ಮುಕ್ತಿ  ಮಾರ್ಗದೆಡೆ ಕೊಂಡೊಯ್ಯುವುದೇ ಮಠಗಳ ಕಾರ್ಯ


Team Udayavani, Aug 23, 2018, 5:11 PM IST

23-agust-25.jpg

ರಾಣಿಬೆನ್ನೂರು: ಮನುಷ್ಯ ರೂಪದಿಂದ ಜನ್ಮ ತಾಳಿರುವ ಪ್ರತಿಯೊಬ್ಬ ವ್ಯಕ್ತಿಯಲ್ಲಡಗಿರುವ ಅಜ್ಞಾನವನ್ನು ಹೊಡೆದೊಡಿಸಿ, ಸುಜ್ಞಾನದಡೆಗೆ ಕೊಂಡೊಯ್ಯುವ ಗುರು ಸೇವೆ ಮುಕ್ತಿ ಪಡೆಯಲು ಸುಲಭ ಮಾರ್ಗವಾಗಿದೆ ಎಂದು ಐರಣಿ ಹೊಳೆಮಠದ ಬಸವರಾಜ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಬುಧವಾರ ತಾಲೂಕಿನ ಚಳಗೇರಿ ಗ್ರಾಮದಲ್ಲಿ ದಿ| ಮಹಾದೇವಪ್ಪ ದೂಳೆಹೊಳಿ ದಂಪತಿಗಳ ಸಮಾ ಧಿಗಳ ದೇವಸ್ಥಾನದಲ್ಲಿ ಮುಪ್ಪಿನಾರ್ಯ ಮಹಾತ್ಮಾಜಿಯವರ ಅಮೃತ ಶಿಲಾಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಆರೂಢ ಪರಂಪರೆಯ ಮಠಗಳು ಜಾತಿಯ ಸೊಂಕಿಲ್ಲದೆ ನಾಡಿನ ಸರ್ವಧರ್ಮ ಸಮಾಜದ ಜನರನ್ನು ಸನ್ಮಾರ್ಗದಡೆ ಕೊಂಡೊಯ್ಯುವುದೆ ಆಗಿದೆ ಎಂದು ನುಡಿದರು.

ಹುಬ್ಬಳ್ಳಿಯ ಸಿದ್ಧಾರೂಢರ ಪರಮ ಶಿಷ್ಯರಾದ ಮುಪ್ಪಿನಾರ್ಯರು, ಈ ಗ್ರಾಮವನ್ನು ಪುಣ್ಯಮಯ ಕ್ಷೇತ್ರವನ್ನಾಗಿ ಮಾಡಿದ್ದಾರೆ. ಎಲ್ಲ ನದಿಗಳು ಸಮುದ್ರವನ್ನು ಸೇರುವಂತೆ ಎಲ್ಲ ಮಠಗಳ ಉದ್ದೇಶ ಜನರನ್ನು ಮುಕ್ತಿ ಮಾರ್ಗದೆಡೆಗೆ ಕೊಂಡೊಯ್ಯುವುದೇ ಆಗಿದೆ. ಅಂತಹ ಮಹಾಪುರುಷರಾದ ಮುಪ್ಪಿನಾರ್ಯರ ಸೇವೆಯನ್ನು ದಿ| ಮಹಾದೇವಪ್ಪ ದಂಪತಿಗಳು ತ್ರೀಕರ್ಣ ಭಾವನೆಯಿಂದ ಸೇವೆ ಮಾಡಿದ ಪುಣ್ಯದಿಂದಾಗಿ ಅವರ ಸಮಾಧಿಯ ಮೇಲೆ ಮುಪ್ಪಿನಾರ್ಯ ಮಹಾತ್ಮಾರ ಅಮೃತ ಶಿಲಾಮೂರ್ತಿ ಪ್ರತಿಷ್ಠಾಪನೆ ಸಾಕ್ಷಿಯಾಗಿದೆ ಎಂದರು.

ಕೊಟ್ನೂರ ವಿರಕ್ತಮಠದ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಆರೂಢ ಪರಂಪರೆಯ ಮಠಗಳು ತನ್ನನ್ನು ತಾನು ಮೊದಲು ತಿಳಿಯಲು ಜ್ಞಾನದ ಅಮೃತ ಧಾರೆಯನ್ನ ಉಣಿಸುತ್ತ ಬಂದಿವೆ. ಅದ್ವೈತ ಜ್ಞಾನದಿಂದ ಜನಸಾಮಾನ್ಯರು ಮುಕ್ತಿಯ ಮಾರ್ಗವನ್ನು ಪಡೆಯಲು ಸದಾ ಗುರುಚಿಂತನೆ ಮತ್ತು ಗುರುಮಾರ್ಗದಲ್ಲಿ ನಡೆದರೆ ಮಾತ್ರ ಸಾಧ್ಯ ಎಂದರು.

ಸ್ಥಳೀಯ ಕಟಗಿಹಳ್ಳಿ ಮಠದ ಡಾ| ಮಹಾಂತೇಶ್ವರ ಸ್ವಾಮೀಜಿ, ಖಂಡೇರಾಯನಹಳ್ಳಿಯ ಸಿದ್ಧಾಶ್ರಮದ ನಾಗರಾಜಾನಂದ ಶ್ರೀಗಳು, ಕುಳ್ಳೂರಿನ ಶಿವಯೋಗೀಶ್ವರ ಸಂಸ್ಥಾನಮಠದ ಬಸವಾನಂದ ಶ್ರೀಗಳು, ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ ಅಂಗಡಿ, ಬಸನಗೌಡ ಕರೇಗೌಡ್ರ, ರೇವಣಪ್ಪ ಬದ್ನಿಕಾಯಿ ಮಾತನಾಡಿದರು. ನಂದೆಪ್ಪ ತೆಗ್ಗಿನ, ಜನಾರ್ಧನ ಕಡೂರು, ಸತೀಶಗೌಡ ಮಲ್ಲನಗೌಡ್ರ, ವಕೀಲಪ್ಪ ಧೂಳೆಹೊಳಿ, ರಾಯಪ್ಪ ತೆಗ್ಗಿನ ಸೇರಿದಂತೆ ಮತ್ತಿತರರು ಇದ್ದರು. ಬಾಬಣ್ಣ ಶೆಟ್ಟರ ಕಾರ್ಯಕ್ರಮ ನಿರ್ವಹಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ಬ್ರಾಹ್ಮೀ  ಮುಹೂರ್ತದಲ್ಲಿ ಮುಪ್ಪಿನಾರ್ಯ ಮಹಾತ್ಮಾಜಿಯವರ ಶಿಲಾಮೂರ್ತಿಗೆ ಅಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿಯೊಂದಿಗೆ ಸರ್ವ ಮಹಾತ್ಮರು ಪ್ರಾಣ ಪ್ರತಿಷ್ಠಾಪನೆಯ ಮೂಲಕ ಜೀವಕಳೆ ತುಂಬಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.