ನೀರಿನ ಬವಣೆಯಿಂದ ಬಸವಳಿದ ಜನತೆ

ಪಟ್ಟಣದ ಕೆರೆ, ಬಾವಿಗಳಂತೂ ಅಳಿವಿನಂಚಿನಲ್ಲಿವೆ

Team Udayavani, Mar 27, 2022, 11:29 AM IST

5

ನವಲಗುಂದ: ಬೇಸಿಗೆ ಪ್ರಾರಂಭವಾಗಿ ಸುಡುಬಿಸಿಲು ನೆತ್ತಿಯ ಮೇಲಿದೆ. ನೀರಿನ ಬೇಡಿಕೆಯೂ ಹೆಚ್ಚುತ್ತಿದೆ. ಈ ನಡುವೆ ಪಟ್ಟಣದಲ್ಲಿ ಪ್ರತಿ 8-9 ದಿನಕ್ಕೊಮ್ಮೆ ಕುಡಿಯುವ ನೀರಿನ ಪೂರೈಕೆಯಾಗುತ್ತಿದ್ದು, ಜನರು ಪರದಾಡುವಂತಾಗಿದೆ.

ಪಟ್ಟಣದ ಕೆರೆ, ಬಾವಿಗಳಂತೂ ಅಳಿವಿನಂಚಿನಲ್ಲಿವೆ. ಪ್ರಮುಖ ನೀರಿನ ಮೂಲಗಳಾಗಿದ್ದ ನೀಲಮ್ಮನ ಕೆರೆ, ಶೆಟ್ಟರ ಕೆರೆ ಪೈಕಿ ನೀಲಮ್ಮನ ಕೆರೆ ಬತ್ತಿ ಹೋಗಿದೆ. ಇನ್ನೂ ಶೆಟ್ಟರ ಕೆರೆಯಲ್ಲಂತೂ ಗಿಡಗಂಟಿಗಳು ಬೆಳೆದು ವಿಷಜಂತುಗಳಿಂದ ನೀರು ಬಳಕೆ ಮಾಡಲು ಯೋಗ್ಯ ಇಲ್ಲದಂತಾಗಿದೆ.

ಶಾಶ್ವತ ಕುಡಿಯುವ ನೀರಿನ ಬವಣೆ ನೀಗಿಸಿದ ಚನ್ನಮ್ಮನ ಕೆರೆ ಕಾಲುವೆಯಿಂದಲೇ ನೀರನ್ನು ತುಂಬಿಸಿಕೊಳ್ಳಬೇಕಿದೆ. ಪುರಸಭೆ ಸುಮಾರು ವರ್ಷಗಳ ಹಿಂದೆ ನೀರಿನ ಅಭಾವ ಇದ್ದಾಗ 8-9 ದಿನದವರೆಗೆ ಸಮಯ ನಿಗದಿ ಮಾಡಿ ಒಂದು ಗಂಟೆ ನಳಕ್ಕೆ ನೀರು ಬಿಟ್ಟಿರುವುದನ್ನೇ ಇನ್ನುವರೆಗೂ ಚಾಚೂ ತಪ್ಪದೇ ಪಾಲನೆ ಮಾಡುತ್ತಾ ಬಂದಿದೆ!

8ರಿಂದ 9 ದಿನಗಳ ಮಧ್ಯದಲ್ಲಿ ಜಲಾಗಾರದಲ್ಲಿ ಮೋಟರ್‌ ರಿಪೇರಿ ಎಂದು ಅದೆಷ್ಟೋ ಬಾರಿ ಒಂದು ದಿನ ಮುಂದಕ್ಕೆ ಹಾಕಿದ್ದಿದೆ. ಚನ್ನಮ್ಮನ ಜಲಾಶಯದಲ್ಲಿ ನೀರು ಇದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಸಾರ್ವಜನಿಕರಿಗಾಗುವ ಸಮಸ್ಯೆ ನಿವಾರಿಸುವಲ್ಲಿ ವಿಫಲರಾಗಿದ್ದಾರೆ. 8-9 ದಿನಗಳಿಗೊಮ್ಮೆ ನೀರು ಬಂದಾಗ ಇಡೀ ದಿನ ಕೆಲಸ ಬಿಟ್ಟು ನೀರು ತುಂಬಿಸಿಕೊಳ್ಳಲು ಮನೆಮಂದಿ ತಾಪತ್ರಯ ಪಡುವಂತಾಗಿದೆ.

ಪಟ್ಟಣಕ್ಕೆ ಚನ್ನಮ್ಮನ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಸಿಗುತ್ತದೆಂಬುದಕ್ಕಷ್ಟೇ ನಿಟ್ಟುಸಿರು ಬಿಡಬೇಕಿದೆ. ವರ್ಷಗಳೇ ಉರುಳಿದರೂ 24/7 ನೀರು ಯೋಜನೆ ಮರೀಚಿಕೆಯಾಗಿದೆ. ಈ ಹಿಂದೆ ಏಳು ವಾರ್ಡ್‌ಗಳಲ್ಲಿ 24/7 ನೀರಿನ ಜೋಡಣೆ ಮಾಡಿ ಮೀಟರ್‌ ಅಳವಡಿಸಿ ಕೋಟಿಗಟ್ಟಲೇ ಹಣ ಪೋಲಾಗಿರುವುದಿನ್ನೂ ಹಸಿರಾಗಿದೆ.

ಇತ್ತೀಚೆಗೆ ಪಟ್ಟಣದ ಹೃದಯ ಭಾಗದಲ್ಲಿರುವ ನೀಲಮ್ಮನ ಕೆರೆ ನೀರನ್ನು ಖಾಲಿ ಮಾಡಿ ಹೊಳೆತ್ತುವ ಯೋಜನೆಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸುಪರ್ದಿಗೆ ನೀಡಲಾಗಿದೆ. ಹೊಳೆತ್ತುವ ಕಾರ್ಯವಾದ ಮೇಲಾದರೂ ಕೆರೆ ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪುರಸಭೆಯವರು ಸಮರ್ಪಕ ಯೋಜನೆ ರೂಪಿಸಬೇಕಿದೆ.

 

ಕುಡಿಯುವ ನೀರು ಎಂಟು ದಿನಕ್ಕೊಮ್ಮೆ ಬಿಡುವುದನ್ನು ನಾಲ್ಕೈದು ದಿನಕ್ಕೊಮ್ಮೆ ಬಿಡಬೇಕೆಂದು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಂದು ವಾರದಲ್ಲಿ ನಳದ ಕುಡಿಯುವ ನೀರಿನ ದಿನವನ್ನು ಕಡಿಮೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಲಾಗುವುದು.

ಮಂಜುನಾಥ ಜಾಧವ, ನವಲಗುಂದ ಪುರಸಭೆ ಅಧ್ಯಕ್ಷ

 

ಪಟ್ಟಣದಲ್ಲಿ ಎಂಟು ದಿನಗಳಿಗೊಮ್ಮೆ ಬಿಡುವಂತಹ ನೀರಿಯ ಸಮಯವನ್ನು ನಾಲ್ಕು ಅಥವಾ ಐದು ದಿನಕ್ಕೊಮ್ಮೆ ಬಿಡುವ ಯೋಜನೆ ಇದೆ. ಹೊಸ ಟ್ಯಾಂಕ್‌ ಕಾಮಗಾರಿ ಮುಗಿದಿದ್ದು, ಸದ್ಯದಲ್ಲಿಯೇ ನೀರಿನ ಸಮಸ್ಯೆ ಇತ್ಯರ್ಥ ಮಾಡುತ್ತೇವೆ.

ವೀರಣ್ಣ ಹಸಬಿ, ಪುರಸಭೆ ಮುಖ್ಯಾಧಿಕಾರಿ

 

8-9 ದಿನಗಳಿಗೆ ನೀರು ಬಿಡುತ್ತಿರುವುದರಿಂದ ಇರುವ ಕೆಲಸ ಬಿಟ್ಟು ದಿನವೆಲ್ಲಾ ನೀರು ತುಂಬಿಸಿಕೊಳ್ಳಲು ಕಾಯುವಂತಾಗಿದೆ. ಹೆಸರಿಗೆ ಮಾತ್ರ ಶಾಶ್ವತ ಕುಡಿಯುವ ನೀರಿನ ಯೋಜನೆಯಾಗಿದೆ. ಮುಖ್ಯಾಧಿಕಾರಿಗಳು ಪಟ್ಟಣದ ಜಲ್ವಂತ ಸಮಸ್ಯೆಗಳಿಗೆ ಒತ್ತು ನೀಡಬೇಕು. ನಾಲ್ಕು ದಿನಕ್ಕೊಮ್ಮೆಯಾದರೂ ನೀರು ಬಿಟ್ಟು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕು.

 ಲೋಕನಾಥ ಹೆಬಸೂರ, ರೈತ ಮುಖಂಡರು

 

ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಎಂಟು ದಿನ ಕಾಯಬೇಕಾಗಿದೆ. ನೀರು ಸಂಗ್ರಹಾಗಾರದಲ್ಲಿ ನೀರು ಇದ್ದರೂ ಇಲ್ಲದಿದ್ದರೂ ಪುರಸಭೆಯವರು ಏನಾದರೂ ಒಂದು ಸಬೂಬು ಹೇಳುತ್ತಾರೆ. ನೀರು ಪೂರೈಕೆ ಅವಧಿ ಎಂಟು ದಿನ ಇರುವುದನ್ನು ಕಡಿಮೆ ಮಾಡಿದರೆ ಒಳ್ಳೆಯದು.

ಸಿದ್ದು ಹಿರೇಮಠ, ಸ್ಥಳೀಯ ನಿವಾಸಿ

-ಪುಂಡಲೀಕ ಮುಧೋಳ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.