ಪಾಲಿಕೆಯಿಂದ ಬಾಡಿಗೆ ಬಾಕಿ; ಪ್ರತಿಭಟನೆ
Team Udayavani, Jun 11, 2019, 12:20 PM IST
ಹುಬ್ಬಳ್ಳಿ: ಮಹಾನಗರ ಪಾಲಿಕೆ ಸೇವೆಗೆ ನೀಡಲಾದ ವಾಹನಗಳ ಬಾಡಿಗೆ ಹಣ ಪಾವತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಮಹಾನಗರ ಪಾಲಿಕೆ ಸೇವೆಗೆ ನೀಡಲಾದ ವಾಹನಗಳ ಬಾಡಿಗೆ ಹಣ ಪಾವತಿ ಮಾಡದಿರುವುದನ್ನು ಖಂಡಿಸಿ ಜಿಲ್ಲಾ ವಾಹನ ಚಾಲಕರು ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಸೋಮವಾರ ವಾಹನ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಯಿತು.
ಕಳೆದ ಹಲವಾರು ವರ್ಷಗಳಿಂದ ಮಹಾನಗರ ಪಾಲಿಕೆಗೆ ಮಾಸಿಕ ಬಾಡಿಗೆ ಆಧಾರದ ಮೇಲೆ ವಾಹನಗಳನ್ನು ನೀಡಲಾಗಿದ್ದು, ಕಳೆದ ಮೂರ್ನಾಲ್ಕು ತಿಂಗಳಿಂದ ವಾಹನಗಳ ಬಾಡಿಗೆ ಹಣ ಸಂದಾಯ ಮಾಡಲಾಗಿಲ್ಲ. ವಾಹನಗಳ ಕಂತಿನ ಹಣ ತುಂಬಲು ಸಾಧ್ಯವಾಗುತ್ತಿಲ್ಲ. ಚಾಲಕರ ವೇತನ ಪಾವತಿಸಲು ಸಾಧ್ಯವಾಗುತ್ತಿಲ್ಲ. ಇದಲ್ಲದೇ ವಾಹನಗಳಿಗೆ ಇಂಧನ ಹಾಕಿಸಲು ಹಣ ಇಲ್ಲದ ಸ್ಥಿತಿ ಬಂದಿದೆ. ಕೂಡಲೇ ಪಾಲಿಕೆ ಆಯುಕ್ತರು ವಾಹನಗಳ ಬಾಕಿ ಹಣ ನೀಡಿದರೆ ಮಾತ್ರ ವಾಹನಗಳ ಸಂಚಾರ ಕೈಗೊಳ್ಳುತ್ತೇವೆ. ಇಲ್ಲವಾದರೆ ಇಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.
ಪ್ರೇಮನಾಥ ಚಿಕ್ಕತುಂಬಳ, ಸತೀಶ ಬಳ್ಳಾರಿ, ಬಸಪ್ಪ ದೊಡ್ಡಮನಿ, ಪರಶುರಾಮ ಸೋನಿಕರ, ಹನುಮಂತ, ಈರಪ್ಪ ಜೋಗಿ, ಪ್ರಕಾಶ ಅತ್ತಿಗೇರಿ, ಅಶೋಕ ಲಮಾಣಿ, ರವಿ ವಗ್ಗರ, ಶ್ರೀನಿವಾಸ ಹಿರೇಮನಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ