ಪರಿಷತ್ತು ಸದಸ್ಯರ ಪಾಸ್ ದುರ್ಬಳಕೆ; ಪೊಲೀಸ್ ಆಯುಕ್ತರ ಎಚ್ಚರಿಕೆ ಛಾಟಿ
Team Udayavani, Apr 29, 2020, 2:00 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ವಿಧಾನಸಭೆ-ವಿಧಾನ ಪರಿಷತ್ತು ಸದಸ್ಯರ ವಾಹನ ಪಾಸ್ಗಳನ್ನು ದುರುಪಯೋಗ ಪಡಿಸಿಕೊಳ್ಳುವ ಕುರಿತಂತೆ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ ಅವರು ಮಂಗಳವಾರ ಒಂದಿಬ್ಬರಿಗೆ ಎಚ್ಚರಿಕೆಯ ಛಾಟಿ ಬೀಸಿದ್ದಾರೆ.
ಮಂಗಳವಾರ ಸಂಜೆ ಬಸವವನದ ಬಳಿ ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನಗಳನ್ನು ತಡೆದು ವಾಹನಗಳ ಪರಿಶೀಲನೆ ಹಾಗೂ ವಾಹನ ಸೀಜ್ ಮಾಡುವ ಸಂದರ್ಭದಲ್ಲಿ, ವಿಧಾನ ಪರಿಷತ್ತು ಸದಸ್ಯರ ಪಾಸ್ ಹೊಂದಿದ ವಾಹನವೊಂದು ಬಂದಿದೆ. ಅದನ್ನು ಪರಿಶೀಲಿಸಿದಾಗ, ಅದು ಕಾಂಗ್ರೆಸ್ ಮುಖಂಡರೊಬ್ಬರಿಗೆ ಸೇರಿದ ವಾಹನವಾಗಿತ್ತು.
ಅದು ವಿಧಾನ ಪರಿಷತ್ತು ಸದಸ್ಯರಿಗೆ ಸೇರಿದ ವಾಹನ ಅಲ್ಲ ಎಂಬುದನ್ನು ಅರಿತ ಪೊಲೀಸ್ ಆಯುಕ್ತರು ಪಾಸ್ಗಳ ದುರ್ಬಳಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಧ್ವನಿವರ್ಧಕದಲ್ಲೇ ಇದು ಪಾಸ್ಗಳ ದುರ್ಬಳಕೆ ಎಂದು ಕಾಂಗ್ರೆಸ್ ಮುಖಂಡನಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಮಹಾನಗರದಲ್ಲಿ ಕೆಲವರು ವಿಧಾನಸಭೆ, ವಿಧಾನ ಪರಿಷತ್ತು ಸದಸ್ಯರ ಪಾಸ್ಗಳನ್ನು ತಮ್ಮ ವಾಹನಗಳಿಗೆ ಬಳಕೆ ಮಾಡುತ್ತಿದ್ದು, ಇನ್ನಾದರೂ ಪೊಲೀಸರು ಈ ಬಗ್ಗೆ ಸ್ಪಷ್ಟ ರೀತಿಯ ಕ್ರಮ ಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ