ಚಿಂದಿ ಆಯುವ 300 ಕುಟುಂಬಗಳಿಗೆ ನೆರವು

­ ಪ್ಲಾಸ್ಟಿಕ್‌ ಫಾರ್‌ ಚೇಂಜ್‌ ಇಂಡಿಯಾ ಸಹಾಯಹಸ್ತ­, ದಿನಸಿ-ಮೆಡಿಕಲ್‌ ಕಿಟ್‌ ವಿತರಣೆ; ಆರೋಗ್ಯ ಕಾಳಜಿ

Team Udayavani, Jun 9, 2021, 6:15 PM IST

img-20210608-wa0031

ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಕೋವಿಡ್‌ ಮಹಾಮಾರಿಗೆ ಚಿಂದಿ ಆಯುವವರ ಬದುಕು ಮೂರಾಬಟ್ಟೆಯಾಗಿದ್ದು, ಜೀವನ ನಡೆಸಲು ದುಸ್ತವಾಗಿರುವ ಸಂದರ್ಭದಲ್ಲಿ ಫೌಂಡೇಶನ್‌ವೊಂದು ಸಹಾಯ ಹಸ್ತ ಚಾಚಿದೆ. ಸಂಕಷ್ಟದಲ್ಲಿರುವ ಕುಟುಂಬಗಳನ್ನು ಗುರುತಿಸಿ ಅವರ ಜೀವನಕ್ಕೆ ನೆರವಾಗಿದೆ.

ಕಸ ಸಂಗ್ರಹಕಾರರಿಗೆ ಸೊಂಕಿನ ಭೀತಿ ಒಂದೆಡೆಯಾದರೆ ನಿತ್ಯ ಜೀವನ ಸಾಗಿಸುವ ಸಂಕಷ್ಟ ಮತ್ತೂಂದು ಕಡೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ಲಾಸ್ಟಿಕ್‌ ಫಾರ್‌ ಚೇಂಜ್‌ ಇಂಡಿಯಾ ಫೌಂಡೇಶನ್‌ ಇಂತವರ ಕುಟುಂಬಗಳಿಗೆ ನೆರವಾಗಿದೆ. ಒಂದು ತಿಂಗಳಿಗೆ ಬೇಕಾಗುವ ದಿನಸಿ, ಆರೋಗ್ಯ ಕಿಟ್‌ ತಲುಪಿಸುವ ಕಾರ್ಯ ಮಾಡಿದೆ.

ಮಹಾನಗರ ವ್ಯಾಪ್ತಿಯಲ್ಲಿ 500 ಕುಟುಂಬಗಳ ಪೈಕಿ ಸಂಕಷ್ಟದಲ್ಲಿರುವ 300 ಕುಟುಂಬಗಳನ್ನು ಗುರುತಿಸಿ ನೆರವಿನ ಹಸ್ತ ಚಾಚಿದೆ. ಕಳೆದ ಒಂದು ವರ್ಷದಿಂದ ಕಸ ಸಂಗ್ರಹಿಸುವವರ ಕುರಿತು ಮಹಿಳಾ ಕಲ್ಯಾಣ ಸೊಸೈಟಿಯೊಂದಿಗೆ ಕೆಲಸ ಮಾಡುತ್ತಿರುವ ಫೌಂಡೇಶನ್‌ ಕಳೆದ ಬಾರಿ ಸುಮಾರು 450 ಕುಟುಂಬಗಳಿಗೆ ನೆರವು ನೀಡಿತ್ತು. ಈ ಬಾರಿ 300 ಕುಟುಂಬಗಳನ್ನು ಗುರುತಿಸಿ ಆಹಾರ ಕಿಟ್‌ ನೀಡಿದೆ.

ಪಡಿತರ ಚೀಟಿಯುಳ್ಳವರು, ಇಲ್ಲದವರಿಗೆ ಪ್ರತ್ಯೇಕ ಕಿಟ್‌ ಮಾಡಿ ಅವರಿಗೆ ಅಗತ್ಯವಿರುವ ದಿನಸಿ ವಸ್ತುಗಳನ್ನು ನೀಡಲಾಗಿದೆ. ಇದರೊಂದಿಗೆ ವಿಟಾಮಿನ್‌, ಜಿಂಕ್‌ ನಂತಹ ಮಾತ್ರೆಗಳಿರುವ ಮೆಡಿಕಲ್‌ ಕಿಟ್‌ ಕೂಡ ನೀಡಲಾಗಿದೆ.

ಮಹಾನಗರ ವಾಪ್ತಿಯ ಧಾರವಾಡದ ಲಕ್ಷ್ಮೀ ಸಿಂಗನಕೆರೆ, ಹುಬ್ಬಳ್ಳಿಯ ಮಹಾಲಕ್ಷ್ಮೀ ಬಡಾವಣೆ ಬಳಿಯ ಗೋಸಾವಿ ಓಣಿ, ಶಿವಶಂಕರ ಕಾಲನಿ, ಬಂಕಾಪುರ ಚೌಕ್‌ ಬಳಿಯ ಗೊಲ್ಲರ ಓಣಿಯಲ್ಲಿ ಕಸ ಸಂಗ್ರಹಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರ ಮೊಬೈಲ್‌ ಸಂಖ್ಯೆ ಅಥವಾ ಪಕ್ಕದ ಮನೆಯ ಮೊಬೈಲ್‌ ಸಂಖ್ಯೆ ಪಡೆದು ಆರೋಗ್ಯದ ಬಗ್ಗೆ ವಿಚಾರಿಸುವುದು, ಅಗತ್ಯವಿದ್ದವರಿಗೆ ವೈದ್ಯರ ಸಲಹೆ ಹಾಗೂ ಅಗತ್ಯ ಔಷಧಗಳನ್ನು ತಲುಪಿಸುವ ಕೆಲಸ ಆಗುತ್ತಿದೆ. ಕೋವಿಡ್‌ ಸೋಂಕಿನ ಲಕ್ಷಣ, ಅಗತ್ಯಬಿದ್ದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿ ಚಿಕಿತ್ಸೆ ಕೊಡಿಸುವ ಕೆಲಸ ಆಗುತ್ತಿದೆ.

120 ಕುಟುಂಬಗಳಿಗೆ ಕಿಟ್‌: ಕಸ ಸಂಗ್ರಹಿಸುವವರೊಂದಿಗೆ ಗುಜರಿ ಅಂಗಡಿಗಳಲ್ಲಿ ಕೆಲಸ ಮಾಡುವವರಿಗೂ ಕಿಟ್‌ ವಿತರಿಸಲು ಯೋಜನೆ ರೂಪಿಸಿದ್ದಾರೆ. ಮಹಾನಗರ ವ್ಯಾಪ್ತಿಯ 20 ಗುಜರಿ ಅಂಗಡಿಗಳಲ್ಲಿ ಕೆಲಸ ಮಾಡುವ ಆರ್ಥಿಕವಾಗಿ ಹಿಂದುಳಿದ, ಕಿಟ್‌ ಅಗತ್ಯ ಇರುವ 120 ಕುಟುಂಬಗಳನ್ನು ಗುರುತಿಸಲಾಗಿದೆ. ಸದ್ಯಕ್ಕೆ ಗುಜರಿ ಅಂಗಡಿಗಳು ಕಾರ್ಯ ನಿರ್ವಹಿಸುವುದು ಕಷ್ಟ ಎನ್ನುವ ಕಾರಣಕ್ಕೆ ಕನಿಷ್ಟ ಒಂದು ತಿಂಗಳಿಗೆ ಬೇಕಾಗುವಷ್ಟು ದಿನಸಿ, ಮೆಡಿಕಲ್‌ ಕಿಟ್‌ ನೀಡುವ ಕೆಲಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.