ಹುಬ್ಬಳ್ಳಿ ನಗರದಲ್ಲಿ ಲಾಕ್ ಡೌನ್ ಗೆ ಜನ, ವ್ಯಾಪಾರಸ್ಥರು ಡೋಂಟ್ ಕೇರ್!
Team Udayavani, Jul 20, 2020, 11:44 AM IST
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ವಿಧಿಸಿದ್ದರೂ, ಇಲ್ಲಿನ ಜನರು ಮತ್ತು ವ್ಯಾಪಾರಸ್ಥರು ಗಂಭೀರವಾಗಿ ಪರಿಗಣಿಸಿದಂತಿಲ್ಲ. ಕೋವಿಡ್ ಸೋಂಕು ಬಂದರೂ ನಮ್ಮ ವ್ಯಾಪಾರ ನಡೆಯಬೇಕು ಎನ್ನುವಂತಿದೆ ಇಲ್ಲಿನ ಪರಿಸ್ಥಿತಿ.
ಲಾಕ್ ಡೌನ್ ಇರುವ ಕಾರಣ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ಅವಕಾಶ ನೀಡಲಾಗಿದೆ. ಆದರೆ ಮಾರುಕಟ್ಟೆ, ರಸ್ತೆ ತುಂಬೆಲ್ಲಾ ಜನಸಾಗರವೇ ತುಂಬಿದೆ.
ಮಾಮೂಲಿ ದಿನದಂತೆ ರಸ್ತೆಯಲ್ಲಿ ವಾಹನಗಳು ಸಂಚಾರ ನಡೆಸುತ್ತಿದೆ. ಮಾರುಕಟ್ಟೆಗೆ ಜನರು ಮಾಮೂಲಿಗಿಂತ ಹೆಚ್ಚೇ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇಲ್ಲಿನ ಜನತಾ ಬಜಾರ್ ನಲ್ಲಿ ಪೊಲೀಸರು ಜನರನ್ನು ಚದುರಿಸಿದರು.
ಅನಗತ್ಯವಾಗಿ ಹೊರಬಂದವರಿಗೆ, ಅಗತ್ಯವಲ್ಲದ ಅಂಗಡಿ ಮಾಲೀಕರಿಗೆ, ಸಾಮಾಜಿಕ ಅಂತರ ಮರೆತು ವ್ಯಾಪಾರ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಪೊಲೀಸರು ಲಾಠಿ ಏಟು ರುಚಿ ತೋರಿಸಿದರು.
ಅಂಗಡಿಗಳನ್ನ ಬಂದ್ ಮಾಡಿಸಿದ ಪೊಲೀಸರು. ಬ್ಯಾರಿಕೇಡ್ ಗಳನ್ನ ಹಾಕಿ ರಸ್ತೆಗಳನ್ನ ಬ್ಲಾಕ್ ಮಾಡಿದರು. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಜನರು, ವ್ಯಾಪಾರಸ್ಥರು ಸ್ಥಳದಲ್ಲಿ ಚದುರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು