ವಿಮಾ ಕಂಪೆನಿಗೆ ಬೆಳೆ ವಿಮೆ ಪ್ರೀಮಿಯಂ ಹಣ ವರ್ಗಾಯಿಸದ ಬ್ಯಾಂಕಿಗೆ 50 ಸಾವಿರ ರೂ. ದಂಡ
Team Udayavani, Sep 8, 2022, 5:06 PM IST
ಧಾರವಾಡ: ರೈತರೊಬ್ಬರು ತಮ್ಮ ಮಾವಿನ ಬೆಳೆಗೆ ವಿಮಾ ಸೌಲಭ್ಯ ಪಡೆಯಲು ಪಾವತಿಸಿದ್ದ ಪ್ರಿಮಿಯಂ ಹಣವನ್ನು ಅಗತ್ಯ ವಿವರಗಳೊಂದಿಗೆ ವಿಮಾ ಕಂಪೆನಿಗೆ ವರ್ಗಾಯಿಸದೇ ನಿರ್ಲಕ್ಷ್ಯ ತೋರಿದ ಕಲಘಟಗಿಯ ಬ್ಯಾಂಕ್ ಆಫ್ ಬರೋಡಾ ಶಾಖೆಗೆ ಇಲ್ಲಿನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 50 ಸಾವಿರ ರೂ. ದಂಡ ವಿಧಿಸಿದೆ.
ಕಲಘಟಗಿ ತಾಲೂಕು ಯಲವಾಳ ಗ್ರಾಮದ ಕೃಷಿಕ ಬಸಪ್ಪ ಚೆನ್ನಪ್ಪ ಕಾಮಧೇನು ಎಂಬುವರು 2018-19ನೇ ಸಾಲಿನಲ್ಲಿ ತಮ್ಮ ಮಾವಿನ ಬೆಳೆಗೆ ವಿಮಾ ಸೌಲಭ್ಯ ಬಯಸಿ 3,399 ರೂ. ಪ್ರೀಮಿಯಂನ್ನು ಕಲಘಟಗಿಯ ಬ್ಯಾಂಕ್ ಆಫ್ ಬರೋಡಾದಲ್ಲಿ ಪಾವತಿಸಿದ್ದರು. ಬ್ಯಾಂಕು ವಿಮಾ ಕಂಪನಿಗೆ ಹಣದೊಂದಿಗೆ ರೈತನ ವಿವರಗಳನ್ನು ಕಳುಹಿಸದೇ ನಿರ್ಲಕ್ಷ ಹಾಗೂ ಸೇವಾ ನ್ಯೂನ್ಯತೆ ಎಸಗಿದೆ ಎಂದು ಆಯೋಗದಲ್ಲಿ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿದ ಆಯೋಗವು ಕಲಘಟಗಿಯ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 40 ಸಾವಿರ ರೂ. ದಂಡ ಮತ್ತು ಪರಿಹಾರ ಹಾಗೂ ಪ್ರಕರಣದ ತನಿಖೆ ನಡೆಸಿದ ನ್ಯಾಯಾಲಯದ ಖರ್ಚಿಗೆ 10 ಸಾವಿರ ರೂ.ಗಳನ್ನು ಪಾವತಿಸುವಂತೆ ಆದೇಶಿಸಿದೆ.
ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಈ ತೀರ್ಪು ನೀಡಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ