ಡೆಂಘೀ-ಚಿಕೂನ್ಗುನ್ಯಾ ವೈರಾಣುವಿಗೆ ಜನ ಹೈರಾಣ
•7 ತಿಂಗಳಲ್ಲಿ 28ಕ್ಕೂ ಅಧಿಕ ಜನರಲ್ಲಿ ಡೆಂಘೀ ದೃಢ•ವೈರಲ್ ಫೀವರ್ನಿಂದ ಬಳಲಿದ ಜನಜೀವನ
Team Udayavani, Jul 30, 2019, 9:10 AM IST
ಹುಬ್ಬಳ್ಳಿ: ಪಾಲಿಕೆ ವ್ಯಾಪ್ತಿಯಲ್ಲಿ ಜನೆವರಿಯಿಂದ ಜುಲೈ ಮಧ್ಯ ಅವಧಿ ವರೆಗೆ 300ಕ್ಕೂ ಅಧಿಕ ಜನರು ಶಂಕಿತ ಡೆಂಘೀ-ಚಿಕೂನ್ಗುನ್ಯಾದಿಂದ ಬಳಲುತ್ತಿದ್ದಾರೆ. ಅವರಲ್ಲಿ 28ಕ್ಕೂ ಅಧಿಕ ಜನರಲ್ಲಿ ಡೆಂಘೀ ಹಾಗೂ 10ಕ್ಕೂ ಹೆಚ್ಚು ಜನರಲ್ಲಿ ಚಿಕೂನ್ಗುನ್ಯಾ ದೃಢಪಟ್ಟಿದೆ. ಓರ್ವರು ಡೆಂಘೀಯಿಂದ ಮೃತಪಟ್ಟಿದ್ದಾರೆ.
ನಗರದಲ್ಲಿ ಕೆಲದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ಮಕ್ಕಳು, ಜನರ ಮೇಲೆ ಆಗುತ್ತಿದೆ. ತಗ್ಗು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳ ಕಾಟ ವಿಪರೀತವಾಗುತ್ತಿದೆ. ಹಲವರು ಜ್ವರ, ಕೆಮ್ಮು, ನೆಗಡಿ ಹಾಗೂ ಮೈ-ಕೈ, ಕೀಲು ನೋವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹೆಚ್ಚಾಗಿ ಸಮಸ್ಯೆ ಅನುಭವಿಸುತ್ತಿದ್ದಾರೆ.
ಜ್ವರದಿಂದ ಬಳಲುತ್ತಿರುವವರು ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ದಾಖಲಾದರೆ, ಅವರು ಡೆಂಘೀಯಿಂದ ಬಳಲುತ್ತಿದ್ದಾರೆಂದು ಸಂಶಯ ಬಂದರೆ ಅಂಥವರ ರಕ್ತದ ಮಾದರಿ ಸಂಗ್ರಹಿಸಿ ಕಿಮ್ಸ್ ಆಸ್ಪತ್ರೆ, ಎಸ್ಡಿಎಂ ಆಸ್ಪತ್ರೆ, ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗುತ್ತದೆ. ಇಲ್ಲಿ ಭಾರತ ಸರಕಾರದ ನಿರ್ದೇಶನದಂತೆ ಎಲಿಸಾ ಎಂಟಿಜೆನ್ ಪರೀಕ್ಷೆ ಮಾಡಲಾಗುತ್ತದೆ. ಅದರಲ್ಲಿ ರೋಗಿಯ ಜ್ವರದಲ್ಲಿ ಡೆಂಘೀ ಲಕ್ಷಣ ಕಂಡುಬಂದರೆ ಮಾತ್ರ ಅದನ್ನು ದೃಢಪಡಿಸುತ್ತಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ರೋಗಿಯು ಖಾಸಗಿ ಆಸ್ಪತ್ರೆ ಸೇರಿದಂತೆ ಇನ್ನಿತರೆಡೆ ದಾಖಲಾಗಿದ್ದರೆ, ಆಸ್ಪತ್ರೆಯವರು ರೋಗಿಯು ಡೆಂಘೀಯಿಂದ ಬಳಲುತ್ತಿರಬಹುದೆಂದು ಶಂಕೆ ಮೇಲೆ ಅವರ ರಕ್ತದ ಮಾದರಿ ಸಂಗ್ರಹಿಸಿ, ಅದನ್ನು ಕಿಮ್ಸ್ ಆಸ್ಪತ್ರೆ ಇಲ್ಲವೆ ಖಾಸಗಿ ಲ್ಯಾಬ್ಗಳಲ್ಲಿ ಪರೀಕ್ಷೆಗೊಳಪಡಿಸಿ ಖಚಿತ ಪಡಿಸಿಕೊಳ್ಳುತ್ತಾರೆ. ಅದಕ್ಕನುಗುಣವಾಗಿ ಚಿಕಿತ್ಸೆ ನೀಡುತ್ತಾರೆ. ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ರೋಗಿಗಳಲ್ಲಿ ಡೆಂಘೀ ಜ್ವರದಿಂದ ಬಳಲುತ್ತಿದ್ದವರಿಗೆ ವೈದ್ಯರು ಬಿಳಿ ರಕ್ತಕಣ ಕೊಡದೆ, ಜ್ವರ ಕಡಿಮೆಯಾಗುವಂತೆ ಮಾತ್ರೆ ಕೊಟ್ಟು, ಎನ್ಎಸ್1 ಪಾಸಿಟಿವ್ ಬರುವಂತೆ ಚಿಕಿತ್ಸೆ ನೀಡಿ, ಪ್ಲೇಟ್ಲೆಟ್ಸ್ ಕೌಂಟರ್ ಡ್ರಾಪ್ ಮಾಡಿ ಗುಣಮುಖ ಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ