ಪೊಲೀಸನ ಮಗನೇ ಕಳವಿನ ಸೂತ್ರಧಾರಿ!

ಸೂತ್ರಧಾರಿ! | ಗೋವಾ ಎಎಸ್‌ಐ ಪುತ್ರ ಸೇರಿ ಇಬ್ಬರ ಬಂಧನ | 4.15 ಲಕ್ಷ ಮೌಲ್ಯದ ಸ್ವತ್ತು ವಶ

Team Udayavani, May 1, 2019, 10:57 AM IST

hubali-4-tdy..

ಹುಬ್ಬಳ್ಳಿ: ವಿದ್ಯಾನಗರ ಪೊಲೀಸರು ಅಂತಾರಾಜ್ಯ ಸರಗಳ್ಳರನ್ನು ಕಳವಿನ ಚಿನ್ನದಸರ, ಬೈಕ್‌ ಸಮೇತ ಬಂಧಿಸಿದರು.

ಹುಬ್ಬಳ್ಳಿ: ಮಹಿಳೆಯೊಬ್ಬರ ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಅಂತಾರಾಜ್ಯ ಕಳ್ಳರಿಬ್ಬರನ್ನು ವಿದ್ಯಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರಿಂದ 4.15ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಹಾನಗರ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೋವಾದ ಪರಿವರಿಯಂ ಮೂಲದ ಇಲ್ಲಿನ ಉಣಕಲ್ಲ ಸಾಯಿನಗರ ನಿವಾಸಿ ಗೌರೇಶ ಆರ್‌. ಕೇರಕರ ಹಾಗೂ ಹಳೇಹುಬ್ಬಳ್ಳಿ ಚನ್ನಪೇಟೆ ಲತ್ತಿಪೇಟೆಯ ಕುಮಾರ ಎಂ. ಸುಣಗಾರ ಬಂಧಿತರಾಗಿದ್ದಾರೆ ಎಂದರು.

ಗೌರೇಶ ಮೇಲೆ ಗೋವಾದಲ್ಲಿ 14 ಸರಗಳ್ಳತನ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ 3 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಕಾರಾಗೃಹ ಶಿಕ್ಷೆ ಕೂಡ ಆಗಿದೆ. ಈತ ಗೋವಾ ಪೊಲೀಸ್‌ ಇಲಾಖೆಯಲ್ಲಿನ ಎಎಸ್‌ಐ ಮಗನಾಗಿದ್ದು, ಅವರು ಇವನನ್ನು ಮನೆಯಿಂದ ಹೊರಗೆ ಹಾಕಿದ್ದಾರೆ. ಹೀಗಾಗಿ ನಗರದಲ್ಲಿ ವಾಸಿಸುತ್ತಿದ್ದ. ಆಟೋ ರಿಕ್ಷಾ ಚಾಲಕನಾದ ಕುಮಾರ ಸುಣಗಾರ ಗೋವಾಕ್ಕೆ ಹೋಗಿದ್ದಾಗ ಗೌರೇಶನ ಪರಿಚಯವಾಗಿತ್ತು. ಅಂದಿನಿಂದ ಇಬ್ಬರು ಕೂಡಿ ಸರಗಳ್ಳತನ ಮಾಡುತ್ತಿದ್ದರು ಎಂದಿ ವಿವರ ನೀಡಿದರು.

ಬಂಧಿತರಿಂದ ನಗರದ ವಿದ್ಯಾನಗರ, ಹಳೇಹುಬ್ಬಳ್ಳಿ, ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನದ ಒಟ್ಟು ನಾಲ್ಕು ಪ್ರಕರಣ ಭೇದಿಸಿ, ಅಂದಾಜು 4,15,500 ರೂ. ಮೌಲ್ಯದ 100 ಗ್ರಾಂ ತೂಕವುಳ್ಳ ನಾಲ್ಕು ಚಿನ್ನದ ಸರಗಳು, ಕಳ್ಳತನಕ್ಕೆ ಬಳಸುತ್ತಿದ್ದ ಬೈಕ್‌, ಎರಡು ಮೊಬೈಲ್, ಖಾರದಪುಡಿ, ನೇಲ್ ಕಟರ್‌ ವಶಪಡಿಸಿಕೊಳ್ಳಲಾಗಿದೆ. ಸರಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ಮೂವರು ಪೇದೆಗಳಿಗೆ ತಲಾ 5 ಸಾವಿರ ಹಾಗೂ ತಂಡಕ್ಕೆ 5 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ನಾಗೇಶ ಡಿ.ಎಲ್., ಎಸಿಪಿ ಶ್ರೀಕಾಂತ ಕಟ್ಟಿಮನಿ, ಇನ್ಸ್‌ಪೆಕ್ಟರ್‌ ಆನಂದ ಒನಕುದ್ರೆ ಮೊದಲಾದವರಿದ್ದರು.

ನಾಲ್ಕು ಪ್ರಕರಣಕ್ಕೆ ಮೋಕ್ಷ:

ಎಚ್‌ಡಿಬಿಆರ್‌ಟಿಎಸ್‌ ಮಾರ್ಗದಲ್ಲಿ ಚಿಗರಿ ಬಸ್‌ ಹಾಗೂ ಆಂಬ್ಯುಲೆನ್ಸ್‌ ಸೇರಿದಂತೆ ಅಗತ್ಯ ವಾಹನ ಹೊರತುಪಡಿಸಿ ಇನ್ನಿತರೆ ವಾಹನಗಳು ಓಡಾಡುವಂತಿಲ್ಲ. ಅಂತಹ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಹಗಲು ಹೊತ್ತಿನಲ್ಲಿ ಲಾರಿಗಳ ನಗರ ಪ್ರವೇಶ ನಿರ್ಬಂಧಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ. ಆಟೋ ರಿಕ್ಷಾಗಳಿಗೆ ಮೀಟರ್‌ ಕಡ್ಡಾಯಗೊಳಿಸಲಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಇದನ್ನು ಕಾರ್ಯಗತಗೊಳಿಸಲು ಆಗಿರಲಿಲ್ಲ. ಈ ಕುರಿತು ಸಂಚಾರ ವಿಭಾಗದ ಡಿಸಿಪಿ, ಎಸಿಪಿ ಅವರೊಂದಿಗೆ ಚರ್ಚಿಸಿ ವಾರದೊಳಗೆ ಜಾರಿಗೊಳಿಸಲಾಗುವುದು. –ಎಂ.ಎನ್‌. ನಾಗರಾಜ, ಹು-ಧಾ ಪೊಲೀಸ್‌ ಆಯುಕ್ತ

ಕಾರ್ಯಾಚರಣೆ ನಡೆದಿದ್ದು ಹೇಗೆ?:

ಬಂಧಿತರು ನಗರದ ವಿವಿಧೆಡೆ ವಾಯುವಿಹಾರ ಮಾಡುತ್ತಿದ್ದ ವೃದ್ಧ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದರು. ಮಂಗಳವಾರ ಬೆಳಗ್ಗೆ ಶಿರೂರ ಪಾರ್ಕ್‌ನಲ್ಲಿ ಮಹಿಳೆಯೊಬ್ಬರ ಸರ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಗಸ್ತಿನಲ್ಲಿದ್ದ ವಿದ್ಯಾನಗರ ಠಾಣೆ ಇನ್ಸ್‌ಪೆಕ್ಟರ್‌ ಆನಂದ ಒಣಕುದರೆ, ಪೇದೆಗಳಾದ ರಮೇಶ ಹಲ್ಲೆ, ಬಿ.ಎಸ್‌. ಹಚ್ಚಡದ, ಆರ್‌.ಎಂ. ಹೊರಟ್ಟಿ ಖದೀಮರನ್ನು ಬೆನ್ನಟ್ಟಿ ಹಿಡಿಯಲು ಮುಂದಾಗಿದ್ದರು. ಆಗ ಕಳ್ಳರು ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ, ನೇಲ್ ಕಟರ್‌ನಲ್ಲಿದ್ದ ಸಣ್ಣ ಚಾಕುನಿಂದ ಹೆದರಿಸಿ ಪರಾರಿಯಾಗಲು ಯತ್ನಿಸಿದರು. ಆದರೂ ಸಿಬ್ಬಂದಿ ಎದೆಗುಂದದೆ ಇಬ್ಬರನ್ನು ರಾಜೀವನಗರದಲ್ಲಿ ಬೈಕ್‌ ಸಮೇತ ಬಂಧಿಸಿದರು.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.