ಪರೇಶ್‌ ಸಾವಿನ ಶೀಘ್ರ ತನಿಖೆಗೆ ಆಗ್ರಹ


Team Udayavani, Jul 6, 2018, 5:36 PM IST

6-july-27.jpg

ಹೊನ್ನಾವರ: ಕೇಂದ್ರದ ಮೋದಿ ಸರಕಾರದ ಅಧೀನದಲ್ಲಿರುವ ಸಿಬಿಐಗೆ ಪರೇಶ್‌ ಮೇಸ್ತನ ಸಾವಿನ ತನಿಖೆಯ ಜವಾಬ್ದಾರಿ ನೀಡಿದಲ್ಲಿ ಕೇವಲ 7 ದಿನಗಳಲ್ಲಿ ನ್ಯಾಯ ಕೊಡಿಸುವುದಾಗಿ ಮುಗ್ಧ ಜನರಿಗೆ ಪ್ರಚೋದನೆ ನೀಡಿದ್ದ ಬಿಜೆಪಿ ಮುಖಂಡರು 7ತಿಂಗಳಾದರೂ ತನಿಖೆಯ ಬಗ್ಗೆ ಸೊಲ್ಲೇತ್ತದಿರುವುದನ್ನು ಖಂಡಿಸಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮೂರು ಹಂತದಲ್ಲಿ ಹೋರಾಟ ನಡೆಸಲಿದೆ ಎಂದು ಅಧ್ಯಕ್ಷ ಜಗದೀಪ ತೆಂಗೇರಿ ತಿಳಿಸಿದ್ದಾರೆ.

ಅವರು ನಗರದ ಸೊಶಿಯಲ್‌ ಕ್ಲಬ್‌ ಸಭಾಭವನದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಮಾತನಾಡಿದರು. ಹೊನ್ನಾವರ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರು ಜು.10 ರಂದು ಮುಂಜಾನೆ 10ಕ್ಕೆ ಪಪಂ ಆವರಣದಲ್ಲಿರುವ ಮಹಾತ್ಮಾಗಾಂಧಿ ಪುತ್ಥಳಿಕೆಗೆ ಮಾಲಾರ್ಪಣೆ ಮಾಡಿ ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡು ಶೀಘ್ರ ತನಿಖೆಗೆ ಒತ್ತಾಯಿಸಲಾಗುವುದು. 15 ದಿನಗಳೊಳಗೆ ತನಿಖೆಯ ಬಗ್ಗೆ ಸೂಕ್ತ ಮಾಹಿತಿಯನ್ನು ಸಂಬಂಧಿತ ಅಧಿಕಾರಿಗಳು ನೀಡದಿದ್ದಲ್ಲಿ ಎರಡನೇ ಹಂತವಾಗಿ ಹೊನ್ನಾವರ ಬಂದ್‌ ಆಚರಿಸಿ ಸರಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು. ಅದಕ್ಕೂ ಮಣಿಯದಿದ್ದಲ್ಲಿ ಕಾರವಾರ ಚಲೋ ಹಮ್ಮಿಕೊಂಡು ನ್ಯಾಯ ಸಿಗುವವರೆಗೂ ನಿರಂತರ ಹೋರಾಟ ನಡೆಸಲಾಗುವುದು ಎಂದು ತೆಂಗೇರಿ ತಿಳಿಸಿದ್ದಾರೆ.

ಮಾಜಿ ಶಾಸಕಿ ಶಾರದಾ ಶೆಟ್ಟಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿನಾಕಾರಣ, ಅನಗತ್ಯವಾಗಿ ಕೋಮುವಾದಿಗಳು ನನ್ನ ವಿರುದ್ಧ ಅಪಪ್ರಚಾರ ನಡೆಸಿ ನನ್ನ ಸೋಲಿಗೆ ಕಾರಣರಾದರು ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಬಗ್ಗೆ ಹಗಲು-ರಾತ್ರಿ ಪರಿಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಮಾಜಿ ಸಚಿವ ಆರ್‌.ಎನ್‌. ನಾಯ್ಕ, ಅಲ್ಪಸಂಖ್ಯಾತ ಕಾಂಗ್ರೆಸ್‌ ಘಟಕದ ಹುಸೇನ ಖಾದ್ರಿ ಮಾತನಾಡಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ತಾರಾ ಗೌಡ, ಹೊನ್ನಾವರ ಪಪಂ ಅಧ್ಯಕ್ಷೆ ರಾಜಶ್ರೀ ನಾಯ್ಕ, ಕಾಂಗ್ರೆಸ್‌ ಕಾರ್ಮಿಕ ಸಂಘಟನೆಯ ಆಗ್ನೇಲ್‌ ಡಯಾಸ್‌, ನಗರ ಘಟಕದ ಅಧ್ಯಕ್ಷ ಕೇಶವ ಮೇಸ್ತ, ಮಾಜಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಮನಾಥ ನಾಯ್ಕ, ಕರ್ಕಿ ಮುಂತಾದವರು ಉಪಸ್ಥಿತರಿದ್ದರು. ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಾಮೋದರ್‌ ನಾಯ್ಕ ಸ್ವಾಗತಿಸಿದರು. ಲಂಬೋದರ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.