಕ್ಷರಾಗಿದ್ದ ಶಂಕರ ಛಬ್ಬಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!