ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಿ: ಡಾ| ಪಾಟೀಲ
Team Udayavani, Dec 4, 2019, 11:16 AM IST
ಧಾರವಾಡ: ಇಂದು ರೈತರಿಗೆ ಬೇಕಾದದ್ದು ಬೆಂಬಲ ಬೆಲೆ ಅಲ್ಲ, ಬದಲಾಗಿ ವೈಜ್ಞಾನಿಕ ಬೆಲೆ ನೀತಿ ಎಂದು ಹಿರಿಯ ಚಿಂತಕ, ಹೋರಾಟಗಾರ ಡಾ| ಸಿದ್ದನಗೌಡ ಪಾಟೀಲ ಹೇಳಿದರು.
ಕವಿಸಂನಲ್ಲಿ ದಿ| ಬಸಪ್ಪ ಮುಂದಿನಮನಿ ಸ್ಮರಣೆ ದತ್ತಿ ಅಂಗವಾಗಿ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ “ಕೃಷಿ ಬಿಕ್ಕಟ್ಟು ಹಾಗೂ ಪರಿಹಾರ‘ ಎಂಬ ವಿಷಯ ಕುರಿತು ಅವರು ಮಾತನಾಡಿದರು. ಇಂದು ಕಾರ್ಪೊರೇಟ್ ಕಂಪನಿಗಳು ಲಾಭ ಗಳಿಕೆಯೇ ಮೂಲ ಗುರಿ ಹೊಂದಿವೆ. ಸಬ್ಸಿಡಿ ಕಡಿತ,ರಫ್ತು ಉತ್ತೇಜನ ನೀತಿಯಿಂದ ರೈತರ ಬದುಕು
ದಿವಾಳಿಯಾಗುತ್ತಿದೆ. ರೈತರಿಗೆ ಸರ್ಕಾರ ಬೆಂಬಲ ಬೆಲೆ ನೀಡಿದ್ದು, ಮಾರುಕಟ್ಟೆ ಬೆಲೆಗಿಂತ ಕಡಿಮೆ ಇದೆ. 1991ರ ನವ ಆರ್ಥಿಕ ನೀತಿ ಕೃಷಿ ಬಿಕ್ಕಟ್ಟಿಗೆ ಮಾರಕವಾಗಿದೆ. ಹೀಗಾಗಿ ರೈತ ಪ್ರಜ್ಞೆ ಬಂದಾಗ ಮಾತ್ರ ಕೃಷಿ ಬಿಕ್ಕಟ್ಟು ಪರಿಹಾರವಾಗಬಲ್ಲದು ಎಂದರು.
ವಾಲ್ಮಿ ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಮಾತನಾಡಿ, ಗ್ರಾಮೀಣ ಪ್ರದೇಶದ ಯುವಕರು ಕೃಷಿಯಿಂದ ವಿಮುಖರಾಗುತ್ತಿರುವುದು ಕಳವಳಕಾರಿ. ಸರ್ಕಾರ ಸಮಾಜವಾದಿ ತತ್ವದಡಿಯಲ್ಲಿ ಭೂಸುಧಾರಣೆ ಜಾರಿಗೆ ತಂದರೂ ಅದು ಸಮರ್ಪಕವಾಗಿಲ್ಲ. ಹವಾಮಾನ ವೈಪರಿತ್ಯವೂ ಸಹ ಭವಿಷ್ಯದಲ್ಲಿ ಕೃಷಿಗೆ ಮಾರಕವಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಧಾರವಾಡ ಲಾ ಅಕಾಡೆಮಿ ಅಧ್ಯಕ್ಷ ಕೆ.ಬಿ. ನಾವಲಗಿಮಠ ಮಾತನಾಡಿ, ಇಂದು ಕೃಷಿ ಉತ್ಪಾದನಾ ವೆಚ್ಚ ಅಧಿಕಗೊಂಡು ಉತ್ಪನ್ನಗಳ ಬೆಲೆ ಕುಂಠಿತವಾಗಿದ್ದಕ್ಕೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಲಿವೆ. ಗಾಂಧೀಜಿಯವರ ಗ್ರಾಮಸ್ವರಾಜದ ಕನಸು ನನಸಾದಾಗ ಕೃಷಿ ಬಿಕ್ಕಟ್ಟಿಗೆ ಪರಿಹಾರವಾಗಬಲ್ಲದು ಎಂದರು.
ದಿ| ಬಸಪ್ಪ ಶಿ. ಮುಂದಿನಮನಿ ಅವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಲ್ಲಿಸಲಾಯಿತು. ಶಿವಣ್ಣ ಬೆಲ್ಲದ, ದತ್ತಿದಾನಿ ಸದಾನಂದ ಮುಂದಿನಮನಿ ಇದ್ದರು. ಪ್ರಕಾಶ ಉಡಿಕೇರಿ ಸ್ವಾಗತಿಸಿದರು. ಕೃಷ್ಣ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ವೀರಣ್ಣ ಒಡ್ಡೀನ ನಿರೂಪಿಸಿದರು. ಪ್ರಶಾಂತ ಕುಲಕರ್ಣಿ ಪ್ರಾರ್ಥಿಸಿದರು. ಶಾಂತೇಶ ಗಾಮನಗಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು