ವಾಹನ ಚಾಲಕರ ಹಸಿವು ನೀಗಿಸಿದ ಪೊಲೀಸರು
Team Udayavani, May 19, 2021, 2:03 PM IST
ಹುಬ್ಬಳ್ಳಿ: ಕೊರೊನಾ ಲೌಕ್ಡೌನ್ ಸಂದರ್ಭದಲ್ಲಿ ಗ್ರಾಮೀಣ ಠಾಣೆ ಪೊಲೀಸರು ಹಸಿದವರಿಗೆ ಊಟ ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ-4ರ ಬೆಂಗಳೂರು ಮಾರ್ಗದಲ್ಲಿ ಕರ್ತವ್ಯದಲ್ಲಿರುವ ಗ್ರಾಮೀಣ ಪೊಲೀಸರು ಸಂಚರಿಸುವ ವಾಹನಗಳನ್ನು ನಿಲ್ಲಿಸಿ, ಅವಶ್ಯವುಳ್ಳ ಚಾಲಕರು ಮತ್ತು ಕ್ಲೀನರ್, ಹಮಾಲರಿಗೆ ಅನ್ನ ಮತ್ತು ಮೊಟ್ಟೆಯ ಪೊಟ್ಟಣಗಳನ್ನು ಕೊಟ್ಟು ಹಸಿವು ನೀಗಿಸುತ್ತಿದ್ದಾರೆ. ಹೆದ್ದಾರಿಗಳಲ್ಲಿ ಬಹುತೇಕ ಹೋಟೆಲ್, ಅಂಗಡಿಗಳು ಬಂದ್ ಇವೆ. ಇದರಿಂದ ಈ ಮಾರ್ಗಗಳಲ್ಲಿ ಸಂಚರಿಸುವ ವಾಹನ ಸವಾರರು ಹಸಿದುಕೊಂಡೇ ಸಂಚಾರ ಮಾಡಬೇಕಾಗಿದೆ. ಇದನ್ನು ಅರಿತ ಮಾಲತೇಶ ಬಾರ್ಕಿ ಅವರು ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ರಮೇಶ ಗೋಕಾಕ ಮಾರ್ಗದರ್ಶನದಲ್ಲಿ ಅಡುಗೆ ವ್ಯವಸ್ಥೆ ಮಾಡಿದ್ದರು.
ಎಎಸ್ಐ ಡಿ.ಎನ್. ನೀಲಮ್ಮನವರ, ಬಸವರಾಜ ಹುಬ್ಬಳ್ಳಿ, ಚಂದ್ರು, ದೀಪಕ, ಭರಮಣ್ಣ ಹರಿಜನ ಇವರೆಲ್ಲರ ಸಹಕಾರದಲ್ಲಿ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ವಾಹನಗಳ ಚಾಲಕರು, ಸಹಾಯಕರಿಗೆ ಊಟ ಕೊಟ್ಟು ಮಾನವೀಯ ಕಾರ್ಯ ಮಾಡುತ್ತಿದ್ದಾರೆ. ಇವರಿಗೆ ಎನ್ಎಚ್ಎಐ ಸಾದಿಕ್ ಮಿಶ್ರಿಕೋಟಿ ಹಾಗೂ ಸಿಬ್ಬಂದಿ ಕೈ ಜೋಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು