ಸಾಮಾಜಿಕ ಅಂತರ-ಮಾಸ್ಕ್ ಮರೆತ ಜನ!


Team Udayavani, May 13, 2020, 8:19 AM IST

ಸಾಮಾಜಿಕ ಅಂತರ-ಮಾಸ್ಕ್  ಮರೆತ ಜನ!

ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಹೋಗುತ್ತಿರುವ ಜನರು

ಹುಬ್ಬಳ್ಳಿ: ಕೋವಿಡ್ ವೈರಸ್‌ ಲಾಕ್‌ಡೌನ್‌ ಘೋಷಣೆಯಿಂದ ಸಂಪೂರ್ಣ ಸ್ತಬ್ಧವಾಗಿದ್ದ ನಗರ ಸೋಮವಾರದಿಂದ ಕೊಂಚು ಸಡಿಲಗೊಂಡಿದ್ದು, ಮಂಗಳವಾರವೂ ಮುಂದುವರಿದಿದ್ದು ಜನರು ಸಂಚರಿಸುವಾಗ ಅಂತರ ಕಾಯ್ದುಕೊಳ್ಳದೇ ಇರುವುದು ಕಂಡು ಬಂದಿತು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹಾಗೂ ಜಿಲ್ಲಾಡಳಿತದ ಆದೇಶದ ಅನ್ವಯ ಸೋಮವಾರದಿಂದ ಸೀಲ್‌ ಡೌನ್‌ ಪ್ರದೇಶ ಬಿಟ್ಟು ಇನ್ನುಳಿದ ಪ್ರದೇಶಗಳಲ್ಲಿ ಕೊಂಚ ಸಡಿಲಿಕೆ ಮಾಡಿ ವ್ಯಾಪಾರ-ವಹಿವಾಟಿಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಇಷ್ಟಾದರೂ ಬುದ್ಧಿ ಕಲಿಯದ ಜನರು ಕೋವಿಡ್ ವೈರಸ್‌ ಭಯವೇ ಇಲ್ಲದಂತೆ ವರ್ತಿಸುತ್ತಿರುವುದು ಕಂಡು ಬಂತು. ಪಾಠ ಕಲಿಯದ ಜನ: ಮಂಗಳವಾರ ಮಾರುಕಟ್ಟೆ ಪ್ರದೇಶಗಳಾದ ಜವಳಿ ಸಾಲ, ಹಿರೇಪೇಟೆ, ಬಾರದಾನ್‌ ಸಾಲ, ದಾಜೀಬಾನ ಪೇಟೆ, ಅದೇ ರೀತಿ ಹಳೆ ಹುಬ್ಬಳ್ಳಿ ಭಾಗದಲ್ಲಿ ಮೊದಲಿನಿಂದಲೂ ಅದೇ ರಾಗ ಅದೇ ಹಾಡು ಎನ್ನುವಂತೆ ಕಂಡು ಬಂತು.

ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ಸುಮಾರು ಎರಡು ತಿಂಗಳು ಲಾಕ್‌ಡೌನ್‌ನಿಂದ ಕಂಗೆಟ್ಟಿರುವ ಜನರು ಒಂದೇ ಸಲ ಹೊರಗೆ ಬೀಳುತ್ತಿದ್ದಾರೆ. ಇದರೊಂದಿಗೆ ವಿವಿಧ ವಾಹನಗಳಲ್ಲಿ ಗ್ರಾಮೀಣ ಭಾಗದಿಂದ ಖರೀದಿಗಾಗಿ ಹೆಚ್ಚಿನ ಜನರು ಆಗಮಿಸುತ್ತಿದ್ದು, ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿಲ್ಲ. ವಾಹನದಲ್ಲಿ ತೆರಳುತ್ತಿರುವವರು ಪರಸ್ಪರ ಅಂತರ ಕಾಯ್ದುಕೊಳ್ಳದೇ ಒಂದೇ ವಾಹನದಲ್ಲಿ ಅಕ್ಕಪಕ್ಕ ಕುಳಿತು ಮಾಸ್ಕ್ ಹಾಕಿಕೊಳ್ಳದೇ ಹೋಗುತ್ತಿರುವುದು ಕಂಡು ಬಂತು.

ಅಂತರಕ್ಕೆ ಗುರುತು ಹಾಕಿದ ಅಂಗಡಿಕಾರರು: ಕೋವಿಡ್ ವೈರಸ್‌ನಿಂದ ಎಚ್ಚೆತ್ತುಕೊಂಡಿರುವ ವಿವಿಧ ಮಳಿಗೆದಾರರು ತಮ್ಮ ಅಂಗಡಿಗಳ ಎದುರು ಗುರುತು ಹಾಕುವ ಮೂಲಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಆದರೆ ಜನರೇ ನಿರಾಸಕ್ತಿ ತಾಳುತ್ತಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಮೈ ಮರೆತ ಆಟೋ ಚಾಲಕರು: ನಗರದಲ್ಲಿ ಮಂಗಳವಾರ ಮೈಮರೆತ ಆಟೋ ಚಾಲಕರು ಪ್ರಯಾಣಿಕರನ್ನು ಸಾಗಿಸುತ್ತಿರುವುದು ಕಂಡು ಬಂತು. ಅಲ್ಲದೇ ಇರುವ ಸೀಟ್‌ಗಳಿಗಿಂತ ಹೆಚ್ಚಾಗಿ ಚಾಲಕನ ಅಕ್ಕಪಕ್ಕದಲ್ಲೂ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬಂತು.

ಅಗತ್ಯ ವಸ್ತುಗಳ ಮಾರಾಟಕ್ಕೆ ಆದ್ಯತೆ ನೀಡಿರುವ ಜಿಲ್ಲಾಡಳಿತದ ಆದೇಶದ ಹಿನ್ನೆಲೆಯಲ್ಲಿ ಮಾರುಕಟ್ಟೆ ಪ್ರದೇಶಗಳಲ್ಲಿ ಹೆಚ್ಚಿನ ಜನರ ಓಡಾಟ ಕಂಡು ಬಂತು. ಬೆಳಗ್ಗೆಯಿಂದ ಸಂಜೆ ವರೆಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಅಷ್ಟರಲ್ಲಿಯೇ ತಮ್ಮ ಖರೀದಿ ಕೆಲಸ ಕಾರ್ಯಗಳನ್ನು ಮಾಡಿಕೊಂಡರಾಯಿತು ಎಂದು ಜನರು ಹೊರ ಬರುತ್ತಿರುವುದು ಕಂಡು ಬಂತು.

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.