ರಸ್ತೆ ಗುಂಡಿಗಳಲ್ಲೇ ವನಮಹೋತ್ಸವ!
Team Udayavani, Aug 3, 2019, 9:18 AM IST
ಧಾರವಾಡ: ಮಳೆಗಾಲದಲ್ಲಿ ಹದೆಗಟ್ಟ ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಪ್ರತಿಭಟನೆ ಕೈಗೊಂಡ ಸ್ಥಳೀಯರು.
ಧಾರವಾಡ: ಸಾಧನಕೇರಿ ಕೆರೆಯ ಬಂಡ್ ಮೇಲೆ ಹಾದು ಹೋಗಿರುವ ಕಾಂಟನ್ಮೆಂಟ್ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಸ್ಥಳೀಯರು ರಸ್ತೆ ಗುಂಡಿಗಳಲ್ಲಿ ಶುಕ್ರವಾರ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳಿಗೆ, ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಕಾರಣ ಬೆಳ್ಳಂಬೆಳಗ್ಗೆ ಬೀದಿಗಿಳಿದು ಸಾಂಕೇತಿಕ ಹೋರಾಟ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದರು.
ಬೆಳಗ್ಗೆ ವಾಯುವಿಹಾರಕ್ಕೆ ಬಂದ ಹಿರಿಯ ನಾಗರಿಕರು, ಜನಜಾಗೃತಿ ಸಂಘದ ಸದಸ್ಯರು ರಸ್ತೆ ಪಕ್ಕದ ಕಂಟಿಗಳನ್ನು ಗುಂಡಿಗಳಲ್ಲಿ ನಿಲ್ಲಿಸಿ ಅಸಮಾಧಾನ ವ್ಯಕ್ತಪಡಿಸಿದರು.
ಈ ರಸ್ತೆ ವರಕವಿ ದ.ರಾ. ಬೇಂದ್ರೆಯವರು ನಡೆದಾಡಿದ ರಸ್ತೆಯಾಗಿದ್ದು, ಧಾರವಾಡ ಜಿಲ್ಲೆಯಷ್ಟೇ ಅಲ್ಲದೆ, ರಾಜ್ಯದ ವಿವಿಧ ಭಾಗಗಳಿಂದ ದಿನನಿತ್ಯ ನೂರಾರು ಪ್ರವಾಸಿಗರು ಬಾರೋ ಸಾಧನಕೇರಿ ಪ್ರವಾಸಿ ತಾಣ ವೀಕ್ಷಿಸಲು ಆಗವಿಸುತ್ತಾರೆ. ಇದು ಜಿಲ್ಲಾಡಳಿತದ ಗಮನಕ್ಕೆ ಇದ್ದರೂ ಜಾಣ ಕುರುಡುತನ ತೋರಿಸುತ್ತಿರುವುದು ಸರಿಯಾದ ಬೆಳವಣಿಗೆ ಅಲ್ಲ ಎಂದು ದೂರಿದರು.
ಹೈಕೋರ್ಟ್ ವಕೀಲ ನೀಲೇಂದ್ರ ಗೂಂಡೆ, ಅರವಿಂದ ದೇಶಮುಖ, ಪರಪ್ಪ ಎಸ್.ಕೆ., ಆನಂದ ದೀಕ್ಷಿತ್, ವಸಂತ ಅಣ್ವೇಕರ, ಜನ ರಾಘವೇಂದ್ರ ಶೆಟ್ಟಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ