ತುಲಾಭಾರ ಮಾಡಿ ಸಂಭ್ರಮಿಸಿದ್ದ  ಜನತೆ


Team Udayavani, Aug 17, 2018, 5:21 PM IST

17-agust-25.jpg

ಗುಳೇದಗುಡ್ಡ: ಆ ಸುಂದರ ಕ್ಷಣ ಕಳೆದು ಇಂದಿಗೆ 36 ವರ್ಷ ಕಳೆದಿವೆ. ಆದರೂ ಆ ಕ್ಷಣಗಳು ಪಟ್ಟಣದ ಅದೆಷ್ಟೋ ಜನರ ಮನದಲ್ಲಿ ಇಂದಿಗೂ ಹಾಗೆಯೇ ಉಳಿದಿದೆ. ಆದರೆ ಆ ಸಮಾರಂಭದ ಕೇಂದ್ರಬಿಂದುವಾಗಿದ್ದ ಮಹಾನ್‌ ಚೇತನ್‌ ನಮ್ಮಿಂದ ಇಂದು ದೂರವಾಗಿರುವುದು ವಿಷಾದದ ಸಂಗತಿ. ಅದು ಬೇರಾರು ಅಲ್ಲ ಭಾರತ ರತ್ನ, ರಾಜನೀತಿಜ್ಞ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರು. ಆ ಮಹಾನ್‌ ಚೇತನ್‌ ಗುಳೇದಗುಡ್ಡಕ್ಕೆ ಒಂದಲ್ಲ ಎರಡು ಬಾರಿ ಬಂದು ಪಟ್ಟಣದ ಜನರ ಆತಿಥ್ಯ ಸ್ವೀಕರಿಸಿದ್ದರು.

1982ರಲ್ಲಿ ತುಲಾಭಾರ: 1982ರಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಅಟಲ್‌ ಬಿಹಾರಿ ವಾಜಪೇಯಿಯವರಿಗೆ ಗುಳೇದಗುಡ್ಡ ಪಟ್ಟಣದ ಜನತೆ, ಭಾರತೀಯ ಜನತಾ ಪಾರ್ಟಿ ಮುಖಂಡರು ತುಲಾಭಾರ ಮಾಡಿದ್ದರು. ಆ ಸುಂದರ ಘಟನೆಯನ್ನು ನೆನೆದು ಪಟ್ಟಣದ ಬಿಜೆಪಿ ಪಕ್ಷದವರಷ್ಟೇ ಅಲ್ಲದೇ ಇಡೀ ಪಟ್ಟಣವೇ ಸ್ಮರಿಸಿಕೊಳ್ಳುತ್ತಿದೆ. ಸದ್ಯ ಅಟಲ್‌ಜಿ ನಮ್ಮೊಂದಿಗಿಲ್ಲ ಎಂಬುದನ್ನು ನೆನೆಸಿಕೊಂಡು ದುಃಖಿತರಾಗುತ್ತಿದ್ದಾರೆ.

1982ರಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಪಟ್ಟಣದ ಭಂಡಾರಿ ಕಾಲೇಜಿನ ಆವರಣದಲ್ಲಿ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, 84ಕೆಜಿ ತೂಕವಿದ್ದ ಅಟಲ್‌ಜಿಯವರಿಗೆ ನಾಣ್ಯಗಳಿಂದ ತುಲಾಭಾರ ಮಾಡಿ, 51ಸಾವಿರಗಳ ದೇಣಿಗೆಯನ್ನು ನೀಡಿದ್ದರು. ನಂತರ ತುಂಬಿದ ಸಭೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಅಟಲ್‌ಜಿ ಮಾತನಾಡಿದ್ದರು. ಅಂದಿನ ಕಾರ್ಯಕ್ರಮದಲ್ಲಿ ಆಗಿನ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಟಿ.ಎಂ. ಹುಂಡೇಕಾರ, ನಾರಾಯಣಸಾ ಭಾಂಡಗೆ ಇತರರು ಇದ್ದರು.

1982ರಲ್ಲಿ ಘನಶ್ಯಾಮದಾಸ ರಾಠಿ, ಮಲ್ಲಿಕಾರ್ಜುನ ಬನ್ನಿ, ರಂಗಪ್ಪ ಶೇಬಿನಕಟ್ಟಿ, ಕೆ.ಎಚ್‌. ಮರಳಿ,ರಾಮಬಿಲಾಸ ಧೂತ, ಮಧುಸೂಧನ ರಾಂದಡ, ಡೀಕಣ್ಣ ಕಂಠಿ, ವಂಸತಸಾ ಸಿಂಗ್ರಿ, ಕಮಲಾಕರ ಪವಾರ, ಡಾ.ಯು.ಎಂ.ಉಮರ್ಜಿ, ಮನೋಹರ ಶೆಟ್ಟರ ಸೇರಿದಂತೆ ಇನ್ನೂ ಅನೇಕರು ತುಲಾಭಾರ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ರಾಠಿ ಮನೆಯಲ್ಲಿ ಭೋಜನ: ಪಟ್ಟಣದ ಖಣಗಳ ವ್ಯಾಪಾರಸ್ಥರಾದ ಆರ್‌ಎಸ್‌ ಎಸ್‌ ಮುಖಂಡ ಘನಶ್ಯಾಮದಾಸ್‌ ರಾಠಿ ಅವರ ಮನೆಯಲ್ಲಿ ತುಲಾಭಾರ ಕಾರ್ಯಕ್ರಮ ಮುಗಿದ ನಂತರ ಭೋಜನದ ವ್ಯವಸ್ಥೆ ಏರ್ಪಡಿಸಲಾಗಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ಭೋಜನ ಸೇವಿಸಿ, ಕಾರ್ಯಕರ್ತರೊಂದಿಗೆ ಚರ್ಚಿಸಿ, ಗದಗ ಕಡೆ ಪ್ರಯಾಣ ಬೆಳೆಸಿದ್ದರು.

ಚುನಾವಣಾ ಪ್ರಚಾರಕ್ಕೆ ಮತ್ತೆ ಆಗಮನ: 1982ರಲ್ಲಿ ತುಲಾಭಾರ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಾಜಪೇಯಿಯವರು ಮತ್ತೇ 1983ರಲ್ಲಿ ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣಾ ಪ್ರಚಾರದ ಸಲುವಾಗಿ ಆಗ ಗುಳೇದಗುಡ್ಡ ವಿಧಾನಸಭೆ ಮತಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ ಬನ್ನಿಯವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿ, ಪ್ರಚಾರ ಕಾರ್ಯಕೈಗೊಂಡಿದ್ದರು, ಅಂದು ವಾಜಪೇಯಿಯವರು ಮಾಡಿದ ಚುನಾವಣಾ ಪ್ರಚಾರದ ನಂತರ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಬನ್ನಿ ಗೆಲುವು ಸಾಧಿಸಿದ್ದರು.

1983ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗುಳೇದಗುಡ್ಡ ಮತಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿದ್ದ ನನ್ನ ಪರ ಪ್ರಚಾರ ಮಾಡಿದ್ದರು. ಆ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸಿದ್ದೇ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರು ಅಜಾತ ಶತ್ರುವಾಗಿದ್ದರು, ರಾಜನೀತಿಜ್ಞರಾಗಿದ್ದರು. ನಿಜವಾಗಿಯುವ ಅವರು ಭಾರತ ಮಾತೆಯ ಸುಪುತ್ರ. ಅವರನ್ನು ಕಳೆದುಕೊಂಡು ಇಂದು ಭಾರತೀಯ ಜನತಾ ಪಾರ್ಟಿ ಬಡವಾಗಿದೆ.
ಮಲ್ಲಿಕಾರ್ಜುನ ಬನ್ನಿ, ಮಾಜಿ ಶಾಸಕ, ಗುಳೇದಗುಡ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರಿಗೆ 1982ರಲ್ಲಿ ಪಟ್ಟಣದಲ್ಲಿ ಬಿಜೆಪಿಯಿಂದ ತುಲಾಭಾರ ಮಾಡಲಾಗಿತ್ತು. ಕಾರ್ಯಕ್ರಮ ಮುಗಿದ ಬಳಿಕ ಅವರು ನಮ್ಮ ಮನೆಯಲ್ಲಿಯೇ ಮುಖಂಡರೊಂದಿಗೆ ಸೇರಿ ಊಟ ಮಾಡಿ, ಹೋಗಿದ್ದು ಇಂದಿಗೂ ಮರೆಯಲಾಗದಂತಹ ಕ್ಷಣ. ಆದರೆ ಇಂದು ಅಂತಹ  ಧೀಮಂತ ನಾಯಕ ನಮ್ಮನ್ನು ಬಿಟ್ಟು ಅಗಲಿದ್ದು ಬಹಳ ದುಃಖ ತರಿಸಿದೆ.
 ಸಂಪತ್‌ ರಾಠಿ, ಘನಶ್ಯಾಮದಾಸ್‌ ರಾಠಿಯವರ ಪುತ್ರ, ಗುಳೇದಗುಡ್ಡ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.