ಹುಬ್ಬಳ್ಳಿಯಲ್ಲಿ ನಾಳೆ ರಾಷ್ಟ್ರೀಯ ಯುವಜನೋತ್ಸವಕ್ಕೆ ಮೋದಿ ಚಾಲನೆ
Team Udayavani, Jan 11, 2023, 6:30 AM IST
ಧಾರವಾಡ: ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತ ನಡೆಯುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಜ.12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಗುವುದು. ಅಲ್ಲದೇ, 7500 ಯುವಕರು ಪಥಸಂಚಲನ ಮಾಡಲಿದ್ದಾರೆ.
ಈಗಾಗಲೇ ಉತ್ಸವದ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ್ದು, ದೇಶದ 28 ರಾಜ್ಯಗಳು, 8 ಕೇಂದ್ರಾಡಳಿತ ಪ್ರದೇಶಗಳ ಸುಮಾರು 7,500 ಯುವ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಚಟುವಟಿಕೆಗಳು ಧಾರವಾಡದಲ್ಲಿ ನಡೆಯಲಿವೆ. 30 ಸಾವಿರ ಜನರು ಬರುವ ನಿರೀಕ್ಷೆ ಇದೆ. ಈಗಾಗಲೇ 5500 ಜನ ನೋಂದಾಯಿಸಿದ್ದಾರೆ.
ಅತಿಥಿಗಳಿಗೆ ಕೆಸಿಡಿ, ಕೆಯುಡಿ ಹಾಗೂ ಕೃಷಿ ವಿವಿಯಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೊಂದು ಇಲಾಖೆಗೆ ಒಂದೊಂದು ಜವಾಬ್ದಾರಿ ಕೊಟ್ಟಿದ್ದು, ಅಚ್ಚುಕಟ್ಟು ಉತ್ಸವ ಆಯೋಜನೆಗೆ ಅಂತಿಮ ಹಂತದ ಸಿದ್ಧತೆ ನಡೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ