ವಕೀಲ ವೃತ್ತಿಯಲ್ಲಿ ಪರಿಶ್ರಮ ಮುಖ್ಯ


Team Udayavani, Nov 24, 2019, 10:51 AM IST

huballi-tdy-3

ಹುಬ್ಬಳ್ಳಿ: ವೃತ್ತಿ ಬದುಕಿನಲ್ಲಿ ಪ್ರಾಮಾಣಿಕತೆ, ಕಠಿಣ ಪರಿಶ್ರಮ, ತಾಳ್ಮೆ ಮುಖ್ಯ. ಅಂದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯವೆಂದು ಹೈಕೋರ್ಟ್‌ ಧಾರವಾಡ ಪೀಠದ ನ್ಯಾಯಮೂರ್ತಿ ಎಚ್‌.ಟಿ. ನರೇಂದ್ರ ಪ್ರಸಾದ ಹೇಳಿದರು. ನವನಗರದ ಕರ್ನಾಟಕ ರಾಜ್ಯ ಕಾನೂನು ವಿವಿಯಲ್ಲಿ ಹಮ್ಮಿಕೊಂಡ 7ನೇ ರಾಜ್ಯಮಟ್ಟದ ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆ-2019 ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ವಕೀಲ ವೃತ್ತಿ ಮಾಡಲು ಕಲ್ಪಿತ ನ್ಯಾಯಾಲಯದಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ. ಕಾನೂನು ಕಲಿಕೆಯ ನಂತರ ವಿದ್ಯಾರ್ಥಿಗಳು ವೃತ್ತಿ ಪ್ರಾರಂಭಿಸುವ ಮೊದಲು ಯಾವ ವೃತ್ತಿ ಆರಂಭಿಸಬೇಕು ಎನ್ನುವಂತಹ ನೂರಾರು ಪ್ರಶ್ನೆಗಳು ಕಾಡುವುದು ಸಹಜ. ಆದರೆ ವಿದ್ಯಾರ್ಥಿಗಳು ಇತರೆ ಉದ್ಯೋಗಗಳನ್ನು ಅರಸಿ ಹೋಗದೆ ವಕೀಲ ವೃತ್ತಿ ಮೇಲೆ ಹೆಚ್ಚು ಒಲವು ತೋರಬೇಕು ಎಂದರು.

ಹೈಕೋರ್ಟ್‌ ಧಾರವಾಡ ಪೀಠದ ನ್ಯಾಯಮೂರ್ತಿ ಪಿ.ಜಿ.ಎಂ. ಪಾಟೀಲ ಮಾತನಾಡಿ, ಹಿಂದಿನಗಿಂತಲೂ ಪ್ರಸ್ತುತದಲ್ಲಿ ಕಾನೂನು ಕಲಿಕೆಗೆ ಅನೇಕ ಸೌಲಭ್ಯಗಳು ಲಭ್ಯವಿವೆ. ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳಿಂದ ಮತ್ತು ಕಠಿಣ ಪರಿಶ್ರಮದಿಂದ ಉತ್ತಮ ವಕೀಲರಾಗಬೇಕು. ಕಲ್ಪಿತ ನ್ಯಾಯಾಲಯಗಳಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ ವಾಕ್‌ಚಾತುರ್ಯ, ವಾದ ಮಂಡಿಸುವ ಕೌಶಲ ಮತ್ತು ವಾದಿಸುವ ಕಲೆ ಇನ್ನಷ್ಟು ಚುರುಕುಗೊಳಿಸುತ್ತವೆ ಎಂದು ಹೇಳಿದರು.

ಕಾನೂನು ವಿವಿ ಕುಲಪತಿ ಡಾ| ಪಿ. ಈಶ್ವರ ಭಟ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಅರಿವು ಮತ್ತು ತಿಳಿವು ವಕೀಲನಲ್ಲಿರಬೇಕಾದ ಅವಶ್ಯಕ ಅಂಶ. ಭಾಷೆಯ ಮೇಲಿನ ಹಿಡಿತ, ವಿಷಯದ ಸಂಪೂರ್ಣ ತಿಳಿವಳಿಕೆ ಅವನನ್ನು ನಿಶ್ಚಿತ ಗುರಿ ತಲುಪುವಲ್ಲಿ ಸಹಾಯ ಮಾಡುತ್ತದೆ ಎಂದರು. ಕಾನೂನು ವಿವಿ ಕುಲಸಚಿವ ಆರ್‌. ರವಿಶಂಕರ ಅವರು “ಆನರ್‌ ಕಿಲ್ಲಿಂಗ್‌’ ವಿಷಯದ ಮೇಲೆ ಸಂಶೋಧನಾ ಪತ್ರ ಮಂಡಿಸಿ, ವಿಶೇಷ ಉಪನ್ಯಾಸ ನೀಡಿದರು. ಡೀನ್‌ ಮತ್ತು ನಿರ್ದೇಶಕ ಡಾ| ಸಿ. ಎಸ್‌. ಪಾಟೀಲ ಮೊದಲಾದವರಿದ್ದರು. ಮೌಲ್ಯಮಾಪನ ಪ್ರಭಾರ ಕುಲಸಚಿವ ಡಾ| ಜಿ.ಬಿ. ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.