2ರಂದು ಪಾಸ್ಟಿಕ್ ಸಂಗ್ರಹಣಾ ಅಭಿಯಾನ
Team Udayavani, Sep 21, 2019, 9:41 AM IST
ಹುಬ್ಬಳ್ಳಿ: ಮಹಾತ್ಮಾ ಗಾಂಧೀಜಿ ಜನ್ಮದಿನಾಚರಣೆ ಅಂಗವಾಗಿ ಅ. 2ರಂದು ಹು-ಧಾ ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ ಹಾಗೂ ಹಲವು ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಪ್ಲಾಸ್ಟಿಕ್ ಸಂಗ್ರಹಣಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ನಗರದ 412 ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಅಭಿಯಾನದಲ್ಲಿ ಪಾಲ್ಗೊಳ್ಳುವರು. ವಿದ್ಯಾರ್ಥಿಗಳು ಒಟ್ಟುಗೂಡಿಸಿದ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಲು ಪಾಲಿಕೆ ವತಿಯಿಂದ 49 ಘಟಕಗಳನ್ನು ತೆರೆಯಲಾಗುವುದು. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಗೋಣಿ ಚೀಲಗಳನ್ನು ಪಾಲಿಕೆಯಿಂದ ವಿತರಿಸಲಾಗುವುದು. ಸಂಗ್ರಹಿಸಿದ ವಸ್ತುಗಳನ್ನು ಪಾಲಿಕೆಯಿಂದ ವಿಲೇವಾರಿ ಮಾಡಲಾಗುವುದು. ಬೃಹತ್ ಮಟ್ಟದಲ್ಲಿ ಪ್ಲಾಸ್ಟಿಕ್ ಸಂಗ್ರಹಿಸುವ ಅಭಿಯಾನದ ಕುರಿತು ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ಸಭೆ ನಡೆಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೇರಿದಂತೆ ಇತರೆ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು ಹಾಗೂ ಪರಿಸರ ಅಭಿಯಂತರು ಸೇರಿ ರೂಪುರೇಷೆ ಸಿದ್ಧಪಡಿಸಲಾಗಿದೆ.
ಸ್ವತ್ಛತಾ ಹಿ ಸೇವಾ ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ತಡೆಯುವ ನಿಟ್ಟಿಲ್ಲಿ ಅಭಿಯಾನ ಆಯೋಜಿಸಲಾಗಿದೆ. ಜನರಲ್ಲೂ ಅರಿವು ಮೂಡಿಸುವ ನಿಟ್ಟಿನಲ್ಲಿ ನಗರದ ಹಲವು ಹವ್ಯಾಸ ತಂಡಗಳು, ಸಂಘ-ಸಂಸ್ಥೆಗಳು ಅಭಿಯಾನದಲ್ಲಿ ಕೈ ಜೋಡಿಸಿವೆ. ನಗರದಿಂದ ಹಾನಿಕಾರಕ ಪ್ಲಾಸ್ಟಿಕ್ ಹೊರ ಹೋಗುವವರೆಗೂ ಅಭಿಯಾನ ನಡೆಯಲಿದೆ. ಅ. 2ರಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಕಸ ಸಂಗ್ರಹ ಕಾರ್ಯ ನಡೆಯಲಿದೆ ಎಂದು ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ