ಎಲ್ಲೆಡೆ ಸ್ವಚ್ಛತೆಯ ಜಾಗೃತಿ ಮೂಡಿಸಿ: ಕೃಷ್ಣಮೂರ್ತಿ


Team Udayavani, Aug 3, 2018, 5:03 PM IST

3-agust-19.jpg

ಕೊಪ್ಪಳ: ಜಿಲ್ಲೆಯಲ್ಲಿ ಈಗಾಗಲೇ ಶೌಚಾಲಯ ನಿರ್ಮಾಣ ಮಾಡಿದ ಪರಿಣಾಮ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯೆಂದು ಘೋಷಣೆಯಾಗಿದೆ. ಅವುಗಳ ಬಳಕೆ ಸೇರಿದಂತೆ ಸ್ವಚ್ಛತೆ ಕುರಿತು ಜನರಲ್ಲಿ ನಾವು ಜಾಗೃತಿ ಮೂಡಿಸಬೇಕಿದೆ ಎಂದು ತಾಪಂ ಇಒ ಕೃಷ್ಣಮೂರ್ತಿ ಅವರು ಹೇಳಿದರು.

ನಗರದ ತಾಪಂ ಸಭಾಂಗಣದಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಶೌಚಾಲಯ ನಿರ್ಮಾಣ ಸೇರಿದಂತೆ ಬಳಕೆ ಅಭಿಯಾನ ಮಾಡಿದ್ದೇವೆ. ಇಲ್ಲಿನ ಸ್ವಚ್ಛತೆ ಕುರಿತು ಕೇಂದ್ರ ಸರ್ಕಾರದ ತಂಡವು ಜಿಲ್ಲೆ ಹಾಗೂ ತಾಲೂಕಿನ ಎಲ್ಲ ಕಡೆಯೂ ಅವರು ಭೇಟಿ ನೀಡಲಿದ್ದಾರೆ. ಶೌಚಾಲಯಗಳ ಬಳಕೆ ಹಾಗೂ ಗ್ರಾಮ ಮಟ್ಟದಲ್ಲಿ ಸ್ವಚ್ಛತೆಯ ಬಗ್ಗೆ ಪರಿಶೀಲನಾ ವರದಿ ಪಡೆಯಲಿದ್ದಾರೆ. ಅಧಿಕಾರಿಗಳ ತಂಡ ಬರಲಿದೆ. ಹಾಗಾಗಿ ಗ್ರಾಮ ಮಟ್ಟದಲ್ಲಿ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕೆಂದರು.

ತಾಪಂ ಅಧ್ಯಕ್ಷ ಬಾಲಚಂದ್ರನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಜನತೆಗೆ ಸ್ವಚ್ಛತೆಯ ಬಗ್ಗೆ ಇನ್ನೂ ಜಾಗೃತಿ ಇಲ್ಲದಂತಾಗಿದೆ. ರಾಜ್ಯ ಸೇರಿದಂತೆ ಕೇಂದ್ರ ಸರ್ಕಾರವು ಸ್ವಚ್ಛತೆಯ ಕುರಿತು ಹಲವು ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿದೆ. ವಿವಿಧ ಹಂತದಲ್ಲಿ ಮಾಹಿತಿ ನೀಡುತ್ತಿದೆ. ಆದರೂ ಜನರು ಮನೆಯಲ್ಲಿ ಶೌಚಾಲಯ ಬಳಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ನೀರಿನ ಸಮಸ್ಯೆ ಹಾಗೂ ಸ್ವಚ್ಛತೆ ಮಾಡುವ ಕುರಿತು ಕಾರಣ ಹೇಳಿ ಇನ್ನೂ ಮೂಢ ಪದ್ಧತಿಯಲ್ಲಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿ ಗ್ರಾಮ ಮಟ್ಟದಲ್ಲಿ ಅಧಿಕಾರಿಗಳು ಸೇರಿದಂತೆ ಸಂಘ-ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸುವ ಬದಲಾಗಿ ಇಂದಿನ ಶಾಲಾ ಮಕ್ಕಳಿಗೆ ಸ್ವತ್ಛತೆಯ ಬಗ್ಗೆ ಜಾಗೃತಿ ಮೂಡಿಸಿದರೆ ಅವರು ಜಾಗೃತರಾಗಿ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬಲ್ಲರು ಎಂದರು.

ತಾಲೂಕು ವೈದ್ಯಾಧಿಕಾರಿ ಡಾ| ರಾಮಾಂಜನೇಯ ಅವರು ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳು ಬರುತ್ತವೆ. ನಾವು ಸಹಿತ ಹಲವು ಜಾಗೃತಿ ಸಂದೇಶ ನೀಡುತ್ತಿದ್ದೇವೆ. ತಾಯಿ-ಮಗುವಿನ ಆರೈಕೆ ಹಾಗೂ ಸ್ವಚ್ಛತೆಯ ಬಗ್ಗೆ ಆಸ್ಪತ್ರೆಗಳಲ್ಲಿ ಮಾಹಿತಿ ನೀಡುತ್ತಿದ್ದೇವೆ ಎಂದರು. ಬಿಇಒ ಶೋಭಾ ಬಾಗೇವಾಡಿ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಎಲಿಗಾರ ಉಪಸ್ಥಿತರಿದ್ದರು. ಬಳಿಕ ತಾಪಂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸ್ವತ್ಛತಾ ಜಾಗೃತಿಯ ಕುರಿತು ಕಾರ್ಯಾಗಾರ ಜರುಗಿತು.

ಸ್ವಚ್ಛತಾ ಪ್ರಶಸ್ತಿ ನೀಡಲು ನಿರ್ಧಾರ
ಕೊಪ್ಪಳ ತಾಲೂಕು ಹಂತದಲ್ಲಿ ಸ್ವಚ್ಛತೆ ಕುರಿತು ಹಾಗೂ ಸ್ವತ್ಛ ಸರ್ವೇಕ್ಷಣ ಗ್ರಾಮೀಣ ಕಾರ್ಯಕ್ರಮದ ಎಲ್ಲ ಅಂಶಗಳನ್ನು ಜಾರಿ ಮಾಡಿ ಯಶಸ್ವಿಯಾಗುವ ಗ್ರಾಪಂಗೆ ಪ್ರಶಸ್ತಿಯನ್ನು ನಾವು ಗುರುತಿಸಲಿದ್ದು, ಅಂತಹ ಪಂಚಾಯಿತಿಗೆ ತಾಲೂಕು ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಹಾಗಾಗಿ ಪ್ರತಿಯೊಬ್ಬರು ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕು ಎಂದು ತಾಪಂ ಅಧ್ಯಕ್ಷ ಬಾಲಚಂದ್ರನ್‌ ಅವರು ಘೋಷಣೆ ಮಾಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.