ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ: ಹರಿಶೇಖರನ್‌


Team Udayavani, Feb 23, 2021, 4:30 PM IST

ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ: ಹರಿಶೇಖರನ್‌

ಧಾರವಾಡ: ಪೊಲೀಸ್‌ ಪ್ರಶಿಕ್ಷಣಾರ್ಥಿಗಳುತರಬೇತಿ ನಂತರದ ತಮ್ಮ ಸೇವಾವಧಿಯಲ್ಲಿ ವೃತ್ತಿಗೆ ಪೂರ್ವದಲ್ಲಿ ಸ್ವೀಕರಿಸಿದ ಪ್ರತಿಜ್ಞೆಗೆ ಬದ್ಧರಾಗಿ ಮತ್ತು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು ಎಂದು ರಾಜ್ಯ ಪೊಲೀಸ್‌ ಇಲಾಖೆ ತರಬೇತಿ ವಿಭಾಗದ ಪೊಲೀಸ್‌ ಮಹಾನಿರೀಕ್ಷಕ ಪಿ. ಹರಿಶೇಖರನ್‌ ಹೇಳಿದರು.

ಇಲ್ಲಿನ ಪೊಲೀಸ್‌ ತರಬೇತಿ ಶಾಲೆಯಲ್ಲಿ 6ನೇ ತಂಡದ ಪ್ರಶಿಕ್ಷಣಾರ್ಥಿ ನಾಗರಿಕ ಪೊಲೀಸ್‌ ಪೇದೆಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನಸಾಮಾನ್ಯರಿಗೆ ಇಲಾಖೆಕಾರ್ಯಕ್ರಮ, ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡಬೇಕು. ಜನರ ಸಹಭಾಗಿತ್ವ, ಅಧಿಕಾರಿಗಳ ಸಹಕಾರದಿಂದ ಉತ್ತಮವಾಗಿಕಾರ್ಯ ನಿರ್ವಹಿಸಬಹುದು. ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಗ್ರಾಮವಾಸ್ತವ್ಯದಲ್ಲಿಪಾಲ್ಗೊಂಡು ಜನರಿಗೆ ಸುರಕ್ಷತೆ, ಶಾಂತಿ,ಸುವ್ಯವಸ್ಥೆ ಭಾವನೆ ಮೂಡಿಸಿ ಅವರು ಸಹಭಾಗಿತ್ವ ನೀಡುವಂತೆ ಪ್ರೇರೇಪಿಸಬೇಕು ಎಂದರು.

ಪ್ರಶಿಕ್ಷಣಾರ್ಥಿಗಳು ಉತ್ತಮವಾಗಿ ಪಥಸಂಚಲನ ಪ್ರದರ್ಶಿಸಿದ್ದಕ್ಕೆ ಪ್ರಶಿಕ್ಷಣಾರ್ಥಿಗಳ ತರಬೇತಿದಾರರಿಗೆ 10,000ರೂ. ಬಹುಮಾನ ಘೋಷಿಸಿದರು.ಹು-ಧಾ ಪೊಲೀಸ್‌ ಆಯುಕ್ತ ಲಾಬುರಾಮ್‌, ಎಸ್ಪಿ ಪಿ. ಕೃಷ್ಣಕಾಂತ, ರಾಜ್ಯದ ವಿವಿಧ ಪೊಲೀಸ್‌ ತರಬೇತಿಶಾಲೆಗಳ ಪ್ರಾಂಶುಪಾಲರು, ಅಧಿಕಾರಿಗಳುಪಾಲ್ಗೊಂಡಿದ್ದರು. ಪೊಲೀಸ್‌ ತರಬೇತಿಶಾಲೆಯ ಪ್ರಾಂಶುಪಾಲ ಎನ್‌.ಬಿ. ಜಾಧವ ಸ್ವಾಗತಿಸಿ, ವರದಿ ವಾಚನ ಮಾಡಿದರು.

ಪಥಸಂಚಲನದಲ್ಲಿ ವಿವಿಧ ತಂಡಗಳ ನೇತೃತ್ವವನ್ನು ಪ್ರಶಿಕ್ಷಣಾರ್ಥಿಗಳಾದ ಪಂಚಾಕ್ಷರಿಸಿದ್ದನಗೌಡ ಪಾಟೀಲ, ಶಬ್ಬೀರ ಎಂ, ಪ್ರದೀಪ ಕೆ., ಮಧುಚಂದ್ರ ಧಾರವಾಡ, ನಾಗರಾಜ ಕೆ. ಬರಡಿ, ನಾಗೇಂದ್ರಕುಮಾರ ಎನ್‌., ಯಲ್ಲಪ್ಪ ತೋಳಮಟ್ಟ, ಆನಂದ ವಿ.ವಿ.,ಆಕರ್ಷ ಎಂ.ಎಸ್‌., ಮಾರ್ತಾ.ಡಪ್ಪ, ಮಾಟ್ನರ್‌ ಅನಿಲಕುಮಾರ, ಪರಶಿವಮೂರ್ತಿಬಿ. ವಹಿಸಿದ್ದರು. ಎನ್‌.ಎ. ಮುತ್ತಣ್ಣ ಸ್ಮಾರಕ ಪೊಲೀಸ್‌ ಮಕ್ಕಳ ವಸತಿ ಶಾಲೆಯ ಪ್ರಾಚಾರ್ಯ ಡಾ| ವೈ.ಪಿ. ಕಲ್ಲನಗೌಡರ ನಿರೂಪಿಸಿದರು. ಪೊಲೀಸ್‌ ಇನ್ಸ್‌ಪೆಕ್ಟರ್‌ ಡಾ| ಗಿರೀಶ ಭೋಜನ್ನವರ ವಂದಿಸಿದರು.

341 ಪ್ರಶಿಕ್ಷಣಾರ್ಥಿಗಳು :

ನಾಗರಿಕ ಪೊಲೀಸ್‌ ಪೇದೆಗಳ ನಿರ್ಗಮನ ಪಥ ಸಂಚಲನದಲ್ಲಿ 341 ಪ್ರಶಿಕ್ಷಣಾರ್ಥಿಗಳಿದ್ದರು. ಪರೇಡ್‌ ಕಮಾಂಡರ್‌ ರಂಜಿತಕುಮಾರ ಹಾಗೂ ನವೀನಕುಮಾರ ಚವ್ಹಾಣ ನೇತೃತ್ವದಲ್ಲಿ ಅತಿಥಿಗಳಿಗೆ ವಿವಿಧ ತಂಡಗಳಿಂದ ಗೌರವ ಸಲ್ಲಿಸಲಾಯಿತು. ಒಳಾಂಗಣ ವಿಭಾಗದಲ್ಲಿ ಪರಶಿವಮೂರ್ತಿ ಬಿ.,ವೀರೇಂದ್ರ ಶಿಪರಮಟ್ಟಿ, ಆನಂದ ಬಹುಮಾನ ಪಡೆದರು. ಹೊರಾಂಗಣ ವಿಭಾಗದಲ್ಲಿ ರಂಜಿತಕುಮಾರ, ದಸ್ತಗೀರ, ನರಸಪ್ಪ ಬಹುಮಾನ ಪಡೆದರು.ಫೈರಿಂಗ್‌ ವಿಭಾಗದಲ್ಲಿ ಎಸ್‌. ನದಾಫ್‌, ರμàಕ್‌ ನದಾಫ್‌, ಸುರೇಶ ಜಿ., ಮೊಹಮ್ಮದ ಎಜಾಜ್‌ ಬಹುಮಾನ ಪಡೆದರು. ಸರ್ವೋತ್ತಮ ಪ್ರಶಿಕ್ಷಣಾರ್ಥಿಯಾಗಿ ರಂಜಿತಕುಮಾರ ಬಹುಮಾನ ಪಡೆದರು.

ಅನೇಕ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗೆ ಕರ್ತವ್ಯದಲ್ಲಿದ್ದಾಗ ತಮ್ಮ ಜವಾಬ್ದಾರಿ, ಅಧಿಕಾರಗಳು ಅರ್ಥವಾಗುವುದಿಲ್ಲ. ಹಲವಾರು ರೀತಿಯ ಸವಾಲುಗಳಿದ್ದರೂ ಅಪ್ರಮುಖವಾದವುಗಳಿಗೆ ಪ್ರಾಶಸ್ತ್ಯ ನೀಡುತ್ತಾರೆ. ಇದರಿಂದ ಹಲವಾರು ರೀತಿಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಇಲಾಖೆಯ ಆಶಯ, ಉದ್ದೇಶಗಳಿಗೆ ಆದ್ಯತೆ ನೀಡಿ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ಪಿ. ಹರಿಶೇಖರನ್‌, ರಾಜ್ಯ ಪೊಲೀಸ್‌ ಇಲಾಖೆ ತರಬೇತಿ ವಿಭಾಗದ ಪೊಲೀಸ್‌ ಮಹಾನಿರೀಕ್ಷಕ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.