ಮತ್ತೆ ಮೂವರಿಗೆ ಪ್ಲಾಸ್ಮಾ ಥೆರಪಿ: ಇಬ್ಬರು ಗುಣಮುಖ


Team Udayavani, Jul 12, 2020, 6:57 AM IST

ಮತ್ತೆ ಮೂವರಿಗೆ ಪ್ಲಾಸ್ಮಾ ಥೆರಪಿ: ಇಬ್ಬರು ಗುಣಮುಖ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹುಬ್ಬಳ್ಳಿ: ರಾಜ್ಯದಲ್ಲಿ ಮೊದಲ ಬಾರಿಗೆ ಕೋವಿಡ್‌-19 ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಮೂಲಕ ಚಿಕಿತ್ಸೆ ನೀಡಿದ್ದ ಇಲ್ಲಿನ ಕಿಮ್ಸ್‌ ಕೋವಿಡ್‌ ಕೇಂದ್ರದಲ್ಲಿ ಮತ್ತೆ ಮೂವರಿಗೆ ಈ ಪದ್ಧತಿ ಅನುಸಾರ ಚಿಕಿತ್ಸೆ ನೀಡಲಾಗಿದೆ. ಅವರಲ್ಲಿ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇನ್ನೊಬ್ಬರು ಐಸಿಯುನಲ್ಲಿದ್ದಾರೆ.

ಕೋವಿಡ್‌-19 ಸೋಂಕಿನಿಂದ ಗುಣಮುಖರಾಗಿದ್ದ ಹುಬ್ಬಳ್ಳಿಯ ನಿವಾಸಿಯಿಂದ ಪ್ಲಾಸ್ಮಾ ಪಡೆದು ಮೇ ತಿಂಗಳಲ್ಲಿ ಮೊದಲ ಪ್ಲಾಸ್ಮಾ ಥೆರಪಿ ನಡೆಸಲಾಗಿತ್ತು. ಅನಂತರ ಐಸಿಎಂಆರ್‌ನಿಂದ ಅನುಮತಿ ದೊರೆತ ಕೂಡಲೇ ಜೂ. 27, ಜು. 4 ಮತ್ತು 7ರಂದು ಹುಬ್ಬಳ್ಳಿ, ಹಾವೇರಿ ಜಿಲ್ಲೆ ಹಾನಗಲ್ಲ ಮತ್ತು ಧಾರವಾಡ ತಾಲೂಕು ಮೊರಬ ಗ್ರಾಮದ ತಲಾ ಒಬ್ಬರು ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ.

ಸೋಂಕಿತ ಪ್ರತಿಯೊಬ್ಬರಿಗೂ ತಲಾ 200 ಎಂಎಲ್‌ ಪ್ಲಾಸ್ಮಾ ಕೊಡಲಾಗಿದೆ. ಥೆರಪಿಗೆ ಒಳಗಾದವರಲ್ಲಿ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇನ್ನೆರಡು ದಿನಗಳಲ್ಲಿ ಡಿಸ್ಚಾರ್ಜ್‌ ಆಗಲಿದ್ದಾರೆ. ಇನ್ನೊಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಮತ್ತೆ ಕೆಲವು ದಿನಗಳ ಅನಂತರ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಿದ್ದು, ವರದಿ ನೆಗೆಟಿವ್‌ ಬರುವ ವಿಶ್ವಾಸವಿದೆ. ಇದುವರೆಗೆ ಹುಬ್ಬಳ್ಳಿಯ ಮೂವರು ಹಾಗೂ ಧಾರವಾಡದ ಇಬ್ಬರಿಂದ ಪ್ಲಾಸ್ಮಾ ಪಡೆಯಲಾಗಿದೆ. ಅದರಲ್ಲಿ ನಾಲ್ವರು ಸೋಂಕಿತರಿಗೆ ಪ್ಲಾಸ್ಮಾ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಕಿಮ್ಸ್‌ನ ಮೆಡಿಸನ್‌ ವಿಭಾಗದ ಡಾ| ರಾಮ ಕೌಲಗುಡ್ಡ, ಡಾ| ಈಶ್ವರ ಹಸಬಿ, ಡಾ| ಸಚಿನ ಹೊಸಕಟ್ಟಿ, ಪ್ಯಾಥಾಲಜಿ ವಿಭಾಗದ ಡಾ| ಕವಿತಾ ಏವೂರ, ಡಾ| ಪುರುಷೋತ್ತಮ ರೆಡ್ಡಿ ಅವರ ತಂಡವು ಪ್ಲಾಸ್ಮಾ ಚಿಕಿತ್ಸೆ ನಡೆಸಿದೆ.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.