ಹಬ್ಬಗಳ ಆಚರಣೆಗೆ ಪೊಲೀಸ್ ಇಲಾಖೆ ಸಹಕಾರ
ಶಬ್ಬೆಬಾರಾತ್ ವೇಳೆ ಬೈಕ್ ದುಸ್ಸಾಹಸ; ಬುದ್ಧಿವಾದ ಹೇಳಲು ಸಲಹೆ
Team Udayavani, Jun 4, 2019, 12:20 PM IST
ಹುಬ್ಬಳ್ಳಿ: ರಂಜಾನ್ ಹಬ್ಬದ ಸೌಹಾರ್ದ ಸಭೆಯನ್ನುದ್ದೇಶಿಸಿ ಡಿಸಿಪಿ ನಾಗೇಶ ಮಾತನಾಡಿದರು.
ಹುಬ್ಬಳ್ಳಿ: ಹಬ್ಬವನ್ನು ಶಾಂತಿ, ಸುವ್ಯವಸ್ಥೆಯಿಂದ ಆಚರಿಸಲು ಪೊಲೀಸ್ ಇಲಾಖೆ ಎಲ್ಲ ಸಹಕಾರ ನೀಡುತ್ತದೆ ಎಂದು ಡಿಸಿಪಿ ನಾಗೇಶ ಡಿ.ಎಲ್. ಹೇಳಿದರು.
ಕಾರವಾರ ರಸ್ತೆ ಹಳೆಯ ಸಿಎಆರ್ ಮೈದಾನದ ಭವನದಲ್ಲಿ ಹು-ಧಾ ಪೊಲೀಸ್ ಕಮಿಷನರೇಟ್ನ ಉತ್ತರ ಉಪವಿಭಾಗ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಂಜಾನ್ ಹಬ್ಬದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಂಜಾನ್ ಹಬ್ಬದ ನಿಮಿತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಿರ್ಭಯದಿಂದ ಅದ್ಧೂರಿಯಾಗಿ ಶಾಂತಿಯುತವಾಗಿ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಎಲ್ಲ ರೀತಿ ಸನ್ನದ್ಧವಾಗಿದೆ. ಆದರೆ ಶಬ್ಬೆಬಾರಾತ್ ವೇಳೆ ಕೆಲ ಯುವಕರು ಕರ್ಕಶ ಶಬ್ದದೊಂದಿಗೆ ಬೈಕ್ ವ್ಹೀಲಿಂಗ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದು, ಈ ಬಗ್ಗೆ ಸಮಾಜದ ಹಿರಿಯರು, ಮುಖಂಡರು ಅವರಿಗೆ ಬುದ್ಧಿವಾದ ಹೇಳಬೇಕು. ಹಬ್ಬದ ಸಂದರ್ಭಗಳಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸುವುದು ಸರಿ ಎನಿಸುವುದಿಲ್ಲ ಎಂದರು. ಎಸಿಪಿ ಅನಿಲಕುಮಾರ ಭೂಮರಡ್ಡಿ ಮಾತನಾಡಿ, ಅವಳಿ ನಗರದ ಬಗ್ಗೆ ಹೊರಗಿನ ಜನರಲ್ಲಿ ಮೊದಲಿದ್ದ ಭಯದ ವಾತಾವರಣ ಸಂಪೂರ್ಣ ತಿಳಿಯಾಗಿದೆ. ಎಲ್ಲ ಸಮುದಾಯದವರು ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ ಹಬ್ಬಗಳನ್ನು ಆಚರಿಸುತ್ತ ಬರುತ್ತಿದ್ದಾರೆ. ಸಹಬಾಳ್ವೆ ನಡೆದುಕೊಂಡು ಹೋಗುತ್ತಿದ್ದಾರೆ. ಶಾಂತಿ, ನೆಮ್ಮದಿಯ ನಗರ ಎಂಬುದನ್ನು ತೋರಿಸಿಕೊಟ್ಟಿದ್ದೀರಿ ಎಂದು ಹೇಳಿದರು.
ಪಾಲಿಕೆ ಸಹಾಯಕ ಆಯುಕ್ತ ಎಸ್.ಸಿ. ಬೇವೂರ, ಅಪರ ತಹಶೀಲ್ದಾರ್ ವಿಜಯಕುಮಾರ ಕಟಕೋಳ, ಮೊಹಮ್ಮದ ಯುಸೂಫ ಸವಣೂರ, ಉಸ್ಮಾನಗನಿ, ವಿಠಲ ಲದವಾ, ಶೇಷಪ್ಪ ಜಿತೂರಿ ಇನ್ನಿತರರು ಮಾತನಾಡಿದರು. ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ