ಗಣೇಶ ದರ್ಶನಕ್ಕೆ ನೆರೆಯದ ಜನ


Team Udayavani, Sep 8, 2019, 9:43 AM IST

huballi-tdy-3

ಹುಬ್ಬಳ್ಳಿ: ಒಂದೆಡೆ ನೆರೆಯಿಂದ ತತ್ತರಿಸಿರುವ ಜನರು, ಮತ್ತೂಂದೆಡೆ ಇದೀಗ ಮತ್ತೆ ಸುರಿಯುತ್ತಿರುವ ಮಳೆ. ಇವೆರಡೂ ಗಣೇಶೋತ್ಸವ ಉತ್ಸಾಹಕ್ಕೆ ಅಡ್ಡಿಯಾಗತೊಡಗಿದೆ.

ಭಾರೀ ಮಳೆ, ಪ್ರವಾಹ ಸಂಕಷ್ಟ ನಡುವೆಯೇ ಆಗಮಿಸಿದ್ದ ಗಜಮುಖನನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ಕಳೆದ ಎರಡ್ಮೂರು ದಿನಗಳಿಂದ ನಗರದಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಗಣೇಶೋತ್ಸವ ಆಚರಣೆ ಉತ್ಸಾಹ ಕುಂದುವಂತೆ ಮಾಡಿದೆ.

ಜನರ ಕೊರತೆ: ನಗರದಲ್ಲಿ ವಿವಿಧ ಮಂಡಳಗಳಿಂದ ಪ್ರತಿಷ್ಠಾಪನೆ ಮಾಡಲಾಗುವ ಗಣೇಶನ ವೀಕ್ಷಣೆಗೆ ಸಾವಿರಾರು ಜನರು ಆಗಮಿಸುತ್ತಿದ್ದರು. ಆದರೆ ಗಣೇಶ ಪ್ರತಿಷ್ಠಾಪನೆ ಮಾಡಿ ಐದು ದಿನ ಕಳೆದರೂ ಜನರ ಕೊರತೆ ಎದ್ದು ಕಾಣುತ್ತಿದೆ. ನಗರ ಪ್ರದೇಶದ ಜನರು ಐದನೇ ದಿನದ ಗಣೇಶ ವಿಸರ್ಜನೆ ನಂತರ ಹೆಚ್ಚಾಗಿ ಗಣೇಶ ವೀಕ್ಷಣೆಗೆ ಆಗಮಿಸುತ್ತಾರೆ. ಆದರೆ ಇದೀಗ ಮಳೆಯ ಪರಿಣಾಮದಿಂದ ಗಣೇಶ ವೀಕ್ಷಣೆಗೆ ಜನರೇ ಬರುತ್ತಿಲ್ಲ. ರವಿವಾರವಾದರೂ ಗಣೇಶ ಮೂರ್ತಿಗಳ ವೀಕ್ಷಣೆಗೆ ಜನರ ಸಂಖ್ಯೆ ಹೆಚ್ಚುವುದೇ ಕಾದು ನೋಡಬೇಕಾಗಿದೆ.

ಗ್ರಾಮೀಣ ಜನರೂ ಇಲ್ಲ: ಈ ಹಿಂದೆ ಗಣೇಶೋತ್ಸವಕ್ಕೆ ಗ್ರಾಮೀಣ ಜನರು ಟ್ರ್ಯಾಕ್ಟರ್‌, ಬಂಡಿ ಇನ್ನಿತರ ಮೂಲಕ ತಂಡೋಪ ತಂಡವಾಗಿ ಆಗಮಿಸಿ ತಡರಾತ್ರಿವರೆಗೂ ಗಣೇಶಮೂರ್ತಿಗಳ ಹಾಗೂ ಕಾರ್ಯಕ್ರಮಗಳ ವೀಕ್ಷಣೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಈ ಬಾರಿ ಗ್ರಾಮೀಣ ಜನರ ಆಗಮಿಸುವಿಕೆಯೂ ಕಡಿಮೆಯಾಗಿದೆ. ಜನರ ಆಗಮನ ಇಲ್ಲದೆ ಗಣೇಶಮೂರ್ತಿಗಳ ಪ್ರತಿಷ್ಠಾನ ಸ್ಥಾನಗಳು ಖಾಲಿ ಎನ್ನುವಂತಿವೆ. ಮಳೆಯ ಕಾರಣದಿಂದಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಕಳೆಗುಂದಿದಂತಾಗಿವೆ.

ಶನಿವಾರ ರಾತ್ರಿ ಜನಾಗಮನ: ರವಿವಾರ ರಜಾ ದಿನವಾಗಿರುವುದರಿಂದ ಶನಿವಾರ ರಾತ್ರಿ ಜನರು ಗಣೇಶ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಕಳೆದ ಐದು ದಿನಗಳಿಂದ ಹೊರಬರದ ಜನರು 6 ದಿನ ಕಳೆದ ನಂತರ ಗಣೇಶ ವೀಕ್ಷಣೆಗೆ ಆಗಮಿಸಿರುವುದು ಕಂಡು ಬಂದಿತು.

ಕಳೆದ ತಿಂಗಳು ಸುರಿದ ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ. ರಸ್ತೆಗಳು, ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ಗ್ರಾಮೀಣ ಭಾಗದ ಜನರು ಸ್ಥಿತಿ ತುಂಬಾ ಕೆಟ್ಟಿದೆ, ಜೊತೆಯಲ್ಲಿಯೇ ನಗರ ಪ್ರದೇಶದ ಜನರ ಸ್ಥಿತಿ ಹೇಳತೀರದಾಗಿದೆ. ಇಂತಹ ಸ್ಥಿತಿಯಲ್ಲಿರುವ ಜನರು ನಗರದತ್ತ ಹಬ್ಬದ ಆಚರಣೆಗೆ ಹೇಗೆ ಬರುತ್ತಾರೆ. ಇದರಿಂದ ಈ ವರ್ಷದ ಗಣೇಶೋತ್ಸವ ಆಚರಣೆ ನಿರಾಯಾಸವಾಗಿದೆ. ಹಬ್ಬದ ಉತ್ಸಾಹ ಯಾರಲ್ಲೂ ಇಲ್ಲವಾಗಿದೆ.•ಧರ್ಮರಾಜ ಟೀಕಣ್ಣವರ,ಮಂಡಳದ ಪದಾಧಿಕಾರಿ

 

•ಬಸವರಾಜ ಹೂಗಾರ

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.