ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಆಮ್ಲಜನಕ ದಾಹ


Team Udayavani, May 9, 2021, 3:13 PM IST

klhjkuouiu

ವರದಿ :ಡಾ|ಬಸವರಾಜ ಹೊಂಗಲ್‌

ಧಾರವಾಡ: ರೆಮ್‌ಡೆಸಿವಿಯರ್‌ ಶಾಸಕರು, ಸಚಿವರ ಪ್ರಭಾವ ಬೀರುತ್ತಿರುವ ರೋಗಿಗಳ ಸಂಬಂಧಿಕರು, ಪ್ರಾಣವಾಯುವಿಗಾಗಿ ಕಾಯುತ್ತಿರುವವರು ನೂರಾರು ಕೋವಿಡ್‌ ಸೊಂಕಿತರು, ಹೊರ ಜಿಲ್ಲೆಯವರ ಭಾರ ಹೊರದೇ ಒದ್ದಾಡುತ್ತಿರುವ ಧಾರವಾಡ ಜಿಲ್ಲೆ, ಸ್ಥಳೀಯರಿಗೆ ಬೆಡ್‌ ಸಿಗದೇ ನಲುಗುತ್ತಿರುವ ಬಡವರು.

ಹೌದು. ಆಕ್ಸಿಜೆನ್‌ ಪೂರೈಕೆ ವಿಚಾರದಲ್ಲಿ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಸುಪ್ರಿಂಕೋರ್ಟ್‌ ತೀರ್ಪುಗಳು ಸದ್ಯಕ್ಕೆ ಚರ್ಚೆಯಲ್ಲಿವೆ. ಜಿಲ್ಲೆಯಲ್ಲಿ ಅತೀ ಈವರೆಗೂ 2300 ಕ್ಕೂ ಅಧಿಕ ಜನರಿಗೆ ಸರ್ಕಾರಿ-ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಸರಾಗವಾಗಿ ನಡೆದಿತ್ತು. ಆದರೆ ಕೋವಿಡ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತ ಸಾಗಿದ್ದು, ಇದು ಹೀಗೆ ಮುಂದುವರಿದರೆ ಇನ್ನೊಂದು ವಾರದಲ್ಲಿ ಜಿಲ್ಲೆಯಲ್ಲಿ ಆಕ್ಸಿಜೆನ್‌ಗೆ ಪರದಾಟ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರತಿದಿನ 45 ಟನ್‌ ಆಕ್ಸಿಜನ್‌ ಪೂರೈಕೆ ಯಾಗುತ್ತಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿರುವ ಕೋವಿಡ್‌ ರೋಗಿಗಳಿಗೆ ಇದು ಸರಿಯಾಗುತ್ತಿದೆ. ಆದರೆ ಇಲ್ಲಿನ ಘಟಕಗಳಿಂದ ಅನಿವಾರ್ಯವಾಗಿ ಹೊರ ಜಿಲ್ಲೆಗಳಿಗೂ ಆಕ್ಸಿಜೆನ್‌ ಹೋಗುತ್ತಿದ್ದು, ಸ್ಥಳೀಯ ರೋಗಿಗಳು ಮಾತ್ರ ಪರದಾಡುವ ಸ್ಥಿತಿ ಬಂದಿದೆ.

ಹೊರ ಜಿಲ್ಲೆಯ ರೋಗಿಗಳು ಹೆಚ್ಚು : ಹುಬ್ಬಳ್ಳಿ-ಧಾರವಾಡ ಉತ್ತರ ಕರ್ನಾಟಕ ಭಾಗದ ಪ್ರಮುಖ ನಗರಗಳಾಗಿದ್ದು, ಇಲ್ಲಿ ಕಿಮ್ಸ್‌, ಎಸ್‌ ಡಿಎಂ, ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಸಂಖ್ಯೆಯೂ ಅಧಿಕವಾಗಿದೆ. ಕಳೆದ ಬಾರಿ ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸೋಂಕಿತರ ಸಂಖ್ಯೆ ಸಾವಿರ ಸಂಖ್ಯೆ ದಾಟಿರಲಿಲ್ಲ. ಹೀಗಾಗಿ ಎಲ್ಲವನ್ನೂ ಜಿಲ್ಲಾಡಳಿತ ಅಚ್ಚುಕಟ್ಟಾಗಿ ನಿಭಾಯಿಸಿ, ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡಿತ್ತು. ಆದರೆ ಈ ಬಾರಿ ಎರಡು ಸಾವಿರಕ್ಕೂ ಅಧಿಕ ಬೆಡ್‌ಗಳನ್ನು ವ್ಯವಸ್ಥೆ ಮಾಡಿದರೂ ಇನ್ನೂ ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಇದು ಹೀಗೆ ಮುಂದುವರಿದರೆ ಬೆಡ್‌ಗಳನ್ನು ಪೂರೈಸಬಹುದು. ಆದರೆ ಆಕ್ಸಿಜೆನ್‌ ಬೆಡ್‌-ವೆಂಟಿಲೇಟರ್‌ ಬೆಡ್‌ಗಳ ಕೊರತೆ ಎದುರಾಗುವುದು ಬಹುತೇಕ ಖಚಿತ ಎನ್ನಬಹುದು.

ಪ್ರಸ್ತುತ ಜಿಲ್ಲೆಯಲ್ಲಿರುವ ರೋಗಿಗಳ ಪೈಕಿ ಶೇ.35 ರೋಗಿಗಳು ಅಕ್ಕಪಕ್ಕದ ಜಿಲ್ಲೆಗಳಿಂದ ಬಂದವರೇ ಆಗಿದ್ದಾರೆ. ಇಲ್ಲಿ ಮಾನವೀಯತೆ ದೃಷ್ಟಿಯಿಂದ ಸಹಜವಾಗಿಯೇ ಅವರು ಕಿಮ್ಸ್‌ಗೆ ದಾಖಲಾಗಿದ್ದಾರೆ. ಕಾರಣ ಉತ್ತರ ಕರ್ನಾಟಕದಲ್ಲಿ ಇರುವುದು ಇದೊಂದೇ ದೊಡ್ಡ ಆಸ್ಪತ್ರೆ. ಎಲ್ಲಕ್ಕಿಂತ ಹೆಚ್ಚಾಗಿ ಬಡವರಿಗೆ ಸರ್ಕಾರಿ ಆಸ್ಪತ್ರೆಯೆಂದಿರುವುದು ಕಿಮ್ಸ್‌ ಮಾತ್ರ. ಆದರೆ ಆಯಾ ಜಿಲ್ಲೆಗಳಲ್ಲಿಯೇ ಹೆಚ್ಚಿನ ಆಕ್ಸಿಜೆನ್‌ ಬೆಡ್‌ಗಳ ವ್ಯವಸ್ಥಿತ ವೈದ್ಯಕೀಯ ಸೇವೆ ರೂಪುಗೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಷ್ಟ ಎದುರಿಸಬೇಕಾಗುತ್ತದೆ ಎನ್ನುತ್ತಿದ್ದಾರೆ ಜಿಲ್ಲೆಯ ಹಿರಿಯ ವೈದ್ಯರು.

ರೆಮ್‌ಡೆಸಿವಿಯರ್‌ಗೆ ಸಚಿವರ ಶಿಫಾರಸ್ಸು: ಇನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅತೀ ಅವಶ್ಯವಾಗಿ ಬೇಕಿರುವ ರೆಮ್‌ಡೆಸಿವಿಯರ್‌ ಇಂಜೆಕ್ಷನ್‌ ಕೊರತೆ ಈಗಲೂ ಮುಂದುವರಿದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇದರ ಪೂರೈಕೆ ನಡೆಯುತ್ತಿದ್ದು, ಅಲ್ಲಿ ಅಷ್ಟೇನು ತೊಂದರೆಯಾಗಿಲ್ಲ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಗಂಭೀರ ಸ್ವರೂಪದ ದೇಹಸ್ಥಿತಿ ಹೊಂದಿರುವ ಕೋವಿಡ್‌ ಸೋಂಕಿತರಿಗೆ ಇದರ ಪೂರೈಕೆ ವಿಳಂಬವಾಗುತ್ತಿದ್ದು, ಅವರೆಲ್ಲ ಆತಂಕದಲ್ಲಿದ್ದಾರೆ. ಅದಕ್ಕಾಗಿ ಸ್ಥಳೀಯ ರಾಜಕಾರಣಿಗಳು, ಶಾಸಕರು, ಸಚಿವರು ಸೇರಿದಂತೆ ಪ್ರಭಾವ ಬಳಸಿ ವೈದ್ಯರಿಗೆ ಒತ್ತಡ ಹಾಕಿ ರೆಮ್‌ ಡೆಸಿವಿಯರ್‌ ಇಂಜೆಕ್ಷನ್‌ ಪಡೆಯುತ್ತಿದ್ದಾರೆ.

ಸರ್ಕಾರದತ್ತ ಖಾಸಗಿ ಬೊಟ್ಟು: ಖಾಸಗಿ ಆಸ್ಪತ್ರೆಗಳು ಕಷ್ಟಪಟ್ಟು ರೋಗಿಗಳಿಗೆ ಉತ್ತಮ ಸೇವೆ ನೀಡುವ ಪ್ರಯತ್ನದಲ್ಲಿವೆ. ಆದರೆ ಸರ್ಕಾರದಿಂದ ಪೂರೈಕೆಯಾಗುವ ರೆಮ್‌ಡೆಸಿವಿಯರ್‌ ಸಮಯಕ್ಕೆ ಸರಿಯಾಗಿ ಪೂರೈಕೆಯಾಗದೇ ಹೋಗಿದ್ದರಿಂದ ರೋಗಿಗಳ ಸಂಬಂಧಿಕರಿಗೆ ಚೀಟಿ ಬರೆದುಕೊಟ್ಟು ರೆಮ್‌ಡೆಸಿವಿಯರ್‌ ನೀವೇ ತೆಗೆದುಕೊಂಡು ಬನ್ನಿ ಎಂದು ಹೇಳಿ ಕಳುಹಿಸುತ್ತಿವೆ. ಹಣವಿದ್ದವರು, ನಗರವಾಸಿಗಳು, ನೌಕರರು ಒಂದಿಷ್ಟು ಹಣ ಖರ್ಚು ಮಾಡಿ ಖಾಸಗಿ ಆಸ್ಪತ್ರೆಗಳಲ್ಲಿಯೇ ಹಾಗೂ ಹೀಗೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಹಳ್ಳಿಯ ಬಡವರು, ದುಡಿದು ತಿನ್ನುವವರು ಮಾತ್ರ ಹಳ್ಳಿಯ ವೈದ್ಯರನ್ನೇ ಅವಲಂಬಿಸಿಕೊಂಡು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಾಕ್‌ಡೌನ್‌ ಗುಮ್ಮ: ಇನ್ನು ಈವರೆಗೂ ಜಾರಿಯಲ್ಲಿದ್ದ ಜನತಾ ಕರ್ಫ್ಯೂಗೆ ಬದಲು ಸರ್ಕಾರ ಮೇ 24ರವರೆಗೂ ಸಂಪೂರ್ಣ ಲಾಕ್‌ ಡೌನ್‌ ಹೇರಲು ಸಜ್ಜಾಗಿದ್ದು, ಜಿಲ್ಲೆಯ ಜನರಿಗೆ ಇದು ಮತ್ತಷ್ಟು ಆತಂಕವನ್ನುಂಟು ಮಾಡಿದೆ. ಅಗತ್ಯ ಸೇವೆಗಳೇನೇ ಇದ್ದರೂ ಕೂಡ ಜನರು ಸಣ್ಣ ಪುಟ್ಟ ತೊಂದರೆಯಲ್ಲಿ ನಿರ್ಭಿಡೆಯಿಂದ ಓಡಾಟ ನಡೆಸುವುದು ಕೊಂಚ ಕಷ್ಟವೇ ಆಗಲಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.