ಆಮ್ಲಜನಕ ಪೂರೈಕೆ ಘಟಕ ಆರಂಭ : ಪೊಲೀಸರಿಗೆ ನಿರ್ವಹಣೆ ಕುರಿತು ತರಬೇತಿ
Team Udayavani, May 26, 2021, 4:31 PM IST
ಹುಬ್ಬಳ್ಳಿ: ಸೋನ್ ಸೂದ್- ಸ್ವಾಗ್ ಇಆರ್ಟಿ ಫೌಂಡೇಶನ್ ವತಿಯಿಂದ ನಗರದಲ್ಲಿ ಆಮ್ಲಜನಕ ಪೂರೈಕೆ ಘಟಕ ಆರಂಭಿಸಲಾಗಿದೆ. ರಾಜ್ಯ ರೈಲ್ವೆ ಪೊಲೀಸರು ಇದನ್ನು ನಿರ್ವಹಣೆ ಮಾಡಲಿದ್ದು, ಪೊಲೀಸರಿಗೆ ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.
ಇಲ್ಲಿನ ರೈಲ್ವೆ ನಿಲ್ದಾಣದ ಬಳಿಯಿರುವ ರಾಜ್ಯ ರೈಲ್ವೆ ಪೊಲೀಸ್ ಠಾಣೆ ಪಕ್ಕದಲ್ಲಿ ಘಟಕ ಆರಂಭಿಸಲಾಗಿದೆ. ಆಮ್ಲಜನಕ ಕೊರತೆಯಿಂದ ಯಾರೂ ಸಾವನ್ನಪ್ಪಬಾರದು ಎನ್ನುವ ಕಾರಣಕ್ಕೆ ಈ ಘಟಕ ಆರಂಭಿಸಿದ್ದು, ಅಗತ್ಯ ಇದ್ದವರಿಗೆ ಇಲ್ಲಿ ಆಮ್ಲಜನಕ ಸಿಲೆಂಡರ್ ಸಿಗಲಿದೆ. ವಾಣಿಜ್ಯ ನಗರದಿಂದ ಸುತ್ತಲಿನ 120 ಕಿಮೀ ವ್ಯಾಪ್ತಿವರೆಗೆ ಈ ಸೇವೆ ದೊರೆಯಲಿದೆ. ಸದ್ಯಕ್ಕೆ ವಿವಿಧ ಮಾದರಿಯ 20 ಆಕ್ಸಿಜೆನ್ ಸಿಲೆಂಡರ್ ವ್ಯವಸ್ಥೆ ಮಾಡಲಾಗಿದ್ದು, ಬೇಡಿಕೆ ಆಧರಿಸಿ ಇನ್ನಷ್ಟು ಹೆಚ್ಚಿಸಲು ನಿರ್ಧರಿಸಿದ್ದಾರೆ. ಆಮ್ಲಜನಕ ಸಿಲೆಂಡರ್ ಅಗತ್ಯವುಳ್ಳವರು ರಾಜ್ಯ ರೈಲ್ವೆ ಪೊಲೀಸ್ ಡಿವೈಎಸ್ಪಿ ಎನ್.ಪುಷ್ಪಲತಾ ಮೊ: 9480800462, ಇನ್ಸ್ಪೆಕ್ಟರ್ ಡಿ.ಬಿ.ಪಾಟೀಲ ಮೊ: 948080472, ಪಿಎಸ್ಐ ಸತ್ಯಪ್ಪ ಮುಕ್ಕಣ್ಣವರ-9480800212 ಗೆ ಕರೆ ಮಾಡಬಹುದು.
ರೈಲ್ವೆ ಪೊಲೀಸರು ನಿರ್ವಹಣೆ: ರೈಲ್ವೆ ಎಡಿಜಿಪಿ ಭಾಸ್ಕರ್ ರಾವ್ ಅವರು ಘಟಕ ಆರಂಭಕ್ಕೆ ಕಾಳಜಿ ವಹಿಸಿದ್ದಾರೆ. ಹೀಗಾಗಿ ಎರಡು ಫೌಂಡೇಶನ್ಗಳು ಬೇಕಾದ ಸಿಲೆಂಡರ್ ವ್ಯವಸ್ಥೆ ಮಾಡುತ್ತವೆ. ಅಗತ್ಯ ಜನರಿಗೆ ತಲುಪಿಸುವ ಕಾರ್ಯ ರಾಜ್ಯ ರೈಲ್ವೆ ಪೊಲೀಸರು ನಿರ್ವಹಿಸಲಿದ್ದಾರೆ. ಇದಕ್ಕಾಗಿ ಒಂದಿಷ್ಟು ಸಿಬ್ಬಂದಿ, ವಾಹನ, ಒಂದು ಅಂಬ್ಯುಲೆನ್ಸ್, ಏಕಕಾಲಕ್ಕೆ ಬೇಡಿಕೆ ಬಂದರೆ ತಮ್ಮ ಸರಕಾರಿ ವಾಹನ ಬಳಸಲು ಯೋಜನೆ ರೂಪಿಸಿದ್ದಾರೆ. ಇದಕ್ಕೆ ರೈಲ್ವೆ ಇಲಾಖೆ ವೈದ್ಯಕೀಯ ವಿಭಾಗ ವೈದ್ಯಕೀಯ ನೆರವು ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ