ಮತದಾನ ಹೆಚ್ಚಳಕ್ಕೆ ಜನರ ಸಹಕಾರ ಅಗತ್ಯ
Team Udayavani, Sep 19, 2018, 5:34 PM IST
ಧಾರವಾಡ: ಮುಂಬರುವ ಚುನಾವಣೆಗಳಲ್ಲಿ ಇನ್ನಷ್ಟು ಮತದಾನ ಹೆಚ್ಚಿಸಲು, ಮತದಾರರು ಸಕ್ರಿಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಮಾಡಲು ಎಲ್ಲರ ಸಹಕಾರ ಮತ್ತು ಅನುಭವಗಳು ಅಗತ್ಯ ಎಂದು ಜಿಪಂ ಸಿಇಒ ಸ್ನೇಹಲ್ ರಾಯಮಾನೆ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2018ಕ್ಕೆ ಸಂಬಂಧಿಸಿದಂತೆ ಮತದಾನದ ಜಾಗೃತಿ ಮತ್ತು ಮಹತ್ವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಪ್ರಶಂಸನಾ ಪತ್ರ, ಸ್ಮರಣಿಕೆ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶೇ.67 ಮತದಾನವಾಗಿತ್ತು. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶೇ.71 ಮತದಾನವಾಗಿದೆ. ಎನ್ಜಿಒಗಳು ಜಿಲ್ಲಾ ಸ್ವೀಪ್ ಸಮಿತಿಗೆ ಮತದಾನ ಜಾಗೃತಿಗೆ ನೆರವು ನೀಡಿವೆ. ಅವರ ಪಾತ್ರವೂ ಪ್ರಮುಖವಾಗಿದೆ. ಜಿಲ್ಲೆಯ ಮತದಾನ ಹೆಚ್ಚಿಸಲು ಸೂಕ್ತ ಸಲಹೆ, ಮಾದರಿಗಳನ್ನು ನೀಡಬಹುದು. ಇದು ಪರಿಣಾಮಕಾರಿ ಅನುಷ್ಠಾನಕ್ಕೆ ಸಹಾಯಕವಾಗಲಿದೆ ಎಂದರು.
ಧಾರವಾಡದ ಸಮರ್ಥನಂ, ಸಾಮರ್ಥ್ಯ, ಸಮರ್, ಸ್ಪದಾ, ಬೆಳಕು, ರೋಟರಿ ಕ್ಲಬ್, ಸಂತತಾ, ಕಲ್ಪತರು ಮಹಿಳಾ ಮಂಡಳ, ಧಾರವಾಡ ಬಾಂಡ್ಸ್, ಸ್ಯಾಂಡ್ಬಾಕ್ಸ್ ಸ್ಟಾರ್ಟ್ಅಫ್, ಟ್ರಾನ್ಸ್ಪಾಯರ್ ಪಿಟ್ನೆಸ್ ಜಿಮ್, ರೋಲರ್ ಸ್ಕೇಟಿಂಗ್ ಅಕಾಡೆಮಿ ಮತ್ತು ಹುಬ್ಬಳ್ಳಿಯ ಲಯನ್ಸ್ ಕ್ಲಬ್ ಪ್ರತಿನಿಧಿಗಳಿಗೆ ಸಿಇಒ ಸ್ನೇಹಲ್ ಆರ್. ಅವರು ಪ್ರಶಂಸನಾಪತ್ರ ಹಾಗೂ ಸ್ಮರಣಿಕೆ ನೀಡಿ ಅಭಿನಂದಿಸಿದರು. ಜಿಪಂ ಉಪ ಕಾರ್ಯದರ್ಶಿ ಎಸ್.ಜಿ. ಕೊರವರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!